ವಾರ್ಡ್‌ಗೆ 50 ಲಕ್ಷ ಕನ್ನಡಿಯೊಳಗಿನ ಗಂಟು?ನಾಲ್ಕು ತಿಂಗಳಾದರೂ ಬಿಡಿಗಾಸಿಲ್ಲ

ಪಾಲಿಕೆ ಸಾಮಾನ್ಯ ಸಭೆಗೂ ಮಹಾಪೌರರು ಗೌನ್‌ ಧರಿಸದೆ ಬರಲು ನಿರ್ಧರಿಸಿದ್ದಾರೆ

Team Udayavani, Oct 26, 2022, 12:56 PM IST

ವಾರ್ಡ್‌ಗೆ 50 ಲಕ್ಷ ಕನ್ನಡಿಯೊಳಗಿನ ಗಂಟು?ನಾಲ್ಕು ತಿಂಗಳಾದರೂ ಬಿಡಿಗಾಸಿಲ್ಲ

ಹುಬ್ಬಳ್ಳಿ: ಪ್ರತಿ ವಾರ್ಡ್‌ಗೆ 50 ಲಕ್ಷ ರೂ.ನಂತೆ ಅಭಿವೃದ್ಧಿ ಕಾರ್ಯಕ್ಕೆ ನೀಡುವುದಾಗಿ ಮಹಾಪೌರರು ಘೋಷಿಸಿ ನಾಲ್ಕು ತಿಂಗಳು ಕಳೆದರೂ ಇದುವರೆಗೂ ಬಿಡಿಕಾಸು ಬಿಡುಗಡೆಯಾಗಿಲ್ಲ. ಅ. 28ರಂದು ನಡೆಯುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ವಿಷಯ ಅನುಮೋದನೆಗೆ ಬರಲಿದೆ ಎಂದು ಹೇಳಲಾಗುತ್ತಿದ್ದು, ಆ ಸಭೆಯಲ್ಲಿಯಾದರೂ ಅನುಮೋದನೆಗೊಂಡು ವಾರ್ಡ್‌ ಅಭಿವೃದ್ಧಿಗೆ ಹಣ ಬಂದೀತೆ ಎಂಬ ನಿರೀಕ್ಷೆ ಎಲ್ಲ ಸದಸ್ಯರದ್ದಾಗಿದೆ. ಆದರೆ, ಸದ್ಯದ ಸ್ಥಿತಿಯಲ್ಲಿ ಅದು ಕಷ್ಟಸಾಧ್ಯ ಎಂಬುದನ್ನು ವಾಸ್ತವದ ಸ್ಥಿತಿ ಹೇಳುತ್ತಿದೆ.

ಮಹಾಪೌರ ಈರೇಶ ಅಂಚಟಗೇರಿ ಅವರು ಮಹಾಪೌರರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದರು. ವಿಪಕ್ಷ-ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟುವ ಮೂಲಕ ಸ್ವಾಗತಿಸಿದ್ದರು. ಆದಷ್ಟು ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ನಾಲ್ಕು ತಿಂಗಳು ಕಳೆಯುತ್ತಿದ್ದರೂ ಅನುದಾನ ವಿಚಾರದಲ್ಲಿ ಯಾವುದೇ ಪ್ರಗತಿ ಕಾಣದಾಗಿದೆ.

ಪಾಲಿಕೆ ಸಭೆಯಲ್ಲಿ ಮಹಾಪೌರರೇ ಘೋಷಿಸಿದಂತೆ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ಅನುದಾನ ನೀಡಿಕೆಗೆ ಕ್ರಮ ಕೈಗೊಳ್ಳಬೇಕಾದ ಪಾಲಿಕೆ ಆಯುಕ್ತರು, ಇದನ್ನು ನೇರವಾಗಿ ಅನುಷ್ಠಾನಕ್ಕೆ ಮುಂದಾಗದೆ ವಿಷಯವನ್ನು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದ ನಂತರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

28ರಂದು ಮಂಡನೆ-ಅನುಮೋದನೆ?: ಅ.28ರಂದು ನಡೆಯುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಾರ್ಡ್‌ಗೆ 50 ಲಕ್ಷ ರೂ. ನೀಡಿಕೆಯ ಮಹಾಪೌರರ ಘೋಷಣೆಯನ್ನು ಮಂಡಿಸಿ ಅನುಮೋದನೆ ಪಡೆಯಲು ಪಾಲಿಕೆ ಆಯುಕ್ತರು ಮುಂದಾಗಿದ್ದಾರೆಯಾದರೂ, ಸಭೆ ನಡೆಯುವುದೇ ಎಂಬ ಶಂಕೆ ವ್ಯಕ್ತವಾಗಿದೆ.

ಮಹಾಪೌರರು ಗೌನ್‌ ಧರಿಸದಿರಲು ನಿರ್ಧರಿಸಿದ್ದು, ವಿಪಕ್ಷ ಸದಸ್ಯರು ಇದನ್ನು ವಿರೋಧಿಸಿದ ಪರಿಣಾಮ ಹಿಂದಿನ ಸಭೆಯೇ ಮೊಟಕುಗೊಂಡಿತ್ತು. ಅ.28ರಂದು ಧಾರವಾಡದಲ್ಲಿ ನಡೆಯುವ ಪಾಲಿಕೆ ಸಾಮಾನ್ಯ ಸಭೆಗೂ ಮಹಾಪೌರರು ಗೌನ್‌ ಧರಿಸದೆ ಬರಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಮಹಾಪೌರರು ಗೌನ್‌ ಧರಿಸದಿದ್ದರೆ ಸಭೆ ನಡೆಸಲು ಬಿಡುವುದಿಲ್ಲ ಎಂಬುದು ವಿಪಕ್ಷದವರ ಸ್ಪಷ್ಟ ನಿಲುವಾಗಿದೆ. ಇದರಿಂದ ಅ. 28ರಂದು ಸಾಮಾನ್ಯ ಸಭೆಯಲ್ಲಿ ಗದ್ದಲವಾಗಿ ಸಭೆ ಮುಂದೂಡಿಕೆಯಾದರೆ ವಾರ್ಡ್‌ಗೆ 50 ಲಕ್ಷ ರೂ. ನೀಡಿಕೆ ವಿಷಯ ಮಂಡನೆಯೂ ಸಾಧ್ಯವಾಗದು. ಅಲ್ಲಿಗೆ ವಿಷಯ ಮಂಡನೆ ಮತ್ತೂಂದು ತಿಂಗಳಿಗೆ
ಮುಂದೂಡಿಕೆಯಾದಂತಾಗಲಿದೆ.

ಮಂಡನೆಯಾದರೂ ಹಣ ದೊರಕೀತೇ?
ಸಾಮಾನ್ಯ ಸಭೆಯಲ್ಲಿ ಮಂಡನೆಯಾಗಿ ಅನುಮೋದನೆ ಪಡೆದರೂ ಹಣ ನೀಡಿಕೆ ಸಾಧ್ಯವೇ? ಪ್ರತಿ ವಾರ್ಡ್‌ಗೆ 50 ಲಕ್ಷ ರೂ.ನಂತೆ ಒಟ್ಟು 82 ವಾರ್ಡ್‌ ಗಳಿಗೆ ಅಂದಾಜು 41 ಕೋಟಿ ರೂ. ಹಣ ಬೇಕಾಗುತ್ತದೆ. ಸದ್ಯದ ಪಾಲಿಕೆ ಆರ್ಥಿಕ ಸ್ಥಿತಿಯಲ್ಲಿ ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಎಲ್ಲಿಂದ ಹೊಂದಿಕೆ ಮಾಡುವುದು ಎಂಬುದು ಯಕ್ಷಪ್ರಶ್ನೆಯಾಗಿದೆ. ಕೆಲ ಮೂಲಗಳ ಪ್ರಕಾರ ಪಾಲಿಕೆಗೆ ಇಲ್ಲಿವರೆಗೆ ಅಂದಾಜು 30 ಕೋಟಿ ರೂ. ಆದಾಯ ಸಂಗ್ರಹವಾಗಿದ್ದು, ಡಿಸೆಂಬರ್‌-ಜನವರಿ ವೇಳೆಗೆ ಇನ್ನು 100 ಕೋಟಿ ರೂ. ಆದಾಯ ಸಂಗ್ರಹವಾಗಬಹುದು ಎಂದು ಅಂದಾಜಿಸಲಾಗಿದೆ. ಒಟ್ಟಾರೆ 130 ಕೋಟಿ ರೂ. ಬರಬಹುದು ಎಂಬ ನಿರೀಕ್ಷೆ ಇದೆ.

ಮತ್ತೊಂದು ಕಡೆ ಪಾಲಿಕೆಯಿಂದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕಾರ್ಯಾದೇಶ (ವರ್ಕ್‌ ಆರ್ಡರ್‌) ನೀಡಿದ ಮೊತ್ತವೇ ಅಂದಾಜು 300 ಕೋಟಿ ರೂ. ಆಗಿದೆ. ಈಗಾಗಲೇ ಕಾರ್ಯಾದೇಶ ನೀಡಿದ ಕಾಮಗಾರಿಗಳಿಗೆ ನೀಡಬೇಕಾದ ಹಣದ ಅರ್ಧದಷ್ಟು ಆದಾಯ ಪಾಲಿಕೆ ಬರುವುದಿಲ್ಲ ಎಂದಾದರೆ, ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ಯಾವ ಬಾಬತ್ತಿನಿಂದ ನೀಡಲಾಗುತ್ತದೆ ಎಂಬ ಪ್ರಶ್ನೆ ಕಾಡತೊಡಗಿದೆ.

ಗುತ್ತಿಗೆದಾರರ ಹಿಂದೇಟು
ಪಾಲಿಕೆಯಿಂದ ಬರಬೇಕಾದ ಬಾಕಿ ಹಣದ ಹಿನ್ನೆಲೆಯಲ್ಲಿ ಪಾಲಿಕೆ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ಸ್ಥಿತಿ ಮುಂದುವರಿದರೆ ಪಾಲಿಕೆ ಕಾಮಗಾರಿ ಗುತ್ತಿಗೆ ಪಡೆಯುವುದಕ್ಕೂ ಗುತ್ತಿಗೆದಾರರು ಸಿಗದ ಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕ ಅನೇಕರದ್ದಾಗಿದೆ.

ಗೊಂದಲ-ಶಂಕೆ
ರಾಷ್ಟ್ರಪತಿ ಪೌರಸನ್ಮಾನಕ್ಕಾಗಿ ಕೈಗೊಂಡ ಕಾರ್ಯಗಳ ಹಣವನ್ನೇ ಇನ್ನು ನೀಡಿಲ್ಲ ಎಂದು ಹೇಳಲಾಗುತ್ತಿದೆ. ಇಂತಹ ಸ್ಥಿತಿಯಲ್ಲಿ ಪ್ರತಿ ವಾರ್ಡ್‌ಗೆ 50 ಲಕ್ಷ ರೂ. ನೀಡಲು ಸಾಧ್ಯವೆ ಎಂಬ ಗೊಂದಲ-ಶಂಕೆ ಅನೇಕ ಸದಸ್ಯರನ್ನು ಕಾಡುತ್ತಿದೆ. ಈ ಬಗ್ಗೆ ಮಹಾಪೌರರು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದ್ದು, ತಾವು ಮಾಡಿದ ಘೋಷಣೆಯಂತೆ ಆದಷ್ಟು ಶೀಘ್ರ ವಾರ್ಡ್‌ಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಬೇಕು. ಇಲ್ಲವಾದರೆ, ಮಹಾಪೌರರ ಘೋಷಣೆ ನಮ್ಮ ಮೂಗಿಗೆ ಸವರಿದ ತುಪ್ಪದಂತಾಗಲಿದೆ ಎಂಬ ಅನಿಸಿಕೆ ಹಲವು ಸದಸ್ಯರದ್ದಾಗಿದೆ.

ಅಮರೇಗೌಡ ಗೋನವಾರ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.