ಕುಷ್ಟಗಿ: ಎತ್ತಿನ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು
Team Udayavani, Oct 24, 2022, 7:10 PM IST
ಕುಷ್ಟಗಿ:ತಾಲೂಕಿನ ಗಡಿಗ್ರಾಮ ರಾಂಪೂರ ಗ್ರಾಮದ ಹೊರವಲಯದ ರಸ್ತೆ ಪಕ್ಕದ ತಗ್ಗು ಪ್ರದೇಶದಲ್ಲಿ ನಿಂತ ನೀರಿನಲ್ಲಿ ಇಬ್ಬರು ಬಾಲಕರು ಜೀವಂತ ಸಮಾದಿಯಾದ ಹೃದಯ ವಿದ್ರಾವಕ ಘಟನೆ ನಡೆದಿದ್ದು ದೀಪಾವಳಿ ಹಬ್ಬದಲ್ಲಿ ಮನೆ ಬೆಳಗುವ ಎರಡು ದೀಪಗಳು ನಂದಿವೆ.
ರಾಂಪೂರ ಗ್ರಾಮದ ದೇವೇಂದ್ರಪ್ಪ ಮಾಡಗೇರ್ ಎಂಬುವರ ಜಮೀನಿನ ಪಕ್ಕದಲ್ಲಿ ಇತ್ತೀಚಿನ ಮಳೆಯಿಂದ ವಕ್ಕಂದುರ್ಗಾ ರಸ್ತೆಗೆ ಹೊಂದಿಕೊಂಡಿರುವ ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಬಾಲಕರಾದ ಮಹಾಂತೇಶ ಮಲ್ಲಪ್ಪ ಮಾದರ (10) ಹಾಗೂ ವಿಜಯ್ ಪರಸಪ್ಪ ಮಾದರ್ (10) ಇನ್ನಿಬ್ಬರೊಂದಿಗೆ ಸೇರಿ ದೀಪಾವಳಿ ಹಬ್ಬದ ಶಾಲೆ ರಜೆ ಹಿನ್ನೆಲೆಯಲ್ಲಿ ಎತ್ತಿನ ಮೈತೊಳೆಯಲು ಹೋಗಿದ್ದರು ಎನ್ನಲಾಗಿದೆ.
ಈ ವೇಳೆ ಮಹಾಂತೇಶ ಹಾಗೂ ವಿಜಯ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮುಳುಗಿದ್ದಾರೆ. ದಡದಲ್ಲಿದ್ದ ಬಾಲಕರಿಬ್ಬರು ಕೂಡಲೇ ಊರವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳೀಯರು ದೌಡಾಯಿಸಿ ಇಬ್ಬರನ್ನು ಮೇಲಕ್ಕೆತ್ತುವಾಗಲೇ ಸಾವನ್ನಪ್ಪಿದರು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ದೀಪಾವಳಿ ಹಬ್ಬದಲ್ಲಿ ಮಕ್ಕಳಿಬ್ಬರ ದುರಂತ ಸಾವು, ಕುಟುಂಬಸ್ಥರನ್ನು ಕಂಗಾಲಾಗಿಸಿದೆ. ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುನ್ನೆಚ್ಚರಿಕೆ ನಡುವೆಯೂ ನಡೆದ ದುರಂತ
ಅಧಿಕೃತ, ಅನಧಿಕೃತ ಗಣಿಗಾರಿಕೆಯ ತೆರೆದ ಗುಂಡಿ, ಕೃಷಿ ಹೊಂಡಗಳಲ್ಲಿ ನೀರು ಜಮಾವಣೆ ಹಿನ್ನೆಲೆಯಲ್ಲಿ ರಕ್ಷಣಾತ್ಮಕ ಬೇಲಿಯ ಮುನ್ನೆಚ್ಚರಿಕೆವಹಿಸದೇ ಇರುವುದು ಪ್ರತಿ ವರ್ಷ ಮಕ್ಕಳು, ಈಜು ಬಾರದವರು ಹಾಗೂ ಜಾನುವಾರು ಸಾಯುತ್ತಿವೆ. ಕಳೆದೆರೆಡು ವರ್ಷಗಳ ಹಿಂದೆ ಪೊಲೀಸ್ ಇಲಾಖೆ ಸರ್ವೆ ನಡೆಸಿ ತೆರೆದ ಗುಂಡಿಗಳನ್ನು ಗುರುತಿಸಿ, ಆಯಾ ಗಣಿ ಮಾಲೀಕರಿಗೆ, ಸಂಬಂಧಿಸಿದವರಿಗೆ ಗುಂಡಿ ಮುಚ್ಚಲು ಹಾಗೂ ರಕ್ಷಣಾತ್ಮಕ ಬೇಲಿ ಅಳವಡಿಸಲು ನೋಟಿಸ್ ನೀಡಿ ಮುನ್ನೆಚ್ಚರಿಕೆವಹಿಸಿತ್ತು. ಆದಾಗ್ಯೂ ಇಂತಹ ಪ್ರಕರಣ ಘಟಿಸುತ್ತಿರುವುದು ದುರದೃಷ್ಟಕರವೆನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಅದಾಲತ್ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು
Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ
ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ
Darshan, ಸುದೀಪ್ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.