16 ಕಂಪೆನಿಗಳಿಂದ 1,275ಕೋ. ರೂ. ಹೂಡಿಕೆ ಒಡಂಬಡಿಕೆ
ಎಫ್ಎಂಸಿಜಿ ಕ್ಲಸ್ಟರ್ ಹೂಡಿಕೆದಾರರ ಸಮಾವೇಶ
Team Udayavani, Oct 28, 2022, 11:21 PM IST
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 16 ಕಂಪೆನಿಗಳಿಂದ 1,275 ಕೋಟಿ ರೂ.ಗಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕ್ಲಸ್ಟರ್ ಮೂಲಕ ಮೊದಲ ಹಂತದಲ್ಲಿ ಅಂದಾಜು 9,100 ಉದ್ಯೋಗ ಸೃಷ್ಟಿಯಾಗುವುದಾಗಿ ತಿಳಿಸಲಾಗಿದೆ.
ಇಲ್ಲಿನ ಡೆನಿಸನ್ಸ್ ಹೊಟೇಲ್ನಲ್ಲಿ ಜರಗಿದ ಎಫ್ಎಂಸಿಜಿ ಕ್ಲಸ್ಟರ್ ಬಂಡವಾಳ ಹೂಡಿಕೆದಾರರ ಸಮಾವೇಶ ಹಾಗೂ ಒಡಂಬಡಿಕೆ ಸಮಾರಂಭದಲ್ಲಿ ರಾಜ್ಯ ಹಾಗೂ ನೆರೆ ರಾಜ್ಯದ ವಿವಿಧ ಉದ್ಯಮಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ವಿವಿಧ ಸಚಿವರ ಸಮ್ಮುಖದಲ್ಲಿ ಒಡಂಡಿಕೆಗೆ ಸಹಿ ಮಾಡಿಕೊಂಡರು.
ದೇಶದ ಆರ್ಥಿಕ ಬೆಳವಣಿಗೆಗೆ ಶಕ್ತಿ
ಎಫ್ಎಂಸಿಜಿ ವಲಯ ದೇಶದ ಆರ್ಥಿಕತೆ ಬದಲಾವಣೆಗೆ ಮಹತ್ವದ ಶಕ್ತಿಯಾಗಲಿದೆ. ಇದು ಉದ್ಯೋಗ ಸೃಷ್ಟಿಗೆ ಬಹುದೊಡ್ಡ ಸಹಕಾರಿ ಆಗಲಿದೆ. ಅಂತಹ ವಲಯಕ್ಕೆ ತಾಣವಾಗುವ ಮೂಲಕ ಹುಬ್ಬಳ್ಳಿ-ಧಾರವಾಡ ಪ್ರಮುಖ ಸಾಧನೆಗೆ ಸಾಕ್ಷಿಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಹೊಟೇಲ್ ಡೆನಿಸನ್ಸ್ನಲ್ಲಿ ಶುಕ್ರವಾರ ಸಂಜೆ ಜರಗಿದ ಎಫ್ಎಂಸಿಜಿ ಹೂಡಿಕೆದಾರರ ಸಮಾವೇಶ ಹಾಗೂ ವಿವಿಧ ಕಂಪೆನಿಗಳಿಗೆ ಒಡಂಡಿಕೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಎಫ್ಎಂಸಿಜಿ ಉದ್ಯಮ ಉತ್ಪಾದನ ಹಾಗೂ ಸೇವಾ ವಲಯ ಎರಡರಲ್ಲೂ ತನ್ನದೇ ಆದ ಮಹತ್ವ ಹೊಂದಿದೆ.
ಸಾರಿಗೆ, ಉದ್ಯೋಗ ಸೃಷ್ಟಿ, ಆರ್ಥಿಕತೆ ಬೆಳವಣಿಗೆಗೆ ಸಹಕಾರಿ ಆಗಲಿದೆ. ಎಫ್ಎಂಸಿಜಿ ಉದ್ಯಮ ಜತೆಗೆ ಕೃಷಿಗೆ ಬೆಳವಣಿಗೆ ಕೂಡ ಅಗತ್ಯವಾಗಿದೆ. ಕೃಷಿ ಅವಲಂಬಿತರ ಸಂಖ್ಯೆ ಅಧಿಕವಾಗಿದ್ದು, ಉತ್ಪಾದನೆ ಕುಂಠಿತವಾಗುತ್ತಿದೆ. ಕೃಷಿಯಲ್ಲಿ ಶೇ.1ರಷ್ಟು ಬೆಳವಣಿಗೆಯಾದರೆ ಶೇ.4ರಷ್ಟು ಉತ್ಪಾದನ ವಲಯ ಬೆಳವಣಿಗೆಯಾದರೆ, ಶೇ.10 ಸೇವಾವಲಯ ಬೆಳವಣಿಗೆ ಆಗಲಿದೆ ಎಂದರು.
ಡಾ| ಟಿ.ವಿ.ಮೋಹನದಾಸ ಪೈ, ಉಲ್ಲಾಸ ಕಾಮತ್ ಮುಂತಾದ ಹಲವಾರು ಪ್ರಮುಖ ಉದ್ಯಮಿಗಳು ಉಪಸ್ಥಿತರಿದ್ದರು.
ವಿಶೇಷ ಕಾರಿಡಾರ್:
ಮುಂಬಯಿ- ಬೆಂಗಳೂರು ಕೈಗಾರಿಕಾ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆಯಡಿಯಲ್ಲಿ ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ 1,000 ಎಕ್ರೆ ಜಮೀನನ್ನು ಗುರುತಿಸಲಾಗುತ್ತಿದೆ. ಇದು ಉದ್ಯಮ ದೃಷ್ಟಿಯಿಂದ ಮಹತ್ವದ ಮೈಲುಗಲ್ಲು ಆಗಲಿದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ರೈಲು ಪ್ರಯಾಣ ಸುಮಾರು ಎರಡೂವರೆ ತಾಸು ಕಡಿತವಾಗುವಂತಾಗಲು ತುಮಕೂರು-ದಾವಣಗೆರೆ ನಡುವೆ ನೇರ ರೈಲು ಮಾರ್ಗಕ್ಕೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ. ವಂದೇ ಭಾರತ ರೈಲು ಸಂಚಾರ ಆರಂಭವಾದರೆ ಬೆಂಗಳೂರಿಗೆ ಮತ್ತಷ್ಟು ವೇಗವಾಗಿ ತಲುಪಬಹುದಾಗಿದೆ. ಹುಬ್ಬಳ್ಳಿ-ಬೆಳಗಾವಿ ನಡುವೆ ನೇರ ರೈಲು ಮಾರ್ಗಕ್ಕೆ 890 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅನುಮೋದನೆ ದೊರೆಯುವ ಹಂತಕ್ಕೆ ಬಂದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
BJP vs Congress ; ಕೇಸ್ ಮೇಲೆ ಕೇಸ್
CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು
Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.