ಶಂಕಿತ ಉಗ್ರನಿಗೆ ನಕಲಿ ಶ್ಯೂರಿಟಿ ನೀಡುತ್ತಿದ್ದ ಆರೋಪಿ ಬಂಧನ

ದಾಖಲೆಗಳ ಪರಿಶೀಲನೆ ವೇಳೆ ನಕಲಿ ಎಂಬುದು ಗೊತ್ತಾಗಿತ್ತು. ಹೀಗಾಗಿ ಕೋರ್ಟ್‌ ಎಚ್ಚರಿಕೆ ನೀಡಿತ್ತು.

Team Udayavani, Oct 21, 2022, 11:24 AM IST

ಶಂಕಿತ ಉಗ್ರನಿಗೆ ನಕಲಿ ಶ್ಯೂರಿಟಿ ನೀಡುತ್ತಿದ್ದ ಆರೋಪಿ ಬಂಧನ

ಬೆಂಗಳೂರು: ನಿಷೇಧಿತ ಸಿಮಿ ಹಾಗೂ ಅಲ್‌ -ಹಿಂದ್‌ ಉಗ್ರ ಸಂಘಟನೆ ಜತೆ ಸಂಪರ್ಕ ಹಾಗೂ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಆರೋಪಿಗೆ ನಕಲಿ ಶ್ಯೂರಿಟಿ ನೀಡಲು ಬಿಡುಗಡೆ ಯತ್ನಿಸಿದ ಆರೋಪಿಯನ್ನು ಕೋರ್ಟ್‌ ವಶಕ್ಕೆ ಪಡೆಯುವಂತೆ ಸೂಚಿಸಿದ್ದು, ಆರೋಪಿಯನ್ನು ಹಲಸೂರುಗೇಟ್‌ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕೋಣನಕುಂಟೆ ನಿವಾಸಿ ಕೆ.ಜಿ. ನಾಗಭೂಷಣ್‌ ನನ್ನು ವಶಕ್ಕೆ ಪಡೆಯಲು ಕೋರ್ಟ್‌ ಸೂಚಿಸಿದೆ. ಆರೋಪಿ 2020ರಲ್ಲಿ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ 11ನೇ ಆರೋಪಿ ಸಲೀಂ ಖಾನ್‌ ಆಲಿಯಾಸ್‌ ಕೋಲಾರ ಸಲೀಂಗೆ ನಕಲಿ ಶ್ಯೂರಿಟಿ ನೀಡಿದ್ದ ಎಂದು ಮೂಲಗಳು ತಿಳಿಸಿವೆ.

ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿದಲ್ಲದೆ, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ತಮಿಳುನಾಡಿನ ಕ್ಯೂಬ್ರ್ಯಾಚ್‌ ಪೊಲೀಸ್‌
ಮತ್ತು ಸ್ಥಳೀಯರ ಪೊಲೀಸರ ಕಾರ್ಯಾಚರಣೆಯಲ್ಲಿ ಸುಮಾರು 14ಕ್ಕೂ ಅಧಿಕ ಮಂದಿ ಶಂಕಿತರನ್ನು ಬಂಧಿಸಲಾಗಿತ್ತು. ಈ ವೇಳೆ ಕೋಲಾರದ ರಹಮತ್‌ ನಗರ ನಿವಾಸಿ ಸಲೀಂ ಖಾನ್‌ನನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ಈತನಿಗೆ ಕೋರ್ಟ್‌ ಈತನಿಗೆ ಷರತ್ತುಬದ್ಧ ಜಾಮೀನು ಮಂಜೂರಿಗೆ ಅವಕಾಶ ನೀಡಿತ್ತು.

ಆಗ ಆರೋಪಿ ನಾಗ ಭೂಷಣ್‌ ಮುಳಬಾಗಿಲು ತಾಲೂಕಿನ ಸರ್ವೆ ನಂ 158/3ರ 0.13 ಗುಂಟೆಗೆ ಸಂಬಂಧಿಸಿದ ಆರ್‌ಟಿಸಿ, ಆಧಾರ್‌ ಕಾರ್ಡ್‌ ಹಾಗೂ ಇತರೆ ದಾಖಲೆಗಳನ್ನು ಲಗತ್ತಿಸಿ ಸಲೀಂ ಖಾನ್‌ಗೆ ಶ್ಯೂರಿಟಿ ನೀಡಲು ಬಂದಿದ್ದ. ಈ ನಿವೇಶನದ ಮಾರು ಕಟ್ಟೆ ಮೌಲ್ಯ ಅಂದಾಜು 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ದಾಖಲೆಗಳ ಪರಿಶೀಲನೆ ವೇಳೆ ನಕಲಿ ಎಂಬುದು ಗೊತ್ತಾಗಿತ್ತು. ಹೀಗಾಗಿ ಕೋರ್ಟ್‌ ಎಚ್ಚರಿಕೆ ನೀಡಿತ್ತು. ಅಲ್ಲದೆ, ಆರೋಪಿ ಇದೇ ರೀತಿ ಸುಮಾರು ನಾಲ್ಕು ಬಾರಿ ಕೋರ್ಟ್‌ಗೆ ವಂಚಿಸಲು ಯತ್ನಿಸಿದ್ದ. ಆಗ ಕಠಿಣವಾದ ಶಿಕ್ಷೆ ನೀಡವುದಾಗಿ ಎಚ್ಚರಿಕೆ ನೀಡಿತ್ತು. ಅಲ್ಲದೆ, ಈ ದಾಖಲೆಗಳ ಬಗ್ಗೆ ಮಾಹಿತಿ ನೀಡುವಂತೆ ಖುದ್ದು ಕೋರ್ಟ್‌ ಮುಳಬಾಗಿಲು ಉಪನೋಂದಣಾಧಿಕಾರಿಗಳಿಗೆ ಸೂಚಿಸಿತ್ತು.

ಹೀಗಾಗಿ ಸಬ್‌ರಿಜಿಸ್ಟ್ರಾರ್‌ ಪರಿಶೀಲಿಸಿದಾಗ, ಆರೋಪಿ ಇದೇ ದಾಖಲೆಗಳನ್ನು ಬೇರೆ ಕೋರ್ಟ್‌ಗಳಿಗೆ ಕೆಲ ಪ್ರಕರಣಗಳ ಆರೋಪಿ ಗಳಿಗೆ ಜಾಮೀನು ನೀಡಲು ಸಲ್ಲಿಸಿರುವುದು ಪತ್ತೆಯಾ ಗಿತ್ತು. ಆದರೂ ಐದನೇ ಬಾರಿಗೆ ಶ್ಯೂರಿಟಿ ನೀಡಲು ಮುಂದಾಗಿದ್ದ. ಗುರುವಾರ ವಿಚಾರಣೆ ಹಾಜರಾಗಿದ್ದ ಆರೋಪಿ ನಾಗಭೂಷಣ್‌ ವಿರುದ್ಧ ಕಾನೂನುಕ್ರಮಕೈಗೊಂಡು ವಶಕ್ಕೆ ಪಡೆಯುವಂತೆ ಕೋರ್ಟ್‌ ಸೂಚನೆ ನೀಡಿತ್ತು.ಆರೋಪಿಯನ್ನು ಹಲಸೂರು ಗೇಟ್‌ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಎನ್‌ಐಎ ಪರ ವಿಶೇಷ ಸರ್ಕಾರಿ ಅಭಿಯೋಜಕ ಪಿ.ಪ್ರಸನ್ನಕುಮಾರ್‌ ವಾದ ಮಂಡಿಸಿದರು.

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.