![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 21, 2022, 5:35 PM IST
ಕಲಬುರಗಿ: ಜಾತ್ರೆ ನಡೆಯುತ್ತಿದ್ದ ವೇಳೆ ಸಿಡಿಮದ್ದು ಸ್ಪೋಟಗೊಂಡು 20 ಕ್ಕೂ ಅಧಿಕ ಜನರು ಗಂಭೀರ ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ ನಡೆದಿದೆ.
ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಮರಗಮ್ಮ ದೇವಿ ಜಾತ್ರೆ ಹಾಗೂ ಈ ಹಿಂದೆ ಭಗ್ನವಾದ 15 ದೇವಿಗಳ ಮೂರ್ತಿ ಮರು ಪ್ರತಿಷ್ಠಾಪನೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ಹಾರಿಸಲು ಮದ್ದು ಸಿಡಿಸಿ ಸಂಭ್ರಮಿಸಲಾಗುತಿತ್ತು. ಆಕಾಶದತ್ತ ಮದ್ದು ಸಿಡಿಸಿದಾಗ ಬೆಂಕಿಯ ಕಿಡಿ ಪಕ್ಕದಲ್ಲಿಯೇ ಸಂಗ್ರಹಿಸಿ ಹಾರಿಸಲು ಇಟ್ಟಿದ್ದ ಮದ್ದಿನ ಮೇಲೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಕೈಗಡಿಯಾರಗಳಿಂದ ಮಾಡಿದ ಮಿನಿ ಸ್ಕರ್ಟ್, ಕಲ್ಲುಗಳಿಂದ ಬಿಕಿನಿ ಟಾಪ್ – ಉರ್ಫಿ ಹೊಸ ಅವತಾರ
ಅಂದಾಜು ಐದು ಕೆಜಿಯಷ್ಟಿದ್ದ ಮದ್ದು ಸಿಡಿದಾಗ ಹಲವರು ಗಾಯಗೊಂಡಿದ್ದಾರೆ. ಮದ್ದು ಸಿಡಿಸುವ ವ್ಯಕ್ತಿ, ಓರ್ವ ಮಗು ಸೇರಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನ ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಹಲವರ ದೇಹದ ಅಂಗಾಂಗಗಳು ಸುಟ್ಟಿದ್ದು ಗ್ರಾಮಸ್ಥರು ಕಾರುಗಳ ಮುಖಾಂತರ ಅವರನ್ನು ಸ್ಥಳೀಯ ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.