ಟಿ20 ವಿಶ್ವಕಪ್‌: ಐರ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ ಫೇವರಿಟ್‌


Team Udayavani, Oct 26, 2022, 8:30 AM IST

ಟಿ20 ವಿಶ್ವಕಪ್‌: ಐರ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ ಫೇವರಿಟ್‌

ಮೆಲ್ಬರ್ನ್: ಟಿ20 ವಿಶ್ವಕಪ್‌ ಕೂಟದಲ್ಲಿ ಬುಧವಾರ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯವು ಇಂಗ್ಲೆಂಡ್‌ ಮತ್ತು ಐರ್ಲೆಂಡ್‌ ಹಾಗೂ ಇನ್ನೊಂದು ಪಂದ್ಯವು ನ್ಯೂಜಿಲ್ಯಾಂಡ್‌ ಮತ್ತು ಅಘಾ^ನಿಸ್ಥಾನ ನಡುವೆ ನಡೆಯಲಿದೆ.

ಬೆಳಗ್ಗೆ ನಡೆಯುವ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲುವ ಫೇವರಿಟ್‌ ತಂಡವಾಗಿದೆ. ಆರಂಭಿಕ ಪಂದ್ಯದಲ್ಲಿ ಅಘಾನಿಸ್ಥಾನವನ್ನು ಕಠಿನ ಹೋರಾಟದಲ್ಲಿ ಸೋಲಿಸಿ ಗೆಲುವಿನೊಂದಿಗೆ ವಿಶ್ವಕಪ್‌ ಅಭಿಯಾನ ಆರಂಭಿಸಿದ್ದ ಇಂಗ್ಲೆಂಡ್‌ ತಂಡವು ಐರ್ಲೆಂಡ್‌ ತಂಡವನ್ನು ಹಗುರವಾಗಿ ಕಾಣುವುದಿಲ್ಲ ಎಂದು ಹೇಳಿದೆ. ಐರ್ಲೆಂಡ್‌ ಬಗ್ಗೆ ನಮಗೆ ದೊಡ್ಡ ಗೌರವವಿದೆ. ಆದರೆ ಈ ಪಂದ್ಯವನ್ನು ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಲಿದ್ದೇವೆ ಎಂದು ನಾಯಕ ಜಾಸ್‌ ಬಟ್ಲರ್‌ ಹೇಳಿದ್ದಾರೆ.

ಐರ್ಲೆಂಡ್‌ ಈ ಹಿಂದೆ ವಿಶ್ವಕಪ್‌ ಪಂದ್ಯಗಳಲ್ಲಿ ಅಚ್ಚರಿಯ ಫ‌ಲಿತಾಂಶಕ್ಕೆ ಕಾರಣವಾದ ತಂಡಗಳಲ್ಲಿ ಒಂದಾಗಿದೆ. 2011ರ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ ಅದು ಇಂಗ್ಲೆಂಡ್‌ ತಂಡವನ್ನು ಸೋಲಿಸಿತ್ತು. ಇನ್ನೊಮ್ಮೆ ವೆಸ್ಟ್‌ಇಂಡೀಸ್‌ ತಂಡವನ್ನು ದ್ವಿತೀಯ ಸುತ್ತಿನಿಂದಲೇ ಹೊರಹಾಕಿತ್ತು.

ವಿಶ್ವಕಪ್‌ ಗೆಲ್ಲುವ ಫೇವರಿಟ್‌ ತಂಡಗಳಲ್ಲಿ ಇಂಗ್ಲೆಂಡ್‌ ಒಂದಾಗಿದೆ. ಪಾಕಿಸ್ಥಾನ ಮತ್ತು ಆಸ್ಟ್ರೇಲಿಯ ವಿರುದ್ಧ ತಂಡದ ಅಮೋಘ ನಿರ್ವಹಣೆಯೇ ಇದಕ್ಕೆ ಕಾರಣವಾಗಿದೆ. ಅಘಾ^ನಿಸ್ಥಾನ ವಿರುದ್ಧವೂ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿ ತಂಡವನ್ನು ಕೇವಲ 112 ರನ್ನಿಗೆ ನಿಯಂತ್ರಿಸಿತ್ತು. ಫಾರ್ಮ್ನಲ್ಲಿರುವ ಸ್ಯಾಮ್‌ ಕರನ್‌ ಐದು ವಿಕೆಟ್‌ ಕಿತ್ತು ಮಿಂಚಿದರೆ ಬೆನ್‌ ಸ್ಟೋಕ್ಸ್‌ ಮತ್ತು ಮಾರ್ಕ್‌ ವುಡ್‌ ತಲಾ ಎರಡು ವಿಕೆಟ್‌ ಹಾರಿಸಿದ್ದರು. ಇಂಗ್ಲೆಂಡ್‌ ಬ್ಯಾಟಿಂಗ್‌ನಲ್ಲಿ ಸ್ವಲ್ಪಮಟ್ಟಿಗೆ ಎಡವಿದರೂ ಅಂತಿಮವಾಗಿ 5 ವಿಕೆಟ್‌ಗಳಿಂದ ಪಂದ್ಯ ಗೆಲ್ಲಲು ಯಶಸ್ವಿಯಾಗಿತ್ತು. ಲಿಯಮ್‌ ಲಿವಿಂಗ್‌ಸ್ಟೋನ್‌ ಅಜೇಯ 29 ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು.

ಐರ್ಲೆಂಡ್‌ ವಿರುದ್ಧವೂ ನಾವು ಬಹಳ ಎಚ್ಚರಿಕೆಯಿಂದ ಆಡಬೇಕಾಗಿದೆ. ಟಿ20 ಪಂದ್ಯದಲ್ಲಿ ಸ್ವಲ್ಪ ಎಡವಿದರೂ ಪಂದ್ಯವನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಪ್ರತಿಯೊಂದು ತಂಡವನ್ನು ಗಂಭೀರವಾಗಿ ತೆಗೆದುಕೊಂಡು ಜವಾಬ್ದಾರಿಯಿಂದ ಆಡಬೇಕಾಗಿದೆ ಎಂದು ಬಟ್ಲರ್‌ ಹೇಳಿದ್ದಾರೆ.

ಉತ್ತಮ ಸವಾಲು
ರೌಂಡ್‌ ರಾಬಿನ್‌ ಲೀಗ್‌ನಲ್ಲಿ ವೆಸ್ಟ್‌ಇಂಡೀಸ್‌ ಮತ್ತು ಸ್ಕಾಟ್ಲೆಂಡ್‌ ವಿರುದ್ಧ ಗೆಲುವು ಜಯ ಸಾಧಿಸಿದ್ದ ಐರ್ಲೆಂಡ್‌ ತಂಡವು ಸೂಪರ್‌ 12 ಹಂತದಲ್ಲೂ ಉತ್ತಮ ನಿರ್ವಹಣೆ ನೀಡಬಹುದೆಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳಿಂದ ಸೋತಿದ್ದ ಐರ್ಲೆಂಡ್‌ ತಂಡವು ಇಂಗ್ಲೆಂಡ್‌ ವಿರುದ್ಧ ಗೆಲ್ಲುವ ವಿಶ್ವಾಸದೊಂದಿಗೆ ಆಡಲಿದೆ.

ದೀರ್ಘ‌ ಸಮಯದವರೆಗೆ ನಾವು ಬಿಳಿ ಚೆಂಡಿನೊಂದಿಗೆ ಆಡಿಲ್ಲ. ಹಾಗಾಗಿ ಇದೊಂದು ನಮ್ಮ ಪಾಲಿಗೆ ಉತ್ತಮ ಸವಾಲು. ಈಹೋರಾಟದಲ್ಲಿ ನಮ್ಮ ತಂಡ ಇಂಗ್ಲೆಂಡಿನ ಬ್ಯಾಟಿಂಗ್‌ ಶಕ್ತಿಗೆ ಕಡಿವಾಣ ಹಾಕಲು ಪ್ರಯತ್ನಿಸಲಿದೆ ಎಂದು ಐರ್ಲೆಂಡ್‌ ತಂಡದ ಕೋಚ್‌ ಹೆನ್ರಿಚ್‌ ಮಾಲನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.