ಸರ್ಕಾರಿ ಉದ್ಯೋಗಿಗಳ ಸಂಖ್ಯೆ ಶೀಘ್ರವೇ ಹೆಚ್ಚಳ; ದೇಶದಲ್ಲಿ ಉದ್ಯೋಗ ಪರ್ವ ಆರಂಭ: ಮೋದಿ


Team Udayavani, Oct 29, 2022, 8:45 PM IST

ಸರ್ಕಾರಿ ಉದ್ಯೋಗಿಗಳ ಸಂಖ್ಯೆ ಶೀಘ್ರವೇ ಹೆಚ್ಚಳ; ದೇಶದಲ್ಲಿ ಉದ್ಯೋಗ ಪರ್ವ ಆರಂಭ: ಮೋದಿ

ಗಾಂಧಿನಗರ: “ನಮ್ಮ ಸರ್ಕಾರವು 10 ಲಕ್ಷ ಉದ್ಯೋಗ ಸೃಷ್ಟಿಗೆ ಪ್ರಯತ್ನಿಸುತ್ತಿದೆ. ದೇಶದಲ್ಲೀಗ ಉದ್ಯೋಗ ಪರ್ವ ಆರಂಭವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶನಿವಾರ ಗುಜರಾತ್‌ ಸರ್ಕಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ದೇಶಿಸಿ ವರ್ಚುವಲ್‌ ಆಗಿ ಮಾತನಾಡಿದ ಅವರು, “ಸದ್ಯದಲ್ಲೇ ಸರ್ಕಾರಿ ಉದ್ಯೋಗದಲ್ಲಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ಉದ್ಯೋಗ ಮೇಳಗಳನ್ನು ನಡೆಸಲಾಗುತ್ತದೆ. ದೇಶಾದ್ಯಂತ 10 ಲಕ್ಷ ಉದ್ಯೋಗ ಸೃಷ್ಟಿಯೇ ನಮ್ಮ ಗುರಿ’ ಎಂದು ಹೇಳಿದ್ದಾರೆ.

ಇದೇ ವೇಳೆ, ಸಾವಿರಾರು ಉದ್ಯೋಗಾವಕಾಶ ಸೃಷ್ಟಿ ಮಾಡುವಂಥ ಹೊಸ ಕೈಗಾರಿಕಾ ನೀತಿಯನ್ನು ಜಾರಿ ಮಾಡಿದ ಗುಜರಾತ್‌ ಸರ್ಕಾರವನ್ನೂ ಮೋದಿ ಶ್ಲಾ ಸಿದ್ದಾರೆ. 3 ಮತ್ತು 4ನೇ ದರ್ಜೆಯ ಸರ್ಕಾರಿ ಹುದ್ದೆಗಳಿಗೆ ಸಂದರ್ಶನ ನಡೆಸದೇ ಇರುವಂಥ ನಿರ್ಧಾರದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗುಜರಾತ್‌ ಪಂಚಾಯತ್‌ ಸೇವಾ ಮಂಡಳಿಯಿಂದ 5 ಸಾವಿರ ಯುವಕರಿಗೆ, ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಮಂಡಳಿ ಮತ್ತು ಲೋಕರಕ್ಷಕ್‌ ನೇಮಕ ಮಂಡಳಿಯಿಂದ 8 ಸಾವಿರ ಮಂದಿಗೆ ಶನಿವಾರ ನೇಮಕಾತಿ ಪತ್ರವನ್ನು ಸಿಎಂ ಭೂಪೇಂದ್ರ ಪಟೇಲ್‌ ವಿತರಣೆ ಮಾಡಿದ್ದಾರೆ. ಜತೆಗೆ, ಪ್ರಸಕ್ತ ವರ್ಷ ಗುಜರಾತ್‌ ಸರ್ಕಾರವು ವರ್ಷಕ್ಕೆ 35 ಸಾವಿರ ಸರ್ಕಾರಿ ಉದ್ಯೋಗ ಒದಗಿಸುವ ಗುರಿಯನ್ನು ಸಾಧಿಸಿರುವುದಾಗಿ ಪಟೇಲ್‌ ಅವರು ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ದಾರೆ.

ಇನ್ನು, ಸೋಮವಾರ ಮೋದಿ ಅವರು ಸದ್ಯದಲ್ಲೇ ಚುನಾವಣೆ ಎದುರಿಸಲಿರುವ ಗುಜರಾತ್‌ನಲ್ಲಿ 2 ಪ್ರಮುಖ ರೈಲ್ವೆ ಲೈನ್‌ಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಕಪ್ಪು ಬಾವುಟದ ಸ್ವಾಗತ:
ಈ ನಡುವೆ, ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿ ನಡೆಸಲೆಂದು ಶನಿವಾರ ಆಗಮಿಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮತ್ತು ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಸಿಂಗ್‌ ಮಾನ್‌ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿದ್ದಾರೆ. ಜತೆಗೆ, “ಮೋದಿ, ಮೋದಿ’ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ. ರ್ಯಾಲಿ ವೇಳೆ ಈ ಬಗ್ಗೆ ಪ್ರಸ್ತಾಪಿಸಿದ ಕೇಜ್ರಿವಾಲ್‌, “ನನಗೆ ಕಪ್ಪುಬಾವುಟ ಪ್ರದರ್ಶಿಸಿದವರನ್ನು ನಾನು ನನ್ನ ಸಹೋದರರು ಎಂದು ಭಾವಿಸುತ್ತೇನೆ. ಒಂದಲ್ಲ ಒಂದು ದಿನ ಅವರ ಹೃದಯವನ್ನು ನಾನು ಗೆಲ್ಲುತ್ತೇನೆ ಮತ್ತು ಅವರೇ ನಮ್ಮ ಪಕ್ಷಕ್ಕೆ ಬರುವಂತೆ ಮಾಡುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ : ಎಸ್ಸೆಸ್ಸೆಲ್ಸಿ: ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.