![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 20, 2022, 9:50 AM IST
ಮೆಲ್ಬರ್ನ್: ಇನ್ನೇನೋ ಟಿ20 ವಿಶ್ವಕಪ್ ಮುಖ್ಯಹಂತದ ಪಂದ್ಯಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಗಾಯಾಳುಗಳ ಸಂಖ್ಯೆ ಏರಿಕೆಯಾಗುತ್ತಿದೆ. ದುಷ್ಮಂತ ಚಮೀರ ಮತ್ತು ರೀಸ್ ಟಾಪ್ಲಿ ಬಳಿಕ ಇದೀಗ ಆತಿಥೇಯ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಗಾಯಗೊಂಡಿದ್ದಾರೆ.
ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ ಗಾಲ್ಫ್ ಕೋರ್ಸ್ನಲ್ಲಿ ಗಾಯಗೊಂಡಿದ್ದಾರೆ. ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿರುವ 27 ವರ್ಷದ ಇಂಗ್ಲೀಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಐಸಿಸಿ ಟಿ 20 ವಿಶ್ವಕಪ್ 2022 ಸೂಪರ್-12 ಆರಂಭಿಕ ಪಂದ್ಯಕ್ಕೆ ಕೇವಲ ಮೂರು ದಿನಗಳ ಮೊದಲು ಕಾಂಗರೂ ತಂಡಕ್ಕೆ ಈ ಹಿನ್ನಡೆ ಎದುರಾಗಿದೆ.
ಇಂಗ್ಲಿಸ್ ಈಗ ಟಿ20 ವಿಶ್ವಕಪ್ನಿಂದ ಹೊರಗುಳಿದಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಆಸೀಸ್ ಶೀಘ್ರದಲ್ಲೇ ಬದಲಿ ಆಟಗಾರನನ್ನು ಹೆಸರಿಸಲಿದೆ.
ಇದನ್ನೂ ಓದಿ:ಮತ್ತೆ ಬೆಂಗಳೂರು ಕಾಡಿದ ಭಾರೀ ಮಳೆ; ಹಲವು ವಾಹನಗಳು ಜಖಂ
ಆಸೀಸ್ ತಂಡವನ್ನು ಸೇರುವ ಮೊದಲು ಅವರು ಗಾಲ್ಫ್ ಕೋರ್ಸ್ ನಲ್ಲಿ ಗಾಲ್ಫ್ ಆಡುತ್ತಿದ್ದರು. ಆಸ್ಟ್ರೇಲಿಯಾದ ಕೋಚ್ ಆಂಡ್ರ್ಯೂ ಮೆಕ್ಡೊನಾಲ್ಡ್ ಅವರು ಇಂತಹ ಗಾಯವನ್ನು ‘ಎಂದಿಗೂ ನೋಡಿಲ್ಲ’ ಎಂದು ಹೇಳಿದರು.
Breaking: Josh Inglis out of World Cup per @GerardWhateley. Aus to name replacement
— Ben Horne (@BenHorne8) October 19, 2022
ಟಿ20 ವಿಶ್ವಕಪ್ ಪಂದ್ಯಾವಳಿಗೆ ಅಣಿಯಾಗುತ್ತಿರುವ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳಿಗೆ ಬೌಲಿಂಗ್ ವಿಭಾಗದಲ್ಲಿ ಸಂಕಟ ಎದುರಾಗಿದೆ. ವೇಗಿಗಳಾದ ರೀಸ್ ಟಾಪ್ಲಿ ಮತ್ತು ದುಷ್ಮಂತ ಚಮೀರ ಗಾಯಾಳಾಗಿ ಕೂಟದಿಂದ ಹೊರಬಿದ್ದಿದ್ದಾರೆ. ರೀಸ್ ಟಾಪ್ಲಿ ಬ್ರಿಸ್ಬೇನ್ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಎಡಗಾಲಿನ ಪಾದದ ನೋವಿಗೆ ಸಿಲುಕಿದ್ದರು. ಇವರ ಸ್ಥಾನಕ್ಕೆ ಟೈಮಲ್ ಮಿಲ್ಸ್ ಅವರನ್ನು ಸೇರಿಸಿಕೊಳ್ಳಲಾಗಿದೆ. ದುಷ್ಮಂತ ಚಮೀರ ಯುಎಇ ವಿರುದ್ಧದ ಅರ್ಹತಾ ಪಂದ್ಯದ ಕೊನೆಯಲ್ಲಿ ಗಾಯಾಳಾಗಿ ಮೈದಾನದಿಂದ ಹೊರನಡೆದಿದ್ದರು. ಇವರ ಸ್ಥಾನವೀಗ ಕಸುನ್ ರಜಿತ ಪಾಲಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.