ದೀಪಾವಳಿ; ಹಬ್ಬದ ಸಂದರ್ಭ ಆರೋಗ್ಯದ ಮೇಲೂ ಗಮನವಿರಲಿ; ಪಟಾಕಿ ಸುಡುವಾಗ ಎಚ್ಚರವಿರಲಿ!


ದಿನೇಶ ಎಂ, Oct 24, 2022, 5:40 PM IST

thumb crackers exclusive kavya

ದೀಪಾವಳಿ ಬೆಳಕಿನ ಹಬ್ಬ, ಎಲ್ಲೆಡೆ ಸಡಗರ ಸಂಭ್ರಮ. ದೀಪಾವಳಿ ಹಬ್ಬ ಆಚರಿಸುವುದು ಎಂದರೆ ಪಟಾಕಿಗೆ ವಿಶೇಷ ಸ್ಥಾನ. ಪಟಾಕಿ ಸಿಡಿಸಿದರೆ ಮಾತ್ರ ದೀಪಾವಳಿ ಹಬ್ಬ ಹಬ್ಬ ಎಂದೆನಿಸುವುದು ಎಂಬುದು ಎಲ್ಲರ ಭಾವನೆ.
ಪಟಾಕಿ ಎಂದರೆ ಸಂತೋಷದೊಂದಿಗೆ ಆತಂಕವೂ ಸಾಮಾನ್ಯ. ಅದರಲ್ಲೂ ಮುಖ್ಯವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡುವುದು ಸಹಜ. ಪ್ರತಿ ವರ್ಷ ದೀಪಾವಳಿ ಸಂದರ್ಭ ಹಲವಾರು ಅಪಾಯ ಸಂಭವಿಸಿ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಅದ್ದರಿಂದ ಅಪಾಯ ಬರದೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
ಆರೋಗ್ಯದ ಬಗ್ಗೆ ಯೋಚಿಸಿದರೆ ಪಟಾಕಿಯಿಂದ ದೂರ ಉಳಿಯುವುದೇ ಒಳಿತು ಎಂದರೆ ತಪ್ಪಿಲ್ಲ. ಉಸಿರಾಟದ ತೊಂದರೆ, ಹೃದಯದ ತೊಂದರೆ ಇರುವವರು, ಸಣ್ಣ ಮಕ್ಕಳು ಮುಖ್ಯವಾಗಿ ಜಾಗ್ರತೆ ವಹಿಸುವುದು ಅಗತ್ಯ. ಪಟಾಕಿ ಹೊಡೆಯುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. 1-3 ದಿನದ ಸಂಭ್ರಮಕ್ಕಾಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಸೂಕ್ತವಲ್ಲ.
ಪಟಾಕಿ ವಿಷಯದಲ್ಲಿ ಪ್ರತಿ ವರ್ಷ ಎಷ್ಟೇ ಜಾಗೃತಿ ಮೂಡಿಸಿದರೂ ಅನಾಹುತ ಸಾಮಾನ್ಯ ಎಂಬತಾಗಿದೆ. ಪಟಾಕಿ ಹೊಡೆತದಿಂದ ಬರುವ ಶಬ್ದ ಕಿವಿಯ ತಮಟೆಯ ಶಕ್ತಿ ಕಡಿಮೆಯಾಗುತ್ತದೆ. ಪಟಾಕಿ ತಯಾರಿಸಲು ಉಪಯೋಗಿಸುವ ಮದ್ದಿನಿಂದ ಕಣ್ಣಿಗೆ ತೊಂದರೆ. ಪಟಾಕಿ ಸಿಡಿಸುವವರು ಎಚ್ಚರ ವಹಿಸುವುದು ಅಗತ್ಯ.
ಪಟಾಕಿ ಹೊಡೆಯುವಾಗ ಬರುವ ಹೊಗೆಯಿಂದ ಕಣ್ಣುರಿ ಬರುತ್ತದೆ. ಇದು ಪಟಾಕಿ ಹೊಡೆಯುವವರಿಗೆ ಮಾತ್ರವಲ್ಲದೇ ಸುತ್ತ-ಮುತ್ತ ಇರುವ ಎಲ್ಲರ ಆರೋಗ್ಯ ಮೇಲೂ ಪರಿಣಾಮ ಬೀರುತ್ತದೆ.
ಪಟಾಕಿ ಹೊಗೆಯಿಂದ ಶ್ವಾಸಕೋಶದ ತೊಂದರೆ ಉಂಟಾಗಿ ಕೆಮ್ಮುವುದು, ಸೀನುವುದು ಹೆಚ್ಚಾಗುತ್ತದೆ. ಅಸ್ತಮಾ ರೋಗಿಗಳು ಪಟಾಕಿ ಹೊಡೆಯುವ ಸ್ಥಳದಿಂದ ದೂರವಿದ್ದರೆ ಉತ್ತಮ. ಇಲ್ಲದಿದ್ದರೆ ಅನಾರೋಗ್ಯ ತೊಂದರೆ ಹೆಚ್ಚಾಗುವ ಸಂಭವವಿರುತ್ತದೆ.
ಅಧಿಕ ರಕ್ತದೊತ್ತಡದಿಂದ ಬಳಲುವವರು ತಲೆ ನೋವು, ತಲೆ ಸುತ್ತು, ರಕ್ತದೊತ್ತಡ, ತಲೆ ತಿರುಗುವ ಸಮಸ್ಯೆಗೆ ಒಳಗಾಗಬಹುದು. ಪಟಾಕಿ ಹೊಗೆ ಗರ್ಭಿಣಿಯರು ಸೇವಿಸಿದರೆ ತಾಯಿ-ಮಗು ಇಬ್ಬರಿಗೂ ಅಪಾಯವಿದೆ. ಮಗು ಹುಟ್ಟುತ್ತಲೇ ಉಸಿರಾಟದ ಸಮಸ್ಯೆ ಎದುರಿಸಬೇಕಾಗುತ್ತದೆ. ಆದ್ದರಿಂದ ಗರ್ಭಿಣಿಯರು ಎಚ್ಚರ ವಹಿಸುವುದು ಅಗತ್ಯ.
ದೀಪಾವಳಿ ಸಂದರ್ಭ ವಾಯು ಮಾಲಿನ್ಯದ ಮಟ್ಟ ಶೇ. 10-15 ರಷ್ಟು ಹಾಗೂ ಶಬ್ದ ಮಾಲಿನ್ಯದ ಮಟ್ಟ ಶೇ.60 ರಷ್ಟು ಹೆಚ್ಚಾಗುತ್ತದೆ.

ಪಟಾಕಿ ಸಿಡಿಸುವಾಗ ಈ ಬಗ್ಗೆ ಜಾಗೃತೆ ವಹಿಸಿ:

ಮೊದಲನೆಯದಾಗಿ ಪಟಾಕಿ ಹೊಡೆಯಲು ಉತ್ತಮ ಸ್ಥಳ ಆರಿಸಿ. ವಿಶಾಲವಾದ ಪ್ರದೇಶ ಅಥವಾ ಮೈದಾನದಲ್ಲಿ ಪಟಾಕಿ ಹೊಡೆಯುವುದು ಒಳ್ಳೆಯದು. ಸ್ಥಳ ಕಡಿಮೆ ಇರುವವರು ಸಣ್ಣ-ಪುಟ್ಟ ಪಟಾಕಿಗಳನ್ನು ಮಾತ್ರ ಉಪಯೋಗಿಸಿ. ಇತರರಿಗೆ ತೊಂದರೆ ಆಗದಂತೆ ಜಾಗೃತೆ ವಹಿಸಿ.
*  ಪಟಾಕಿ ಸಿಡಿಸುವಾಗ ಮಕ್ಕಳ ಕಡೆಗೂ ಗಮನ ಹರಿಸಿ, ಚಿಕ್ಕ ಮಕ್ಕಳು ಆ ಸ್ಥಳದಿಂದ ದೂರ ಇರುವುದೇ ಉತ್ತಮ.
*  ಪಟಾಕಿ ಸಿಡಿಸುವಾಗ ಕಣ್ಣಿನ ಆರೋಗ್ಯದ ಬಗ್ಗೆಯೂ ಗಮನವಿರಲಿ. ಸಾಧ್ಯವಾದರೆ ನೇತ್ರ ಸುರಕ್ಷತಾ ಸಾಧನಗಳನ್ನು ಬಳಸಿ.
*  ಪಟಾಕಿ ಹೊಡೆಯುವಾಗ ಆದಷ್ಟು ಕಾಟನ್ ಬಟ್ಟೆಗಳನ್ನೇ ಧರಿಸಿ. ಇದು ಬಟ್ಟೆಗೆ ಬೇಗನೆ ಬೆಂಕಿ ಹತ್ತಿಕೊಳ್ಳುವುದನ್ನು ತಪ್ಪಿಸುತ್ತದೆ.
*  ಕಡಿಮೆ ಶಬ್ದ ಮತ್ತು ಕಡಿಮೆ ಹೊಗೆ ಬರುವ ಪಟಾಕಿಗಳಿಗೆ ಮೊದಲ ಆದ್ಯತೆ ನೀಡಿ. ಹಸಿರು ಪಟಾಕಿಗಳನ್ನು ಹೆಚ್ಚಾಗಿ ಬಳಸಿ.
*  ಪಟಾಕಿ, ನಕ್ಷತ್ರ ಕಡ್ಡಿ ಉಪಯೋಗಿಸುವಾಗ ಎಚ್ಚರವಿರಲಿ. ಬೆಂಕಿಯ ಕಿಡಿ ಮುಖ, ಕಣ್ಣು, ಕೂದಲಿಗೆ ಬರದಂತೆ ಎಚ್ಚರ ವಹಿಸಿ.
*  ಪಟಾಕಿ ಹೊಡೆಯುವಾಗ ಕಣ್ಣು ಮಾತ್ರವಲ್ಲದೇ ಕೈ-ಕಾಲು ಗಳಿಗೂ ತಗಲುವ ಅಪಾಯವಿರುವುದರಿಂದ ಆದಾಷ್ಟು ಎಚ್ಚರಿಕೆ ವಹಿಸುವುದು ಸೂಕ್ತ.
*  ಅರ್ಧ ಸುಟ್ಟ ಅಥವಾ ಸಿಡಿಯದೇ ಬಾಕಿ ಉಳಿದಿರುವ ಪಟಾಕಿಗಳನ್ನು ಬಳಸುವುದು ಬೇಡ. ಕತ್ತಲಲ್ಲಿ ಪಟಾಕಿ ಹೊಡೆಯುವ ಸಹಾಯ ಬೇಡ.
*  ಪಟಾಕಿ ಬಾಕ್ಸ್ ಪಕ್ಕದಲ್ಲಿ ಇಟ್ಟು ಪಟಾಕಿ ಹೊಡೆಯುವುದನ್ನು ತಪ್ಪಿಸಿ.
*  ಪ್ರಥಮ ಚಿಕಿತ್ಸೆಯ ಕಿಟ್ ಜೊತೆಗಿರಲಿ.
ಸುಪ್ರೀಂ ಕೋರ್ಟ್ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ಹೊಡೆಯಬಾರದು ಎಂದು ಆದೇಶ ನೀಡಿದೆ. ಕಳೆದ ವರ್ಷದಿಂದ ಸರ್ಕಾರ ಹಸಿರು ಪಟಾಕಿಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಹಾಗಾಗಿ ಎಲ್ಲರೂ ಆದಷ್ಟು ಹಸಿರು ಪಟಾಕಿಗಳನ್ನೇ ಬಳಸಿ. ಪಟಾಕಿ ಹೊಡೆಯಲು ರಾತ್ರಿ 8-10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಆ ಸಮಯದಲ್ಲೇ ಪಟಾಕಿ ಹೊಡೆಯುವುದು ಉತ್ತಮ. ಸಂಭ್ರಮ, ಸಡಗರದ ಜೊತೆಗೆ ಸುರಕ್ಷತೆ ಕಡೆಗೂ ಗಮನ ಹರಿಸುವುದು ಅಗತ್ಯ. ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

Harmanpreet Singh: ಹಾರ್ಮೋನಿಯಂ ಹುಚ್ಚಿದ್ದ ಹಳ್ಳಿಯ ಹುಡುಗ ಇದೀಗ ಹಾಕಿ ಸೂಪರ್‌ ಸ್ಟಾರ್‌

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.