ಗೋಮಾಳಕ್ಕೆ ಸರ್ಕಾರದ ಅನುಮತಿ ಇಲ್ಲ: ಶಾಸಕ ಮಂಜುನಾಥ್‌

ಮುಂದಿನ ಸಭೆಯಲ್ಲಿ ನೇರವಾಗಿ ಸಮಿತಿ ಮುಂದೆ ಬಂದು ಚರ್ಚಿಸಿರೆಂದು ಮನವಿ ಮಾಡಿದರು.

Team Udayavani, Oct 21, 2022, 6:00 PM IST

Udayavani Kannada Newspaper

ಹುಣಸೂರು: ಮುಂದಿನ ತಿಂಗಳು ನಡೆಯಲಿರುವ ಅಕ್ರಮ ಸಕ್ರಮ ಸಮಿತಿಗೆ ಕನಿಷ್ಠ ನೂರು ಅರ್ಜಿಗಳನ್ನು ಸಾಗುವಳಿ ಸಕ್ರಮಗೊಳಿಸಲು ಕಂದಾಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸು ವಂತೆ ಶಾಸಕ ಎಚ್‌.ಪಿ. ಮಂಜುನಾಥ್‌ ಸೂಚಿಸಿದರು.

ನಗರದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ಬುಧವಾರ ನಡೆದ ಅಕ್ರಮ-ಸಕ್ರಮ ಸಾಗುವಳಿ ಸಮಿತಿಯ ಸಭೆಯಲ್ಲಿ ಮಾತನಾಡಿ, ತಾಲೂಕಿನ ರೈತರು ಭೂಮಿ ಸಾಗುವಳಿಗಾಗಿ ನಿತ್ಯ ಅಲೆಯು ವುದನ್ನು ತಪ್ಪಿಸಲು ಈ ಹಿಂದೆ ನಮೂನೆ 53 ಮತ್ತು 57ರಲ್ಲಿ ಸಲ್ಲಿಸಿರುವ ಕನಿಷ್ಠ ನೂರು ಫೈಲ್‌ಗ‌ಳನ್ನು ಮುಂದಿನ ಸಭೆಯಲ್ಲಿ ಮಂಡನೆಯಾಗಬೇಕು.

ಈಗಾಗಲೆ ಅರ್ಜಿ ಸಲ್ಲಿಸಿರುವ ಕುಟುಂಬಗಳ ಸಣ್ಣಪುಟ್ಟ ತಕರಾರುಗಳನ್ನು ಗ್ರಾಮಗಳಿಗೆ ಬೇಟಿ ನೀಡಿ ಪರಮಾರ್ಶಿಸಿ ಅಲ್ಲಿಯೇ ಕುಟುಂಬಸ್ಥ ರೊಂದಿಗೆ ಚರ್ಚಿಸಿ ಬಗೆಹರಿಸಿ ರೈತರ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಸ್ಪಂದಿಸಬೇಕೆಂದು ಸೂಚಿಸಿದರು.

ಅನುಮತಿ ಇಲ್ಲ, ಮೋಸಹೋಗಬೇಡಿ: ಗೋಮಾಳ ಜಮೀನಿಗೆ ಅರ್ಜಿ ಸಲ್ಲಿಸಿರುವ ರೈತರು ಸಾಗುವಳಿಗಾಗಿ ಕಚೇರಿ ಅಲೆಯಬೇಡಿ. ಸರ್ಕಾರ ಗೋಮಾಳ ಭೂಮಿಗೆ ಸಾಗುವಳಿ ನೀಡಲು ಅನುಮತಿ ನೀಡಿರುವುದಿಲ್ಲವೆಂದು ತಿಳಿಸಿ ಗೋಮಾಳ ಸಾಗುವಳಿಗಾಗಿ ನಿತ್ಯ ತಾಲೂಕು ಕಚೇರಿ ಹಾಗೂ ಮಧ್ಯವರ್ತಿಗಳ ಮೊರೆ ಹೋಗಿ ಮೋಸ ಹೋಗಬೇಡಿ ಎಂದು ಸಲಹೆ ನೀಡಿದರು.

53 ಅರ್ಜಿಗಳ ಪರಿಶೀಲನೆ: ಇಂದಿನ ಸಭೆಯಲ್ಲಿ ಒಟ್ಟು 53 ಅರ್ಜಿಗಳನ್ನು ಪರಿಶೀಲನೆ ನಡೆಸಲಾಗಿದ್ದು ನಮೂನೆ 57ರಲ್ಲಿ ಸಲ್ಲಿಕೆಯಾಗಿದ್ದ 43 ಅರ್ಜಿಗಳು ಹಾಗೂ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಬಂದ 10 ಅರ್ಜಿಗಳು ಪರಿಶೀಲನೆ ನಡೆಸಿ, ಈ ಪೈಕಿ 27 ಅರ್ಜಿಗಳನ್ನು ಸಕ್ರಮಗೊಳಿಸಿ ನೋಟಿಸ್‌ ಹೊರಡಿಸಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ನೂರಕ್ಕೂ ಹೆಚ್ಚು ಮಂದಿಯಿಂದ ಅಹವಾಲು:ಗೋಮಾಳ ಮತ್ತಿತರ ಸಣ್ಣಪುಟ್ಟ ಸಮಸ್ಯೆಗಳಿರುವ ನೂರಕ್ಕೂ ಹೆಚ್ಚು ಅರ್ಜಿದಾರರನ್ನು ಸಮಿತಿ ಸಭೆಗೆ ಕರೆಸಿ, ಆರ್‌.ಐ,ವಿ.ಎ. ತಹಶೀಲ್ದಾರ್‌ ಹಾಗೂ ಸಮಿತಿ ಸದಸ್ಯರ ಸಮ್ಮಖದಲ್ಲೇ ವಿಚಾರಣೆ ನಡೆಸಿ ಕೆಲವಕ್ಕು 57ರಡಿಯಲ್ಲಿ ಅರ್ಜಿಸಲ್ಲಿಸಲು ಹಾಗೂ ಗೋಮಾಳ ಮಂಜೂರಾತಿಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಸಮಸ್ಯೆಗಳನ್ನು ಇತ್ಯರ್ಥಪಡಿಸಿ, ರೈತರು ಮಧ್ಯವರ್ತಿಗಳಿಗೆ ಹಣ ನೀಡಿದ್ದೇವೆಂದು ಹೇಳುವುದು ಅಧಿಕಾರಿಗಳ ವಿರುದ್ಧ ಚಾಡಿ ಹೇಳುವುದು ತರವಲ್ಲ ಹಣ ನೀಡುವುದು ಸಹ ಅಪರಾಧ, ಹೀಗಾಗಿ ಯಾರಿಗೂ ಲಂಚ ನೀಡದೆ, ಮಧ್ಯವರ್ತಿಗಳ ಗಾಳಕ್ಕೆ ಸಿಲುಕದೆ ಸಮಸ್ಯೆಗಳಿದ್ದಲ್ಲಿ ಮುಂದಿನ ಸಭೆಯಲ್ಲಿ ನೇರವಾಗಿ ಸಮಿತಿ ಮುಂದೆ ಬಂದು ಚರ್ಚಿಸಿರೆಂದು ಮನವಿ ಮಾಡಿದರು.

ಸಮಿತಿ ಸದಸ್ಯ ನಾಗರಾಜ್‌ ಮಾತನಾಡಿ, ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಧಿಕಾರಿಗಳ ಹಂತದಲ್ಲಿ ಬಾಕಿ ಉಳಿಸಿಕೊಂಡಿರುವ ಅರ್ಜಿಗಳನ್ನು ಸಮಿತಿ ಮುಂದೆ ಹಾಜರುಪಡಿಸಿದಲ್ಲಿ ಬಡ ರೈತರಿಗೆ ಸಾಗುವಳಿ ಕೊಡಲು ನೆರವಾಗಲಿದ್ದು, ಅಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದರು. ಸಮಿತಿಯ ಕಾರ್ಯದರ್ಶಿ ಹಾಗೂ ತಹಶೀಲ್ದಾರ್‌ ಲೆಫ್ಟಿನೆಂಟ್‌ ಕರ್ನಲ್‌ ಡಾ.ಅಶೋಕ್‌, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ನಾಗರಾಜ ಮಲ್ಲಾಡಿ, ವೆಂಕಟಮ್ಮ ಇತರರು ಇದ್ದರು.

ಟಾಪ್ ನ್ಯೂಸ್

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.