ಮತ್ತೆ ಬಂದಿದೆ “ಉದಯವಾಣಿ’ಯ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ


Team Udayavani, Oct 18, 2022, 1:20 PM IST

ಮತ್ತೆ ಬಂದಿದೆ “ಉದಯವಾಣಿ’ಯ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

ಮಣಿಪಾಲ : ಕರಾವಳಿ ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಮಕ್ಕಳ ಚಿತ್ರಕಲಾ ಸ್ಪರ್ಧೆ “ಚಿಣ್ಣರ ಬಣ್ಣ’ ಮತ್ತೆ ಆರಂಭವಾಗಲಿದೆ. ಉದಯವಾಣಿ ದಿನಪತ್ರಿಕೆಯು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಲವಾರು ವರ್ಷಗಳಿಂದ ಆಯೋಜಿಸಿ ಕೊಂಡು ಬರುತ್ತಿರುವ ಈ ಸ್ಪರ್ಧೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು, ಬಹುಮಾನ ಪಡೆದಿದ್ದಾರೆ. ಈ ಸ್ಪರ್ಧೆಯು ಉಡುಪಿಯ ಆರ್ಟಿಸ್ಟ್‌ಸ್‌ ಫೋರಂ ಸಹಯೋಗದೊಂದಿಗೆ ನಡೆದುಕೊಂಡು ಬರುತ್ತಿದೆ.

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಮತ್ತು ಪಾಲಕ ಪೋಷಕರ ಅನುಕೂಲಕ್ಕೆ ತಕ್ಕಂತೆ ಉಭಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಎರಡೂ ಜಿಲ್ಲೆಗಳ 15 ತಾಲೂಕುಗಳಲ್ಲಿ ಹಮ್ಮಿಕೊಂಡಿದ್ದು, ಮೊದಲ ಹಂತದ ತಾಲೂಕು ಮಟ್ಟದ ಸ್ಪರ್ಧೆಯು ಅ. 22ರಿಂದ 30ರ ತನಕ ನಡೆಯಲಿದೆ.

ಮೂರು ವಿಭಾಗ
1ರಿಂದ 3, 4ರಿಂದ 7, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ 3 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬೇಕು. ಮೊದಲೆರಡು ವಿಭಾಗಗಳಲ್ಲಿ ಐಚ್ಛಿಕ ವಿಷಯಗಳ ಮೇಲೆ ಚಿತ್ರ ಬಿಡಿಸಬಹುದು. ಕೊನೆಯ ವಿಭಾಗಕ್ಕೆ ಸ್ಥಳದಲ್ಲಿಯೇ ವಿಷಯ ನೀಡಲಾಗುವುದು. ಡ್ರಾಯಿಂಗ್‌ ಶೀಟ್‌ ಒದಗಿಸಲಾಗುವುದು. ಉಳಿದ ಪರಿಕರಗಳನ್ನು ವಿದ್ಯಾರ್ಥಿಗಳೇ ತರಬೇಕು. ಯಾವ ತಾಲೂಕಿನ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆಯೋ ಅದೇ ತಾಲೂಕಿನಿಂದ ಸ್ಪರ್ಧೆಗೆ ಭಾಗವಹಿಸಬೇಕು. ಪ್ರತೀ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಹಾಗೂ ಐದು ಸಮಾಧಾನಕರ ಬಹುಮಾನಗಳಿವೆ.

ತಾಲೂಕಿನ ವಿಜೇತರಿಗೆ ಜಿಲ್ಲಾ ಮಟ್ಟದ ಸ್ಪರ್ಧೆ
ಪ್ರತೀ ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳನ್ನು ಉಭಯ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಹ್ವಾನಿಸಲಾಗುವುದು. ಎಲ್ಲ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ಮತ್ತು ವಿಶೇಷ ಉಡುಗೊರೆ ನೀಡಲಾಗುವುದು. ಬಹುಮಾನ ವಿಜೇತ ಚಿತ್ರಗಳನ್ನು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿಸಲಾಗುವುದು. ಉಭಯ ಜಿಲ್ಲಾ ಮಟ್ಟದ ಅಂತಿಮ ಸ್ಪರ್ಧೆಯು ನ. 6ರಂದು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಹೈಸ್ಕೂಲ್‌ನಲ್ಲಿ ನಡೆಯಲಿದ್ದು ಸ್ಪರ್ಧೆಯ ಅನಂತರ ತಾಲೂಕು ಮಟ್ಟದ ಹಾಗೂ ಉಭಯ ಜಿಲ್ಲಾ ಮಟ್ಟದ ಬಹುಮಾನ ವಿತರಿಸಲಾಗುವುದು.

ಅ. 22 ಅಪರಾಹ್ನ 3 ರಿಂದ 5
ಬೆಳ್ತಂಗಡಿ ತಾಲೂಕು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನ ಸಂತೆಕಟ್ಟೆ ಬೆಳ್ತಂಗಡಿ
ಬಂಟ್ವಾಳ ತಾಲೂಕು : ತಿರುಮಲ ವೆಂಕಟರಮಣ ಕಲ್ಯಾಣ ಮಂಟಪ ಬಂಟ್ವಾಳ
ಬೈಂದೂರು ತಾಲೂಕು : ದೇವಕಿ ಆರ್‌. ಸಭಾಂಗಣ, ಹೊಟೇಲ್‌ ಪರಿಚಯ, ಉಪ್ಪುಂದ
ಕುಂದಾಪುರ ತಾಲೂಕು : ಭಂಡಾರ್‌ಕಾರ್ಸ್‌ ಕಾಲೇಜು, ಕುಂದಾಪುರ

ಅ. 23 ಬೆಳಗ್ಗೆ 10 ರಿಂದ 12
ಸುಳ್ಯ ತಾಲೂಕು : ಕೆವಿಜಿ ಕಾನೂನು ಮಹಾವಿದ್ಯಾಲಯ (ಚೆನ್ನಕೇಶವ ದೇವಸ್ಥಾನದ ಬಳಿ)
ಕಡಬ ತಾಲೂಕು : ಸೈಂಟ್‌ ಜೋಕಿಂ ವಿದ್ಯಾ ಸಂಸ್ಥೆ ಕಡಬ
ಹೆಬ್ರಿ ತಾಲೂಕು : ಎಸ್‌ಆರ್‌ ಪಬ್ಲಿಕ್‌ ಸ್ಕೂಲ್‌,ಹೆಬ್ರಿ
ಕಾರ್ಕಳ ತಾಲೂಕು : ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು,

ಅ. 23 ಅಪರಾಹ್ನ 3ರಿಂದ 5
ಬ್ರಹ್ಮಾವರ ತಾಲೂಕು : ಬಂಟರ ಭವನ, ಬ್ರಹ್ಮಾವರ ಬಸ್‌ ನಿಲ್ದಾಣದ ಎದುರು
ಕಾಪು ತಾಲೂಕು : ಸಭಾಭವನ, ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಕಾಪು
ಪುತ್ತೂರು ತಾಲೂಕು : ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ

ಅ. 29 ಅಪರಾಹ್ನ 3
ಮಂಗಳೂರು ತಾಲೂಕು : ಕೆನರಾ ಪ್ರೌಢಶಾಲೆ, ಉರ್ವ

ಅ. 30 ಬೆಳಗ್ಗೆ 10 ರಿಂದ 12
ಮೂಲ್ಕಿ ತಾಲೂಕು : ವ್ಯಾಸ ಮಹರ್ಷಿ ಪ್ರೌಢಶಾಲೆ ಮೂಲ್ಕಿ
ಮೂಡುಬಿದಿರೆ ತಾಲೂಕು : ಆಳ್ವಾಸ್‌ ಶಿಕ್ಷಣ ಸಂಸ್ಥೆ ವಿದ್ಯಾಗಿರಿ

ಅ. 30 ಅಪರಾಹ್ನ 3 ರಿಂದ 5
ಉಳ್ಳಾಲ ತಾಲೂಕು : ವಿದ್ಯಾರತ್ನಾ ಆಂಗ್ಲಮಾಧ್ಯಮ ಶಾಲೆ, ದೇರಳಕಟ್ಟೆ
ಉಡುಪಿ ತಾಲೂಕು : ಶ್ರೀ ಮಹಾಕಾಳಿ ಜನಾರ್ದನ ದೇವಸ್ಥಾನ, ಅಂಬಲಪಾಡಿ

ಟಾಪ್ ನ್ಯೂಸ್

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.