ಲೈಗರ್‌ ಸೋಲು: ಹಣಕ್ಕಾಗಿ ನಿರ್ದೇಶಕನಿಗೆ ಬ್ಲ್ಯಾಕ್‌ ಮೇಲ್, ಪ್ರತಿಭಟನೆಗೆ ವಿತರಕರ ಪ್ಲ್ಯಾನ್

ನನ್ನ ಬಳಿ ಯಾರಿಗೂ ಕೊಡಲು ಹಣವಿಲ್ಲ..

Team Udayavani, Oct 25, 2022, 12:04 PM IST

ʼಲೈಗರ್‌ʼ ಸೋಲು: ಹಣಕ್ಕಾಗಿ ನಿರ್ದೇಶಕನಿಗೆ ಬ್ಲ್ಯಾಕ್‌ ಮೇಲ್,ಪ್ರತಿಭಟನೆಗೆ ವಿತರಕರ ಪ್ಲ್ಯಾನ್

ಹೈದರಾಬಾದ್:‌ ಈ ವರ್ಷ ದೊಡ್ಡ ಹೈಪ್‌ ಕ್ರಿಯೇಟ್‌ ಮಾಡಿದ್ದ ವಿಜಯ್‌ ದೇವರಕೊಂಡಾ ಅವರ ʼಲೈಗರ್‌ʼ ಚಿತ್ರ ಅಟ್ಟರ್‌ ಫ್ಲಾಪ್‌ ಆದದ್ದು ಗೊತ್ತೇ ಇದೆ. ಎಲ್ಲಿಯವರೆಗೆ ಅಂದರೆ ನಿರ್ದೇಶಕರು ವಿತರಕರಿಗೆ ಹಣ ವಾಪಸ್‌ ಕೊಡುವಷ್ಟರ ಮಟ್ಟಿಗಾದರೂ ಚಿತ್ರ ಬಾಕ್ಸ್‌ ಆಫೀಸ್‌ ನಲ್ಲಿ ಕಮಾಯಿ ಮಾಡಲಿಲ್ಲ.

ಚಿತ್ರ ಹೀನಾಯವಾಗಿ ಸೋತ ಬಳಿಕ ನಿರ್ದೇಶಕ ಪುರಿ ಜಗನ್ನಾಥ್‌ ವಿತರಕರಿಗೆ ಸಾಧ್ಯವಾದಷ್ಟು ನಷ್ಟವನ್ನು ಭರಿಸುವುದಾಗಿ ಹೇಳಿದ್ದರು. ಆದರೆ ವಿತರಕರು ತುಂಬಾ ದಿನ ಕಾದ ಬಳಿಕ ಅವರ ಹಣ ಬರದೇ ಇರುವ ಕಾರಣ ನಿರ್ದೇಶಕರ ಮನೆ ಮುಂದೆ ಧರಣಿ ನಡೆಸುತ್ತೇವೆ ಎಂದು ಹೇಳಿರುವ ವಾಟ್ಸಾಪ್‌ ಮೆಸೇಜ್‌ ವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿತರಕರು ಪ್ಲ್ಯಾನ್‌ ಮಾಡಿಕೊಂಡು ನಿರ್ದೇಶಕ ಪುರಿ ಜಗನ್ನಾಥ್‌ ಅವರ ನಿವಾಸದ ಮುಂದೆ ಧರಣಿ ನಡೆಸುವ ಮೆಸೇಜ್‌ ನ ಸ್ಕ್ರೀನ್‌ ಶಾಟ್‌ ನ್ನು ಹಂಚಿಕೊಂಡಿದ್ದಾರೆ.

ಆ ಮೆಸೇಜ್ ನಲ್ಲಿ ಅ.27 ರಂದು ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಗೆ ಬರುವವರು ಸ್ವಲ್ಪ ಜಾಸ್ತಿ ಬಟ್ಟೆಗಳನ್ನು ತನ್ನಿ.  ಏಕೆಂದರೆ ಪ್ರತಿಭಟನೆ 4 ದಿನ ನಡೆಯಬಹುದು. ಯಾರಿಗೆಲ್ಲಾ ಹಣ ಬೇಕೋ ಅವರು ಬನ್ನಿ ಎನ್ನುವ ಬೆದರಿಕೆಯ ಮೆಸೇಜ್‌ ನ ಸ್ಕ್ರೀನ್‌ ಶಾಟ್‌ ಎಲ್ಲೆಡೆ ಫಾರ್ವಡ್‌ ಆಗಿದೆ.

ಇದಕ್ಕೆ ನಿರ್ದೇಶಕ ಪುರಿ ಜಗನ್ನಾಥ್‌ ಆಕ್ರೋಶದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಪುರಿ ಜಗನ್ನಾಥ್‌ ತಮಗೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವ ವಿತರಕರ ವಿರುದ್ಧ ಹರಿಹಾಯ್ದಿದ್ದಾರೆ. “ನನ್ನ ಬಳಿ ಯಾರಿಗೂ ಕೊಡಲು ಹಣವಿಲ್ಲ. ಆದರೂ ನನ್ನಿಂದ ಆಗುವಷ್ಟು ಹಣವನ್ನು ನಾನು ಭರಿಸಿದ್ದೇನೆ. ನನ್ನ ವಿರುದ್ಧ ಯಾರು ಪ್ರತಿಭಟನೆ ಮಾಡಲು ಯೋಜನೆ ಹಾಕಿಕೊಂಡಿದ್ದರೋ ಅವರಿಗೆ ನಾನು ಒಂದು ಪೈಸೆಯನ್ನೂ ಕೊಡಲ್ಲ” ಎಂದು ಬರೆದು ಟ್ವಿಟರ್‌ ನಲ್ಲಿ ಹಂಚಿಕೊಂಡಿದ್ದಾರೆ.

ʼಲೈಗರ್‌ʼ ನಲ್ಲಿ ವಿಜಯ್‌ ದೇವರಕೊಂಡಾ, ಅನನ್ಯಾ ಪಾಂಡೆ, ರಮ್ಯಾ ಕೃಷ್ಣನ್‌ ಮುಂತಾದವರು ಕಾಣಿಸಿಕೊಂಡಿದ್ದರು. ಚಿತ್ರ ಮಂದಿರದ ಬಳಿಕ ಓಟಿಟಿಯಲ್ಲೂ ಚಿತ್ರ ಅಷ್ಟೇನೂ ಕಮಾಲ್‌ ಮಾಡಿಲ್ಲ. ಚಿತ್ರದ ಸೋಲಿನ ಬಗ್ಗೆ ಇತ್ತೀಚೆಗೆ ನಟ ವಿಜಯ್‌ ದೇವರಕೊಂಡಾ ಅವರು ಕೂಡ ಭಾವುಕವಾಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.