ಕೊರಟಗೆರೆ ಯಲ್ಲಿ ವರುಣನ ಆರ್ಭಟ: ಲಂಕೇನಹಳ್ಳಿಯ ಸೇತುವೆ ಸಂಪೂರ್ಣ ಕುಸಿತ
ಹೊಳವನಹಳ್ಳಿ-ಬಿಡಿಪುರ ರಸ್ತೆ ಸಂಪರ್ಕ ಬಂದ್
Team Udayavani, Oct 21, 2022, 6:07 PM IST
ಕೊರಟಗೆರೆ : ಸತತವಾಗಿ ಸುರಿಯುತ್ತಿರುವ ಭಾರಿ ಮಳೆಗೆ ತಾಲೂಕಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದು, ಬೆಂಬಿಡದೆ ಸುರಿಯುತ್ತಿರುವ ಈ ಮಳೆಯಿಂದ ರಸ್ತೆಗಳು ಹಾಳಾಗಿದ್ದರೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿರುವ ಘಟನೆ ನಡೆದಿದೆ. ಹೊಳವನಹಳ್ಳಿ- ಬಿಡಿ ಪುರ ರಸ್ತೆ ಸಂಪರ್ಕ ಕಡಿತಗೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ. ಲಂಕೇನಹಳ್ಳಿ ಗ್ರಾಮದ ಸೇತುವೆ ಸಂಪೂರ್ಣ ಕುಸಿತವಾಗಿದೆ.
ಮಳೆಯಿಂದ ಕಂಗಲಾಗಿರುವ ರೈತರ ಪಾಡು ಹೇಳ ತೀರದ ಸಂಗತಿಯಾಗಿದೆ.ಸಾಲ ಸೂಲ ಮಾಡಿ ರೈತರು ಬಿತ್ತಿದಂತಹ ಬೆಳೆ ನೆಲ ಕಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ 2 ತಿಂಗಳ ಹಿಂದೆ ಸುರಿದಿದ್ದ ಭಾರಿ ಮಳೆಗೆ ತಾಲ್ಲೂಕಿನ ಅದೆಷ್ಟೋ ಮನೆಗಳಿಗೆ ನೀರು ನುಗ್ಗಿ ಕೆಲ ಮನೆಗಳು ನೆಲಕ್ಕುರುಳಿದ್ದವು. ಆ ಸಂದರ್ಭದಲ್ಲಿ ಪಾವಗಡದ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಜಪಾನಂದ ಸ್ವಾಮೀಜಿಯವರು ನೆರೆ ಸಂತ್ರಸ್ಥರಿಗೆ ತಮ್ಮ ಆಶ್ರಮದಿಂದ ದಿನಸಿ ಕಿಟ್ ಗಳು, ಹೊದಿಕೆ ಸೇರಿದಂತೆ ಟಾರ್ಪಲ್ ಗಳನ್ನು ತಹಶೀಲ್ದಾರ್ ನಾಹಿದಾ ಜಮ್ ಜಮ್ ರವರ ಮುಖಾಂತರ ಸಂತ್ರಸ್ಥರಿಗೆ ನೀಡಲಾಗಿತ್ತು.
ಮಳೆಯಿಂದಾಗಿ ಹೊಳವನಹಳ್ಳಿ ಬಿ ಡಿ ಪುರ ಮಾರ್ಗ ಕಲ್ಪಿಸುವಂತಹ ರಸ್ತೆಯ ಸೇತುವೆಯ ಮೇಲೆ ಅತಿಯಾಗಿ ಮಳೆ ಬಂದು ಗರುಡಾಚಲ ನದಿ ಹರಿಯುತ್ತಿರುವ ಕಾರಣ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.
ಹೋಬಳಿ ಕೇಂದ್ರವಾದ ಹೊಳವನಹಳ್ಳಿಗೆ ಸುತ್ತಮುತ್ತಲಿನ ಸಾವಿರಾರು ಜನರು ತಮ್ಮ ವ್ಯಾಪಾರ, ವ್ಯವಹಾರಕ್ಕಾಗಿ ಬರಬೇಕಾದರೆ ಕೇವಲ 5-6 ಕಿಲೋ ಮೀಟರ್ ಬಳಸಿ ಬರುತ್ತಿದ್ದರು. ಆದರೆ ಈಗ ಅತಿಯಾಗಿ ಮಳೆಯಾದ ಕಾರಣ ಅಕ್ಕಪಕ್ಕದ ರೈತರು, ಸಾರ್ವಜನಿಕರು ಸುಮಾರು 20 ರಿಂದ 25 ಕಿಲೋಮೀಟರ್ ನಷ್ಟು ಬಳಸಿಕೊಂಡು ಬರುವಂತಹ ಪರಿಸ್ಥಿತಿ ಎದುರಾಗಿದೆ.
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈಗ ಪರೀಕ್ಷೆಗಳು ನಡೆಯುವ ಸಮಯ ಆಗಿರುವುದರಿಂದ ಶಾಲೆಗೆ ಹೋಗಲು ವಿದ್ಯಾರ್ಥಿಗಳಿಗೆ ದಿಕ್ಕು ಕಾಣದಾಗಿ ರಸ್ತೆ ಬಂದ್ ಆಗಿರುವ ಕಾರಣ ಇವರುಗಳು ಸಹ ಪರದಾಡುವಂತಾಗಿದೆ.
ಈ ವರ್ಷ ಸಣ್ಣ ಪುಟ್ಟ ಕೆರೆಯಿಂದ ಹಿಡಿದು ದೊಡ್ಡ ಕೆರೆಗಳೆಲ್ಲ ಕೋಡಿ ಬಿದ್ದು ನೀರು ಹರಿಯುತ್ತಿದೆ ಸುಮಾರು 30 ವರ್ಷದ ಹಿಂದೆ ಕಟ್ಟಿದ್ದ ಮನೆಗಳು ನೆಲಸಮವಾಗಿದೆ. ಜೊತೆಗೆ ರಸ್ತೆಗಳೆಲ್ಲ ಹಾಳಾಗಿ ಸಂಚಾರ ಅಸ್ತವ್ಯಸ್ತ ವಾಗಿದೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಎಲ್ಲೆಲ್ಲಿ ರಸ್ತೆಗಳು, ಸೇತುವೆಗಳು ಹಾಳಾಗಿದೆಯೋ ಅವುಗಳನ್ನು ಗುರುತಿಸಿ ದುರಸ್ಥಿ ಕಾರ್ಯ ಮಾಡಬೇಕಾಗಿದೆ.
ಈ ಹಿಂದೆ ಅತಿಯಾಗಿ ಮಳೆ ಬಂದ ಕಾರಣ ರೈತರ ಜಮೀನುಗಳಿಗೆ ನೀರು ನುಗ್ಗಿರುವ ಹಿನ್ನೆಲೆ ರೈತರ ಬೆಳೆಗಳು ರೈತರ ಕೈಗೆ ಸಿಗದೇ ಸಂಪೂರ್ಣ ಹಾಳಾಗಿವೆ. ಮತ್ತೆ ಈಗ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಅಡಿಕೆ ತೋಟ, ಬಾಳೆ ತೋಟಗಳಿಗೆಲ್ಲ ನೀರು ನುಗ್ಗಿ ರೈತರಿಗೆ ದಿಕ್ಕೇ ತೋಚದಂತಾಗಿದೆ ಈ ಕೂಡಲೇ ಸಂಬಂಧ ಪಟ್ಟ ಇಲಾಖೆಗಳು ರೈತರ ನೀರು ನುಗ್ಗಿ ಹಾಳಾಗಿರುವ ಹೊಲಗಳಿಗೆ ಭೇಟಿ ನೀಡಿ ಸರ್ಕಾರದಿಂದ ಪರಿಹಾರ ಒದಗಿಸಬೇಕಾಗಿದೆ.
ಲಂಕೇನಹಳ್ಳಿ ಯಿಂದ ಚಿoಪುಗಾನಹಳ್ಳಿ, ಹೊಳವನಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಸಂಪೂರ್ಣ ಕಿತ್ತು ಹೋಗಿದ್ದು, ಇದುವರೆಗೂ ಇಲಾಖೆಯ ಅಧಿಕಾರಿಗಳಾಗಲಿ, ಶಾಸಕರಾಗಲಿ ಸ್ಥಳಕ್ಕೆ ಬಂದು ಇಲ್ಲಿನ ಪರಿಸ್ಥಿತಿ ನೋಡಿಲ್ಲ ಹಾಗೂ ವಾಹನ ಸವಾರರಿಗೆ ಸಂಚಾರ ಮಾಡಲು ಇಲ್ಲಿ ಸೇತುವೆ ಮರು ನಿರ್ಮಾಣ ಮಾಡಿಕೊಟ್ಟು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.