ಮಾಲೀಕನ ಕಪ್ಪುಹಣ ಎಂದು ಕದ್ದು ಸಿಕ್ಕಿಬಿದ್ದ !


Team Udayavani, Oct 29, 2022, 3:02 PM IST

tdy-4

ಬೆಂಗಳೂರು: ಮಾಲೀಕನ 75 ಲಕ್ಷ ರೂ. ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದ ಚಾಲಕ ಕೊನೆಗೂ ಬ್ಯಾಟರಾಯನಪುರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಹೊಸಕೋಟೆಯ ಸಂತೋಷ್‌ ಕುಮಾರ್‌ (28) ಬಂಧಿತ. ಈತನಿಂದ 72 ಲಕ್ಷ ರೂ. ನಗದು ಹಾಗೂ ಫೋರ್ಡ್‌ ಎಂಡೋವರ್‌ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಹಣ ಕಪ್ಪು ಹಣವಾಗಿದ್ದು, ಇದನ್ನು ಕದ್ದರೆ ಮಾಲೀಕರು ದೂರು ನೀಡುವುದಿಲ್ಲ ಎಂದು ಭಾವಿಸಿ ಈ ಕೃತ್ಯ ಎಸಗಿದ್ದಾನೆ. ಹುಸ್ಕೂರು ನಿವಾಸಿ ಉದ್ಯಮಿ ಹರೀಶ್‌ (29) ಅವರು 8 ತಿಂಗಳ ಹಿಂದೆ ಆರೋಪಿ ಸಂತೋಷ್‌ ಕುಮಾರ್‌ನನ್ನು ತಮ್ಮ ಕಾರಿನ ಚಾಲಕನನ್ನಾಗಿ ನೇಮಿಸಿಕೊಂಡಿದ್ದರು. ಅ.19ರಂದು ರಾತ್ರಿ 9 ಗಂಟೆಗೆ ಮನೆಯಿಂದ ಮೈಸೂರು ರಸ್ತೆಯ ಕುಂಬಳಗೋಡು ಬಳಿಯಿರುವ ರೆಸಾರ್ಟ್‌ಗೆ ಕಾರಿನಲ್ಲಿ ಚಾಲಕ ಸಂತೋಷ್‌ ಜತೆಗೆ ಹೋಗಿ ಪಾರ್ಟಿ ಮಾಡಿದ್ದರು. ಕೆಲ ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ಲ್ರಾಟ್‌ ಮಾರಾಟ ಮಾಡಿ ಬಂದ 75 ಲಕ್ಷ ರೂ. ಅನ್ನು ಕಾರಿನಲ್ಲಿ ಇಟ್ಟಿದ್ದರು. ಈ ವಿಚಾರ ಸಂತೋಷ್‌ ಗಮನಕ್ಕೆ ಬಂದಿತ್ತು. ನಂತರ ರಾತ್ರಿ 12 ಗಂಟೆಗೆ ಪಾರ್ಟಿ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಮಾರ್ಗ ಮಧ್ಯೆ ಸೆಟಲೈಟ್‌ ಬಸ್‌ ನಿಲ್ದಾಣದ ಬಳಿ ಕಾರು ನಿಲ್ಲಿಸುವಂತೆ ಸೂಚಿಸಿ ಸಿಗರೆಟ್‌ ತೆಗೆದುಕೊಂಡು ಬರಲು ಅಂಗಡಿಗೆ ಹೋಗಿದ್ದರು. ಹರೀಶ್‌ ಸಿಗರೆಟ್‌ ತೆಗೆದುಕೊಂಡು ವಾಪಸ್‌ ಬಂದಾಗ ಕಾರು ಇರಲಿಲ್ಲ. ಚಾಲಕ ಸಂತೋಷ್‌ಗೆ ಕರೆ ಮಾಡಿದಾಗ ಆತನ ಮೊಬೈಲ್‌ ಸ್ವಿಚ್ಡ್ ಆಫ್ ಆಗಿತ್ತು. ಆಗ ಸಂತೋಷ್‌ 75 ಲಕ್ಷ ರೂ. ಹಣ ಲಪಟಾಯಿಸಿರುವುದು ಹರೀಶ್‌ ಗಮನಕ್ಕೆ ಬಂದಿತ್ತು.

ಕಪ್ಪುಹಣ ಎಂದು ಭಾವಿಸಿದ್ದ ಆರೋಪಿ: ಹರೀಶ್‌ ಕಾರಿನಲ್ಲಿ 75 ಲಕ್ಷ ರೂ. ನಗದು ಇಟ್ಟಿರುವುದನ್ನು ಗಮನಿಸಿದ್ದೆ. ಇದು ಕಪ್ಪು ಹಣ ಇರಬಹುದು ಎಂದು ಭಾವಿಸಿ ಕಳ್ಳತನ ಮಾಡಿದ್ದೆ. ಹೀಗಾಗಿ ನನ್ನ ವಿರುದ್ಧ ಪೊಲೀಸರಿಗೆ ದೂರು ಕೊಡುವುದಿಲ್ಲ ಎಂದು ಭಾವಿಸಿದ್ದೆ. ಮೊದಲೇ ಸಂಚು ರೂಪಿಸಿ ಕೃತ್ಯ ಎಸಗಿರುವುದಾಗಿ ಆರೋಪಿ ಸಂತೋಷ್‌ ವಿಚಾರಣೆ ವೇಳೆ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಆರೋಪಿ ಸಿಕ್ಕಿ ಬಿದ್ದಿದ್ದು ಹೇಗೆ?: ಉದ್ಯಮಿ ಹರೀಶ್‌ ಅ.20ರಂದು ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಎಲ್ಲೆಡೆ ಶೋಧ ನಡೆಸಿದ್ದರು. ಸಂತೋಷ್‌ ಕುಟುಂಬಸ್ಥರಿಗೆ ಬರುವ ಮೊಬೈಲ್‌ ಕರೆಗಳ ಮೇಲೆ ನಿಗಾ ಇಟ್ಟಿದ್ದರು. ಸಂತೋಷ್‌ ಬೇರೆ ನಂಬರ್‌ನಿಂದ ಕುಟುಂಬಸ್ಥರಿಗೆ ವಾಟ್ಸ್‌ಆ್ಯಪ್‌ ಕರೆ ಮಾಡಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಮಾಹಿತಿ ಆಧರಿಸಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿ ಹೊಸಕೋಟೆಯಲ್ಲಿ ತಲೆಮರೆಸಿಕೊಂಡಿರುವುದು ಪತ್ತೆಯಾಗಿತ್ತು. ಕೂಡಲೇ ಆತನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.