ಕಿಸಾನ್ ಸಮ್ಮಾನ್ ಸಮೇಳನ ವೀಕ್ಷಿಸಿದ ರೈತ ಬಾಂಧವರು
ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.
Team Udayavani, Oct 18, 2022, 5:46 PM IST
ದಾವಣಗೆರೆ: ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಆಯೋಜನೆಗೊಂಡಿದ್ದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮೇಳನ ಉದ್ಘಾಟನೆಯನ್ನು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ನೇರ ಪ್ರಸಾರದ ಮೂಲಕ ರೈತರಿಗೆ ತೋರಿಸಲಾಯಿತು.
ದಾವಣಗೆರೆಯ ವಿವಿಧ ಗ್ರಾಮಗಳಿಂದ 150ಕ್ಕೂ ಹೆಚ್ಚು ರೈತರ ಹಾಗೂ ಸರ್ಕಾರಿ ಪದವಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ, ವೀಕ್ಷಣೆ ಮಾಡಿದರು. ಇಂದು ಪ್ರಧಾನಮಂತ್ರಿಗಳು ದೇಶದ ವಿವಿಧ ಭಾಗಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಸಾಮಾನ್ಯ ಸೇವಾ ಕೇಂದ್ರಗಳಿಂದ ಒಂದು ಕೋಟಿಗೂ ಹೆಚ್ಚು ರೈತರಿಗೆ ವಿವಿಧ ರೈತ ಕಲ್ಯಾಣ ಯೋಜನೆಗಳನ್ನು ಅನಾವರಣಗೊಳಿಸಿದರು.
ಅವುಗಳಲ್ಲಿ ಮುಖ್ಯವಾಗಿ ರೈತರಿಗೆ 12ನೇ ಆವರ್ತದ 16,000ರೂ. ಕೋಟೆ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ, ಕೃಷಿ ಸ್ಟಾರ್ಟ್ ಅಪ್ ಯೋಜನೆ ಉದ್ಘಾಟನೆ, 600ಪ್ರಧಾನಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಉದ್ಘಾಟನೆ, ಒಂದು ದೇಶ ಒಂದು ಗೊಬ್ಬರ ಯೋಜನೆ ಹಾಗೂ ಅಂತಾರಾಷ್ಟ್ರೀಯ ರಸಗೊಬ್ಬರ ಈ ಪ್ರತಿಕೆ ಬಿಡುಗಡೆ ಅನಾವರಣಗೊಳಿಸಲಾಯಿತು. ತರಳಬಾಳು ಕೇಂದ್ರದಲ್ಲಿ ಈ ಕಾರ್ಯಕ್ರಮಕ್ಕೂ ಮುನ್ನ 2022ರ ವಿಶ್ವ ಆಹಾರ ದಿನ ಆಚರಿಸಲಾಯಿತು.
ಕೃಷಿ ಉಪನಿದೇರ್ಶಕ ತಿಪ್ಪೇಸ್ವಾಮಿ ಆರ್. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ, ದೇಶದಲ್ಲಿ ಸುರಕ್ಷಿತ ಮತ್ತು ಸ್ವಚ್ಛ ಆಹಾರ ಉತ್ಪಾದನೆಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಲು ಕರೆ ನೀಡಿದರು.
ಸಭೆಯ ಅಧ್ಯಕ್ಷತೆವಹಿಸಿದ್ದ ಡಾ| ಜಯದೇವಪ್ಪ ಜಿ.ಕೆ., ವಿಶ್ವ ಆಹಾರ ದಿನಾಚರಣೆ ಹಾಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಡಾ| ಅವಿನಾಶ್ ಟಿ.ಜಿ. ಜೈವಿಕ ಗೊಬ್ಬರಗಳು ಮತ್ತು ಪೀಡೆನಾಶಕಗಳ ಕುರಿತು ಮಾಹಿತಿ ನೀಡಿದರು. ಮಣ್ಣು ವಿಜ್ಞಾನಿ ಹೆಚ್.ಎಂ. ಸಣ್ಣಗೌಡರ ಮಣ್ಣು ಆರೋಗ್ಯ ಮತ್ತು ನಮ್ಮ ಆರೋಗ್ಯ ವಿಚಾರವಾಗಿ ರೈತರಿಗೆ ಉಪನ್ಯಾಸ ನೀಡಿದರು. ರೈತ ಮುಖಂಡರಾದ ಆವರಗೆರ ರುದ್ರಮುನಿ ಮತ್ತು ಕುಂದೂರು ಮಂಜಪ್ಪನವರು ಭಾಗವಹಿಸಿ ತಮ್ಮ ಕೃಷಿ ಅನುಭವಗಳನ್ನು ಹಂಚಿಕೊಂಡರು.
ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿಯೂ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಉದ್ಘಾಟನೆ, ಒಂದು ರಾಷ್ಟ್ರ, ಒಂದು ರಸಗೊಬ್ಬರ ಪ್ರಾರಂಭ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯವರು ಕಾರ್ಯಕ್ರಮ ಉದ್ಘಾಟಿಸುವುದನ್ನು ನೇರ ಪ್ರಸಾರದ ಮೂಲಕ ರೈತರಿಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಇಫೋR ಕ್ಷೇತ್ರ ಅಧಿಕಾರಿ ರಾಜೇಂದ್ರಪ್ರಸಾದ್ ಎಸ್., ಕೃಷಿ ಅಧಿಕಾರಿ ಚಂದ್ರಪ್ಪ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀದೇವಿ, ಪಾಲಾಕ್ಷಪ್ಪ, ಡಿ.ಎಂ. ಪ್ರಕಾಶ್ ಇನ್ನಿತರರು ಕಾರ್ಯಕ್ರಮದಲ್ಲಿದ್ದರು. ಕುಕ್ಕುವಾಡ ಮತ್ತು ಸುತ್ತ ಮುತ್ತಲಿನ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
Davanagere: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ತಡೆದವರೇ ಯತ್ನಾಳ್: ರೇಣುಕಾಚಾರ್ಯ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hiriyur: ಹೆದ್ದಾರಿಗೆ ಮಣ್ಣು ಕುಸಿದು ಹತ್ತು ಕಿ.ಮೀ ಟ್ರಾಫಿಕ್ ಜಾಮ್
Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.