ಉಡುಪಿ: ಅಂತಾರಾಜ್ಯ ಸರಗಳ್ಳನ ಬಂಧನ


Team Udayavani, Oct 29, 2022, 12:19 AM IST

ಉಡುಪಿ: ಅಂತಾರಾಜ್ಯ ಸರಗಳ್ಳನ ಬಂಧನ

ಉಡುಪಿ: ಉಡುಪಿ ನಗರದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರ್‌ರಾಜ್ಯ ಸರಗಳ್ಳ ದಾಂಡೇಲಿ ಪಟೇಲ್‌ ನಗರದ ನಿವಾಸಿ ಮೌಲಾಲಿ ಜಮಾದಾರ್‌ನನ್ನು ಬಂಧಿಸಿದ್ದಾರೆ.

ನಗರದ ಪ್ರೇಮಾ ಶೇಣವ ಅವರು ಅ. 3ರಂದು ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪಾಲ್ಗೊಂಡು ವಾಪಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಎಂಜಿಎಂ ಕಾಲೇಜಿನ ಮೈದಾನದ ಬಳಿ ಆರೋಪಿ ಪ್ರೇಮಾ ಅವರ ಕುತ್ತಿಗೆಗೆ ಕೈಹಾಕಿ 50 ಗ್ರಾಂ ತೂಕದ ಚಿನ್ನದ ಪಕಳದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಲಭ್ಯ ಸಿಸಿ ಟಿವಿ ಫ‌ೂಟೇಜ್‌ಗಳು ಹಾಗೂ ಮೊಬೈಲ್‌ ಕರೆ ವಿವರಗಳನ್ನು ಆಧರಿಸಿ ಆರೋಪಿ ಚಿನ್ನಾಭರಣಗಳನ್ನು ಧಾರವಾಡದ ಟೋಲ್‌ ನಾಕಾದ ಗೋಲ್ಡ್‌ ಶಾಪ್‌ವೊಂದರಲ್ಲಿ ಮಾರಾಟ ಮಾಡಿರುವುದು ತಿಳಿದುಬಂತು. ಅಲ್ಲದೆ 2021ರಲ್ಲಿ ಕಡಿಯಾಳಿಯಲ್ಲಿ ವೈದ್ಯರಾದ ಡಾ| ಪ್ರಜ್ಞಾ ಕೆ. ಶ್ರೀಕಾಂತ್‌ ಅವರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಬಗ್ಗೆ ಆರೋಪಿ ಒಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಆರೋಪಿ ಧಾರವಾಡದಲ್ಲಿ ಮಾರಾಟ ಮಾಡಿದ್ದ ಅಂದಾಜು 3 ಲ.ರೂ. ಮೌಲ್ಯದ 63 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಜೈಲು ವಾಸ ಅನುಭವಿಸಿದ್ದ
ಆರೋಪಿ ವಿರುದ್ದ ದಾಂಡೇಲಿ ಗ್ರಾಮಾಂತರ ಪೊಲೀಸ್‌ ಠಾಣೆ, ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್‌ ಠಾಣೆ, ಧಾರವಾಡದ ಅಳ್ನಾವರ ಪೊಲೀಸ್‌ ಠಾಣೆ ಹಾಗೂ ಗೋವಾ ರಾಜ್ಯದ ಮಡಗಾಂವ್‌ ಮತ್ತು ಪೋಂಡಾ ಪೊಲೀಸ್‌ ಠಾಣೆಗಳಲ್ಲಿ ಹಲವಾರು ಕಳವು ಪ್ರಕರಣಗಳು ದಾಖಲಾಗಿ, ಬಂಧನಕ್ಕೊಳಗಾಗಿ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದ. ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚಿಂದ್ರ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪೊಲೀಸ್‌ ನಿರೀಕ್ಷಕ ಪ್ರಮೋದ್‌ ಕುಮಾರ್‌, ಅಪರಾಧ ವಿಭಾಗದ ಸಿಬಂದಿಗಳಾದ ಸತೀಶ್‌, ಕಿರಣ್‌ ಕೆ., ಆನಂದ ಎಸ್‌., ಹೇಮಂತ್‌ ಕುಮಾರ್‌, ಶಿವಕುಮಾರ್‌ ಎಚ್‌.ಎಂ., ಮಲ್ಲಯ್ಯ ಹಿರೇಮಠ, ವಿಶ್ವನಾಥ ಶೆಟ್ಟಿ ಹಾಗೂ ಜಿಲ್ಲಾ ಪೊಲೀಸ್‌ ಕಚೇರಿಯ ಸಿಡಿಆರ್‌ ವಿಭಾಗದ ದಿನೇಶ್‌ ಮತ್ತು ನಿತಿನ್‌ ಕುಮಾರ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.