![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 21, 2022, 6:57 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ತಂತ್ರಾಂಶ ಹಳೆಯದಾಗಿರುವ ಪರಿಣಾಮ ಯುಜಿ ನೀಟ್ ವಿದ್ಯಾರ್ಥಿಗಳ ನೋಂದಣಿಗೆ ಸಮಸ್ಯೆಯಾಗಿದೆ. ಸದ್ಯ ತಂತ್ರಾಂಶವನ್ನು ಉನ್ನತೀಕರಿಸಲಾಗುತ್ತಿದೆ. ಸದ್ಯದಲ್ಲಿಯೇ ಸಮಸ್ಯೆ ಬಗೆಹರಿಸುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸ್ಪಷ್ಟಪಡಿಸಿದರು.
ಯುಜಿ ನೀಟ್ ಕೌನ್ಸೆಲಿಂಗ್ ಸಮಸ್ಯೆ ಕುರಿತು ಗುರುವಾರ ವರ್ಚುಯಲ್ ವೇದಿಕೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಇಎ ತಂತ್ರಾಂಶವು 12 ವರ್ಷ ಹಳೆಯದಾಗಿದೆ. ಅದನ್ನು ಅಪ್ಡೇಟ್ ಮಾಡಲಾಗುತ್ತಿದೆ ಎಂದು ಹೇಳಿದರು.
ಯುಜಿ ನೀಟ್ ವಿದ್ಯಾರ್ಥಿಗಳ ಸಮಸ್ಯೆಗೆ ತಾಂತ್ರಿಕ ದೋಷ ಕಾರಣವಲ್ಲ. ಸಾಫ್ಟ್ವೇರ್ ಅಥವಾ ಅಪ್ಲಿಕೇಷನ್ ಸಮಸ್ಯೆ ಕೂಡ ಆಗಿಲ್ಲ. ದೊಡ್ಡ ಸಂಖ್ಯೆಯ ಮೀಸಲಾತಿಗಳು ಹಾಗೂ ಹೆಚ್ಚಿನ ಷರತ್ತುಗಳು ಇರುವುದರಿಂದ ಸಮಸ್ಯೆ ಜಟಿಲವಾಗಿದೆ. ಈ ಸಮಸ್ಯೆಯನ್ನು ಸಿಬ್ಬಂದಿ ಪತ್ತೆ ಹಚ್ಚಿದ್ದು, ಶೀಘ್ರ ಪರಿಹಾರ ಕಂಡುಕೊಳ್ಳುತ್ತೇವೆ. ನೋಂದಣಿ ಪ್ರಕ್ರಿಯೆಯನ್ನು ಅ.25ರ ವರೆಗೂ ವಿಸ್ತರಿಸಲಾಗಿದೆ ಎಂದರು.
ಸದ್ಯ ಸಾಫ್ಟ್ವೇರ್ ಅಪ್ಡೇಟ್ ಆಗುತ್ತಿದ್ದು, ಸಮಸ್ಯೆ ಬಗೆಹರಿಯುತ್ತಿದೆ. ನಿಗದಿತ ವೇಳಾಪಟ್ಟಿಯಂತೆಯೇ ಕೆಇಎ ಕಾರ್ಯನಿರ್ವಹಿಸಲಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಸುಮಾರು 25 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಕರೆ ಸ್ವೀಕರಿಸಲು ತಿಂಗಳಲ್ಲಿ ಪೋರ್ಟಲ್ ಆರಂಭ :
ಪರೀಕ್ಷಾ ಪ್ರಾಧಿಕಾರವು ಸಿಇಟಿ, ನೀಟ್ ಪ್ರವೇಶ ಸೇರಿ ಇನ್ನಿತರ ನೇಮಕಾತಿ ಪ್ರಕ್ರಿಯೆ ಕೂಡ ನಡೆಸುವುದರಿಂದ ಪ್ರತಿ ದಿನ ಸರಾಸರಿ 3ರಿಂದ 4 ಸಾವಿರ ಕರೆಗಳು ಬರಲಿವೆ. ಇಷ್ಟು ದೊಡ್ಡ ಸಂಖ್ಯೆಯ ಕರೆಗಳನ್ನು ಸ್ವೀಕರಿಸಲು ಸಿಬ್ಬಂದಿ ಕೊರತೆ ಎದುರಾಗಲಿದೆ. ಆದ್ದರಿಂದ ಕರೆ ಸ್ವೀಕರಿಸಲು ಆನ್ಲೈನ್ ಪೋರ್ಟಲ್ ಆರಂಭಿಸಲಾಗುತ್ತಿದೆ. ಒಂದು ತಿಂಗಳಿನಲ್ಲಿ ಪೋರ್ಟಲ್ ಆರಂಭಿಸುವ ಸಾಧ್ಯತೆಗಳಿವೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದರು.
ನೀಟ್ ನೋಂದಣಿ ಸಮಸ್ಯೆಯಿಂದ ಬುಧವಾರ ಸುಮಾರು 40 ಸಾವಿರ ಕರೆಗಳು ಬಂದಿವೆ. ಇಷ್ಟು ದೊಡ್ಡ ಸಂಖ್ಯೆಯ ಕರೆಗಳನ್ನು ಸ್ವೀಕರಿಸಲು ಕನಿಷ್ಠ 300 ಸಿಬ್ಬಂದಿಯಾದರೂ ಕೆಲಸ ನಿರ್ವಹಿಸಬೇಕಾಗುತ್ತದೆ ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.