ಹಳಿಗೆ ಮರಳದ ಮೈಷುಗರ್ ಕಾರ್ಖಾನೆ
Team Udayavani, Oct 24, 2022, 3:37 PM IST
ಮಂಡ್ಯ: ಎರಡು ತಿಂಗಳು ಸಮೀಪಿಸುತ್ತಿದ್ದರೂ ಮೈಷುಗರ್ ಕಾರ್ಖಾನೆ ಇನ್ನೂ ಮೊದಲಿನ ಹಳಿಗೆ ಮರಳಲು ಸಾಧ್ಯವಾಗಿಲ್ಲ. ಪ್ರತಿದಿನ ವಿವಿಧ ಕಾರಣಗಳಿಂದ ನಿಂತು ನಿಂತು ಓಡುತ್ತಿದೆ. 3 ತಿಂಗಳ ಕಾಲ ಕಾರ್ಖಾನೆ ಯಂತ್ರಗಳ ದುರಸ್ತಿಗೆ ಸಮಯ ತೆಗೆದುಕೊಳ್ಳಲಾಗಿತ್ತು. ಆದರೂ, ಇನ್ನೂ ಯಂತ್ರಗಳು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ಇದರಿಂದ ಸಾಕಷ್ಟು ಲೋಪದೋಷ ಕಂಡು ಬರುತ್ತಿವೆ.
30 ಸಾವಿರ ಟನ್ ಕಬ್ಬು ಅರೆದ ಕಾರ್ಖಾನೆ: ಕಳೆದ 2 ತಿಂಗಳಿನಿಂದ ಇದುವರೆಗೂ ಕೇವಲ 30 ಸಾವಿರ ಟನ್ ಕಬ್ಬು ಅರೆಯಲಾಗಿದೆ. ಇದ ರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೈಷುಗರ್ ಕಾರ್ಖಾನೆ ಆರಂಭವಾಗಲಿದೆ ಎಂಬ ನಿಟ್ಟಿನಲ್ಲಿ ರೈತರು ಸುಮಾರು 4 ಲಕ್ಷ ಟನ್ನಷ್ಟು ಕಬ್ಬು ಒಪ್ಪಿಗೆ ಮಾಡಿಕೊಂಡಿದ್ದರು. ಆದರೆ, ಕಾರ್ಖಾನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರತಿದಿನ ನಿಗದಿತ ಟನ್ ಕಬ್ಬು ಅರೆಯಲು ಸಾಧ್ಯವಾಗುತ್ತಿಲ್ಲ.
ರೈತರಿಂದ ಗಲಾಟೆ: ಈಗಾಗಲೇ ಒಪ್ಪಂದ ಮಾಡಿಕೊಂಡಿರುವ ರೈತರು ಕಬ್ಬು ಅರೆಯುವಂತೆ ಕಾರ್ಖಾನೆ ಅಧಿಕಾರಿಗಳ ವಿರುದ್ಧ ಗಲಾಟೆ ಮಾಡುತ್ತಿದ್ದಾರೆ. ಕಳೆದ 3-4 ದಿನಗಳಿಂದ ರೈತರು ಕಬ್ಬು ಅರೆಯುವಂತೆ ಗಲಾಟೆ ಮಾಡುತ್ತಿರುವುದರಿಂದ ಅಧಿಕಾರಿಗಳು ಕಾಟಾಚಾರಕ್ಕೆ ಮಾತ್ರ ಕಬ್ಬು ಅರೆಯುತ್ತಿದ್ದಾರೆ. ಈಗಾಗಲೇ ಸಾಕಷ್ಟು ಕಬ್ಬು ಕಾರ್ಖಾನೆ ಯಾರ್ಡ್ನಲ್ಲಿ ಎತ್ತಿನಗಾಡಿ, ಟ್ರ್ಯಾಕ್ಟರ್, ಲಾರಿಗಳಲ್ಲಿ ಬಂದು ನಿಂತಿದೆ.
ಖಾಸಗಿ ಕಂಪನಿಯಿಂದ ನಿರ್ಲಕ್ಷ್ಯ: ಕಬ್ಬು ಅರೆಯುವಿಕೆಯನ್ನು ಖಾಸಗಿ ಕಂಪನಿಗೆ ವಹಿಸಲಾಗಿದೆ. ಟನ್ ಕಬ್ಬು ಅರೆದರೆ ಇಂತಿಷ್ಟು ಹಣ ಎಂದು ನಿಗದಿಪಡಿಸಲಾಗಿದ್ದು, ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ, ಖಾಸಗಿ ಕಂಪನಿಯವರು ನಿಗದಿತ ಕಬ್ಬು ಅರೆಯುತ್ತಿಲ್ಲ. ನಿರ್ಲಕ್ಷ್ಯ ವಹಿಸಿದ್ದು, ಕೇವಲ ಕಾಟಾಚಾರಕ್ಕಾಗಿ ಕಬ್ಬು ಅರೆಯುವ ನಾಟಕವಾಡುತ್ತಿದ್ದಾರೆ ಎಂದು ರೈತರೊಬ್ಬರು ಆರೋಪಿಸಿದರು.
1.50 ಲಕ್ಷ ಟನ್ ಕಬ್ಬು ಅರೆಯಬೇಕಿತ್ತು: 2 ತಿಂಗಳೊಳಗೆ ಸುಮಾರು 1.50 ಲಕ್ಷ ಟನ್ ಕಬ್ಬು ಅರೆಯಬೇಕಿತ್ತು. ಆದರೆ, ಕಾರ್ಖಾನೆ ಅಧಿಕಾರಿಗಳು, ಖಾಸಗಿ ಕಂಪನಿ ನಿರ್ಲಕ್ಷ್ಯದಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಅಲ್ಲದೆ, ಟರ್ಬೈನ್ ಕೂಡ ಇನ್ನೂ ಆರಂಭಿಸದಿರುವುದು ಖಾಸಗಿ ಕಂಪನಿಯವರ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಕಳಪೆ ಸಕ್ಕರೆ ಉತ್ಪಾದನೆ: ಇದುವರೆಗೂ ಅರೆದಿರುವ ಕಬ್ಬಿನಲ್ಲಿ ಸಕ್ಕರೆ ಉತ್ಪಾದಿಸಲಾಗಿದೆ. ಆದರೆ, ಗುಣಮಟ್ಟದ ಸಕ್ಕರೆ ಉತ್ಪಾದಿಸಲು ಸಾಧ್ಯವಾಗಿಲ್ಲ. ಉತ್ಪಾದಿಸಿರುವ ಸಕ್ಕರೆಯೂ ಕಂದು ಬಣ್ಣದಿಂದ ಕೂಡಿದೆ. ಅದನ್ನು ಮತ್ತೆ ಮರು ಉತ್ಪಾದನೆ ಮಾಡಲು ಸಾಧ್ಯವಿದ್ದರೂ ಕಾರ್ಖಾನೆ ಅಧಿಕಾರಿಗಳು, ಖಾಸಗಿ ಕಂಪನಿ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಕೇವಲ ಪ್ರಾಯೋಗಿಕ ಚಾಲನೆಯೇ?: ಕಳೆದ 2ತಿಂಗಳಿನಿಂದ ಕೇವಲ ಪ್ರಾಯೋಗಿಕ ಚಾಲನೆಯಾಗಿದೆಯೇ ಎಂಬ ಅನುಮಾನ ಕಾಡುತ್ತಿವೆ. ಸರ್ಕಾರ ಕಾರ್ಖಾನೆಯನ್ನು 2 ವರ್ಷಗಳ ಅವ ಧಿಗೆ ಪ್ರಾಯೋಗಿಕವಾಗಿ ಸರ್ಕಾರಿ ಸ್ವಾಮ್ಯದಲ್ಲಿಯೇ ನಡೆಸಲಾಗುವುದು ಎಂದು ತಿಳಿಸಿತ್ತು. ಆದರೆ, ಈಗಿನ ಕಾರ್ಖಾನೆ ಪರಿಸ್ಥಿತಿ ನೋಡಿದರೆ ಕೇವಲ ಪ್ರಾಯೋಗಿ ಕವಾಗಿ ನಡೆಸುವ ಮೂಲಕ ವರ್ಷ ಪೂರೈಸಲಿದೆಯೇ ಎಂಬ ಅನುಮಾನ ಕಾಡುತ್ತಿವೆ. ಚುನಾವಣೆ ಹತ್ತಿರವಾಗುತ್ತಿದ್ದು, ಅಲ್ಲಿಯವರೆಗೂ ಪ್ರಾಯೋಗಿಕ ವಾಗಿ ಕಾರ್ಖಾನೆ ನಡೆಸಲಿದೆಯೇ ಎಂಬ ಚರ್ಚೆಗಳೂ ಕೇಳಿ ಬರುತ್ತಿವೆ.
2 ತಿಂಗಳಿನಿಂದ ವೇತನವಿಲ್ಲ: ಕಳೆದ ಎರಡು ತಿಂಗಳಿನಿಂದಲೂ ಕಾರ್ಖಾನೆ ನೌಕರರಿಗೆ ವೇತನ ನೀಡಿಲ್ಲ. ಕಾರ್ಖಾನೆ ಅಧಿ ಕಾರಿಗಳಿಗೆ ಲಕ್ಷಾಂತರ ರೂ. ವೇತನ ನೀಡಲಾಗುತ್ತಿದೆ. ಪ್ರತಿ ತಿಂಗಳು ತಪ್ಪದೇ ಅವರಿಗೆ ವೇತನ ಬರುತ್ತಿದೆ. ಆದರೆ, ಕಾರ್ಮಿಕರಿಗೆ, ಸಿಬ್ಬಂದಿಗೆ ಸಮರ್ಪಕವಾಗಿ ವೇತನ ಪಾವತಿಸು ತ್ತಿಲ್ಲ. ಈಗಾಗಲೇ 2 ತಿಂಗಳಿನಿಂದ ವೇತನ ನೀಡಿಲ್ಲ ಎಂದು ಹೆಸರು ಹೇಳದ ಸಿಬ್ಬಂದಿ ಯೊಬ್ಬರು ಅಳಲು ತೋಡಿಕೊಂಡರು. ರೈ
ತರಿಗೆ ಹೆಚ್ಚಿದ ಸಂಕಷ್ಟ: ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಲು ಒಪ್ಪಂದ ಮಾಡಿಕೊಂಡಿರುವ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಪ್ರತಿ ದಿನ ಅಧಿಕಾರಿ ಗಳೊಂದಿಗೆ ಗಲಾಟೆ ಮಾಡುವ ಮೂಲಕ ಕಬ್ಬು ಅರೆಯಲು ಒತ್ತಡ ಹೇರಬೇಕಾದ ಪರಿ ಸ್ಥಿತಿ ಬಂದೊದಗಿದೆ. ಇತ್ತ ಸರಿಯಾಗಿ ಕಬ್ಬು ಅರೆಯುತ್ತಿಲ್ಲ. ಅತ್ತ, ಬೇರೆ ಕಾರ್ಖಾನೆಗೂ ಕಬ್ಬು ಸಾಗಿಸುವಂತಿಲ್ಲ ಎಂಬಂತಾಗಿದೆ.
-ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ
Mandya: ಕೆಎಸ್ಆರ್ ಟಿಸಿ ಬಸ್- ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್ ಬಯೋಮೆಟ್ರಿಕ್!
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.