ಮಂಗಳೂರು: “ದಂಡ’ ವಸೂಲಿಗೆ ನಕಲಿ ಪೊಲೀಸರ “ಚಾಟಿಂಗ್‌’ ಅಸ್ತ್ರ ! 


Team Udayavani, Oct 28, 2022, 7:50 AM IST

“ದಂಡ’ ವಸೂಲಿಗೆ ನಕಲಿ ಪೊಲೀಸರ “ಚಾಟಿಂಗ್‌’ ಅಸ್ತ್ರ ! 

ಮಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರನ್ನು ನಾನಾ ರೂಪದಲ್ಲಿ ವಂಚಿಸಿ ಹಣ ಗಳಿಸುತ್ತಿರುವ ಖದೀಮರು ಈಗ ಸೈಬರ್‌ ಪೊಲೀಸರ ಹೆಸರಿನಲ್ಲಿ ವಂಚನೆಗೆ ದಾಳ ಎಸೆದಿದ್ದಾರೆ.

ವಂಚಕರು ಈಗ ಪೊಲೀಸ್‌ ವೇಷದಲ್ಲಿ “ದಂಡ’ ವಸೂಲಿಗೆ ಮುಂದಾಗಿದ್ದಾರೆ. ನೇರವಾಗಿ ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ಬಲೆಗೆ ಕೆಡವುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ರೊಂದಿಗಿನ “ಚಾಟಿಂಗ್‌’ (ಸಂಭಾಷಣೆ) ವಿಚಾರ ಮುಂದಿಟ್ಟು ವಂಚಿಸಲಾಗುತ್ತಿದೆ. ಹೆಚ್ಚಾಗಿ ಯುವಜನರನ್ನೇ ಗುರಿ ಮಾಡಲಾಗುತ್ತಿದೆ.

ರಶೀದಿಯೂ ಸಿದ್ಧ:

ದಂಡದ ಮೊತ್ತ ಪಾವತಿಸುವವರಿಗೆ ಪೊಲೀಸ್‌ ಇಲಾಖೆಯದ್ದು ಎಂದು ಬಿಂಬಿಸುವ ನಕಲಿ ರಶೀದಿಯನ್ನು ಕೂಡ ನೀಡಲಾಗುತ್ತದೆ. ಈ ರೀತಿ ಸಂದೇಶ ಕಳುಹಿಸುವವರ ವಾಟ್ಸ್‌ಆ್ಯಪ್‌ ಅಥವಾ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಪೊಲೀಸ್‌ ಅಧಿಕಾರಿಗಳ ಪೊಟೋ ಇರುತ್ತದೆ. ಜತೆಗೆ ಸರಕಾರಿ ಅಧಿಕಾರಿ ಎಂದು ಉಲ್ಲೇಖೀಸಲಾಗುತ್ತದೆ ಎಂದು ಸೈಬರ್‌ ಭದ್ರತಾ ತಜ್ಞರು ಹಾಗೂ ಈ ರೀತಿಯ ಸಂದೇಶಗಳನ್ನು ಸ್ವೀಕರಿಸಿದವರು ತಿಳಿಸಿದ್ದಾರೆ.

ಪೋರ್ನ್’ ಹೆಸರಲ್ಲೂ ದೋಖಾ!:

ಇನ್ನು ಕೆಲವರಿಗೆ ಪೋರ್ನ್ ವೀಡಿಯೋ (ಅಶ್ಲೀಲ ದೃಶ್ಯಗಳು) ಹೆಸರಿನಲ್ಲಿ ಹೆದರಿಸಿ ಹಣ ಪಡೆಯಲಾಗುತ್ತಿದೆ. “ನೀವು ಅಶ್ಲೀಲ ದೃಶ್ಯಗಳನ್ನು ವೀಕ್ಷಿಸಿದ್ದೀರಿ. ನಿಮ್ಮ ವಾಟ್ಸ್‌ ಆ್ಯಪ್‌ನಲ್ಲಿ ಅಶ್ಲೀಲ ದೃಶ್ಯ ರವಾನೆಯಾಗಿದೆ’ ಎಂಬಿತ್ಯಾದಿ ಸಂದೇಶ ಕಳುಹಿಸಲಾಗುತ್ತದೆ. ಅಲ್ಲದೆ “ನಿಮ್ಮ ವಿರುದ್ಧ ಪ್ರಕರಣ ದಾಖಲಾಗುವುದನ್ನು ತಪ್ಪಿಸಬೇಕಾದರೆ ಹಣ ನೀಡಬೇಕು’ ಎಂದು ಹೆದರಿಸಲಾಗುತ್ತದೆ. ಇದು ಕೂಡ ಪೊಲೀಸರ ಹೆಸರಿನಲ್ಲಿ ನಡೆಯುವ ಮೋಸ.

ತುರ್ತು ಪಾವತಿಗೂ ಉಪಾಯ:

ಈ ರೀತಿಯಾಗಿ ಮೋಸದ ಜಾಲಕ್ಕೆ ಒಡ್ಡುವ ವಂಚಕರು ಹಣ ಪಾವತಿಗೆ ತುರ್ತು ಸ್ಥಿತಿ (ಸೆನ್ಸ್‌ ಆಫ್ ಅರ್ಜೆನ್ಸಿ) ಸೃಷ್ಟಿ ಮಾಡುತ್ತಾರೆ. “ನೀವು ಈಗಲೇ ದಂಡದ ಮೊತ್ತ ಅಥವಾ ಹಣ ಪಾವತಿಸಿದರೆ ಮೊತ್ತದಲ್ಲಿ ಕಡಿಮೆ ಮಾಡುತ್ತೇವೆ. ವಿಳಂಬವಾದರೆ ಹೆಚ್ಚು ನೀಡಬೇಕಾಗುತ್ತದೆ’ ಎಂದು ಹೇಳುತ್ತಾರೆ. ಹಾಗಾಗಿ ಕೆಲವು ಮಂದಿ ಕೂಡಲೇ ಪಾವತಿಸಲು ಮುಂದಾಗಿ ವಂಚನೆಗೊಳಗಾಗುತ್ತಾರೆ.

ಅಶ್ಲೀಲ ಚಿತ್ರದ ಭಯ:

ವಂಚಕರು ತಮಗೆ ಸಿಗುವ ಮೊಬೈಲ್‌ ನಂಬರ್‌ಗಳಿಗೆ ಇಂತಹ ಸಂದೇಶಗಳನ್ನು ಕಳುಹಿಸುತ್ತ ಹೋಗುತ್ತಾರೆ. ಕೆಲವು ಮಂದಿ ಅವರ ಬಲೆಗೆ ಬಿದ್ದರೂ ಉದ್ದೇಶ ಈಡೇರುತ್ತದೆ. ಕೆಲವರು ಹಲವು ವಾಟ್ಸ್‌ ಆ್ಯಪ್‌ ಗ್ರೂಪ್‌ಗ್ಳಲ್ಲಿರುತ್ತಾರೆ. ಆಗ ಯಾವುದಾದರೊಂದು ಗ್ರೂಪ್‌ನಿಂದ ಅವರಿಗೆ ಗೊತ್ತಿಲ್ಲದಂತೆಯೇ ಅಶ್ಲೀಲ ಚಿತ್ರ, ವೀಡಿಯೋ ಅವರ ಮೊಬೈಲ್‌ ಸೇರಿರಬಹುದು. ಇಂತಹ ಸಂದರ್ಭದಲ್ಲಿ ಪೊಲೀಸರೆಂದು ಹೇಳಿ ಯಾರಾದರೂ ಕರೆ ಮಾಡಿ “ನಿಮ್ಮ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳಿವೆ’ ಎಂದು ಹೆದರಿಸಿದರೆ ಆತಂಕ ಹೆಚ್ಚಾಗಿ ಮೋಸ ಹೋಗುವ ಸಾಧ್ಯತೆ ಇರುತ್ತದೆ ಎನ್ನುತ್ತಾರೆ ಸೈಬರ್‌ ಭದ್ರತಾ ತಜ್ಞರು.

ಡಾಟಾಬೇಸ್‌ ಸೇಲ್‌ :

ಮೊಬೈಲ್‌ ಬಳಕೆದಾರರ ನಂಬರ್‌ಗಳು ಕೆಲವು ಖದೀಮರಿಗೆ ಸುಲಭವಾಗಿ ಸಿಗುತ್ತದೆ. ಬಳಕೆದಾರರ ಮೊಬೈಲ್‌ ಸಂಖ್ಯೆಗಳನ್ನು ಸಂಗ್ರಹಿಸಿ ಮಾರಾಟ ಮಾಡುವವರೂ ಇದ್ದಾರೆ. ವಿದ್ಯಾರ್ಥಿಗಳು, ಕಾರು ಮಾಲಕರು ಹೀಗೆ ವಿವಿಧ ವರ್ಗಗಳ ಗ್ರಾಹಕರ ಮೊಬೈಲ್‌ ಸಂಖ್ಯೆ (ಡಾಟಾ ಬೇಸ್‌) ಮಾರಾಟ ಮಾಡುವ ಸಂಸ್ಥೆಗಳು ಕೂಡ ಇವೆ.

ಅರೆಸ್ಟ್‌ಗೆ ಬರುತ್ತಿದ್ದೇವೆ… ! :

“ನಾವು ಸೈಬರ್‌ ಪೊಲೀಸರು. ನಿನ್ನೆ ರಾತ್ರಿ ನೀವು ಒಂದು ಹುಡುಗಿಯೊಂದಿಗೆ ವಾಟ್ಸ್‌ ಆ್ಯಪ್‌ನಲ್ಲಿ ಮಾತನಾಡಿದ್ದೀರಿ, ಅವಳೊಂದಿಗೆ ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಚಾಟ್‌ ಮಾಡಿದ್ದೀರಿ. ಅವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳ ಮೊಬೈಲ್‌ನಲ್ಲಿ ನಿಮ್ಮ ನಂಬರ್‌ ಇತ್ತು. ನಿಮ್ಮಂತಹ 8 ಮಂದಿಯನ್ನು ಬಂಧಿಸಲಾಗಿದೆ. ನಿಮ್ಮ ವಿರುದ್ಧ ಕೂಡ ಎಫ್ಐಆರ್‌ ದಾಖಲಿಸಲಾಗಿದ್ದು, ಕೂಡಲೇ ಬಂಧಿಸಲಾಗುವುದು. ಒಂದು ವೇಳೆ ಇದರಿಂದ ಬಚಾವ್‌ ಆಗಬೇಕಾದರೆ ದಂಡದ ಹಣ ನೀಡಬೇಕು’ ಎಂಬ ಸಂದೇಶ ಕಳುಹಿಸಲಾಗುತ್ತದೆ. ಅಲ್ಲದೆ ಕೂಡಲೇ ಕರೆ ಮಾಡುವಂತೆ ಒಂದು ಮೊಬೈಲ್‌ ಸಂಖ್ಯೆಯನ್ನು ಕೂಡ ಕಳುಹಿಸಲಾಗುತ್ತದೆ. ಕರೆ ಸ್ವೀಕರಿಸಿದರೆ ಇನ್ನಷ್ಟು ಹೆದರಿಸಲಾಗುತ್ತದೆ. ಆನ್‌ಲೈನ್‌ ಮೂಲಕ ಹಣ ಪಾವತಿಸಿಕೊಳ್ಳಲಾಗುತ್ತದೆ.

ಪೊಲೀಸರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಕಂಡುಬಂದಿದೆ. ಆದರೆ ಪೊಲೀಸರು ಸಾಮಾಜಿಕ ಜಾಲತಾಣಗಳ ಮೂಲಕ ಸಂದೇಶ, ನೋಟಿಸ್‌ ಕಳುಹಿಸುವುದಿಲ್ಲ. ಆತಂಕಕ್ಕೊಳಗಾಗಿ ಹಣ ಪಾವತಿಸುವ ಅಗತ್ಯವಿಲ್ಲ. ಡಾ| ಅನಂತ ಜಿ. ಪ್ರಭು, ಸೈಬರ್‌ ಭದ್ರತಾ ತಜ್ಞ, ಮಂಗಳೂರು

ಈ ಹಿಂದೆ ಲೋನ್‌ ನೀಡಿ ಅನಂತರ ಮರುಪಾವತಿಸುವಂತೆ ಸತಾಯಿಸಿ ಸಾಲ ಗಾರರು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿದ್ದ “ಲೋನ್‌ ಆ್ಯಪ್‌’ಗಳನ್ನು ಸರಕಾರ ನಿಷೇಧಿ

ಸಿದೆ. ಇದೇ ರೀತಿ ಅಶ್ಲೀಲ ಚಿತ್ರಗಳ ವಿಷಯ ಮುಂದಿಟ್ಟು ಬೇರೆ ಬೇರೆ ರೀತಿಯಲ್ಲಿ ವಂಚಿಸುವ ಸಾಧ್ಯತೆಗಳಿವೆ. ಆಮಿಷ, ಬೆದರಿಕೆ ಬಗ್ಗೆ ಪ್ರತಿಕ್ರಿಯಿಸದೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಸತೀಶ್‌, ಇನ್‌ಸ್ಪೆಕ್ಟರ್‌, ಸೆನ್‌ ಠಾಣೆ ಮಂಗಳೂರು

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.