ಇಂದು ಹಾಸನಾಂಬೆ ದೇವಾಲಯ ಅಹೋರಾತ್ರಿ ದರ್ಶನ
Team Udayavani, Oct 26, 2022, 6:45 AM IST
ಹಾಸನ: ಸೂರ್ಯ ಗ್ರಹಣದ ಹಿನ್ನೆಲೆ ಶ್ರೀ ಹಾಸನಾಂಬ ದೇವಾಲಯವು ಮಂಗಳವಾರ ದಿನವಿಡೀ ಬಂದ್ ಆಗಿತ್ತು. ಪೊಲೀಸ್ ಸಿಬ್ಬಂದಿ ಹೊರತುಪಡಿಸಿ ಭಕ್ತರು ದೇಗುಲದತ್ತ ಸುಳಿಯಲಿಲ್ಲವಾದ್ದರಿಂದ ದೇವಾಲಯದ ಒಳ ಮತ್ತು ಹೊರ ಆವರಣ ಬಿಕೋ ಎನ್ನುತ್ತಿತ್ತು.
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಶ್ರೀ ಹಾಸನಾಂಬ ದೇಗುಲದ ಬಾಗಿಲನ್ನು ಅ.13ರಂದು ತೆರೆದ ನಂತರ ಪ್ರತಿ ದಿನವೂ ಸಾವಿರಾರು ಭಕ್ತರು ದೇವಿ ದರ್ಶನಕ್ಕೆ ಬರುತ್ತಿದ್ದರು.
ಸೂರ್ಯಗ್ರಹಣದ ಪರಿಣಾಮ ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ದೇಗುಲ ವನ್ನು ಬಂದ್ ಮಾಡಿ ಮುಖ್ಯಪ್ರವೇಶ ದ್ವಾರ ಸೇರಿ ಎಲ್ಲ ದ್ವಾರಗಳ ಬಾಗಿಲುಗಳಿಗೂ ಬೀಗ ಹಾಕಲಾಗಿತ್ತು.
ಬುಧವಾರ ಹಾಸನಾಂಬೆಗೆ ಮಹಾ ನೈವೇದ್ಯ ಅರ್ಪಣೆ ಸಮಯ ಹೊರತುಪಡಿಸಿ ಬೆಳಗ್ಗೆ 6 ರಿಂದ ಗುರುವಾರ ಬೆಳಗ್ಗೆ 7 ಗಂಟೆವರೆಗೂ ನಿರಂತರವಾಗಿ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಗುರುವಾರ 7 ಗಂಟೆಯ ನಂತರ ಭಕ್ತರಿಗೆ ದರ್ಶನ ಬಂದ್ ಮಾಡಿ ದೇವಿ ಆಭರಣಗಳನ್ನು ತೆಗೆದು ಅಲಂಕಾರ ವಿಸರ್ಜನೆ ಹಾಗೂ ವಿಶೇಷ ಪೂಜೆ ನಂತರ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಯವರು ಹಾಗೂ ದೇವಾಲಯದ ಆಡಳಿತಾಧಿಕಾರಿಯವರ ಸಮ್ಮುಖದಲ್ಲಿ ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.