67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ ರಾಜ್ಯ ಸರಕಾರ

ಪದ್ಮ ಮಾದರಿಯಲ್ಲಿ ಸಾಧಕರ ಆಯ್ಕೆ, ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯ

Team Udayavani, Oct 30, 2022, 6:31 PM IST

k-r

ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ.

ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಾಗಿದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, ತೆರೆಮರೆಯಲ್ಲಿದ್ದ ಅರ್ಹ ಸಾಧಕರು, ಸಮಾಜದ ಹಿತಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಹತ್ತು ಸಂಘ-ಸಂಸ್ಥೆಗಳನ್ನು ಸರಕಾರ ಗುರುತಿಸಿದೆ. ಸಾಧಕರನ್ನು ರಾಜ್ಯೋತ್ಸವ ಆಯ್ಕೆ ಸಮಿತಿ ಹಾಗೂ ಸರಕಾರವೇ ಗುರುತಿಸಿ ನೀಡಿರುವುದು ಈ ಬಾರಿಯ ವಿಶೇಷ.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಆದಾಗಿಯೂ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪಟ್ಟಿಯಲ್ಲಿರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದ್ದು, ಒಟ್ಟಾರೆಯಾಗಿ ಸಮತೂಕದ ಪಟ್ಟಿ ಸಿದ್ದಗೊಂಡಿದೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ : ಯಕ್ಷಗಾನ ತಾಳಮದ್ದಳೆ ಕ್ಷೇತ್ರದ ಪ್ರಸಿದ್ಧ ಅರ್ಥಧಾರಿ ಡಾ. ಎಂ.ಪ್ರಭಾಕರ ಜೋಷಿ (ಉಡುಪಿ), ಬಡಗುತಿಟ್ಟಿನ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ(ಉತ್ತರ ಕನ್ನಡ), ತೆಂಕು ತಿಟ್ಟಿನ ಹಿರಿಯ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ(ದಕ್ಷಿಣ ಕನ್ನಡ), ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ಎಂ. ಎ. ನಾಯ್ಕ್ (ಉಡುಪಿ) ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.

ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಜನಸಾಮಾನ್ಯಗೆ ಸಮ್ಮಾನ
ತೆರೆಮರೆಯಲ್ಲಿ ಸಾಧನೆ ಮಾಡಿದ ಜನಸಾಮಾನ್ಯರನ್ನು ಗುರುತಿಸುವಲ್ಲಿ ರಾಜ್ಯೋತ್ಸವ ಸಮಿತಿ ವಿಶೇಷ ಗಮನ ನೀಡಿದೆ. ಚಾಮರಾಜನಗರದ ಸೋಲಿಗರ ಮಾದಮ್ಮ, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿಯ ದೈವನರ್ತಕ, ಗುಡ್ಡ ಪಾಣಾರ, ಪರಿಸರ ಸಂರಕ್ಷಕ ಸಾಲುಮರದ ನಿಂಗಣ್ಣ, ಗೊಲ್ಲ ಸಮುದಾಯದ ಡಾ.ಕರಿಯಪ್ಪ, ಮುಖವೀಣೆ ಕಲಾವಿದ ಅಂಜನಪ್ಪ ಸತ್ಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.

ಅಸಾಮಾನ್ಯ ಸಾಧಕರು
ಸಾಮಾಜದ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸುವಲ್ಲೂ ಸಮಿತಿ ವಿಶೇಷ ಆಸಕ್ತಿ ನೀಡಿದೆ. ಈ ಪಟ್ಟಿಯಲ್ಲಿ ಇಸ್ರೋ ಮಾಜಿ ನಿರ್ದೇಶಕ ಶಿವಂ, ಸಾಹಿತಿ ಪ್ರೊ.ಕೃಷ್ಣೇಗೌಡ, ಅ.ರಾ.ಮಿತ್ರ, ವಿಭಿನ್ನ ಪಾತ್ರಗಳ ಮೂಲಕ ಚಲನಚಿತ್ರ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ದತ್ತಣ್ಣ, ಅವಿನಾಶ್ , ಕಿರುತೆರೆ ದಿಗ್ಗಜ ಸಿಹಿಕಹಿ ಚಂದ್ರು, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ಪ್ಯಾರಾ ಒಲಂಪಿಕ್‌ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ದಲಿತ ಯುವಕರನ್ನು ಉದ್ಯಮಿಯಾಗಿ ರೂಪಿಸುವಲ್ಲಿ ಅವಿರತ ಶ್ರಮಿಸಿದ ಕೋಲಾರದ ಉದ್ಯಮಿ ಜೆ,ಶ್ರೀನಿವಾಸನ್‌, ಶಿಕ್ಷಣ ತಜ್ಞ ಸುಬ್ಬರಾವ್‌ ಶೆಟ್ಟಿ ಅವರನ್ನು ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ, ಪ್ರಾದೇಶಿಕ ನ್ಯಾಯ ಸೇರಿದಂತೆ ಎಲ್ಲ ಆಯಾಮಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹತ್ತು ಸಮಾಜ ಸೇವಾ ಸಂಘಟನೆಗಳನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೈಸೂರಿನ ರಾಮಕೃಷ್ಣ ಆಶ್ರಮ, ಬೆಂಗಳೂರಿನ ಅಮೃತ ಶಿಶು ನಿವಾಸ, ಸುಮನಾ ಪೌಂಡೇಶನ್‌, ಹಾವೇರಿಯ ಅಗಡಿ ಫಾರ್ಮ್ಸ್‌ , ಗದಗ ಜಿಲ್ಲೆಯ ಲಿಂಗಾಯತ ಪ್ರಗತಿಶೀಲ ಸಂಸ್ಥೆ ಸೇರಿದಂತೆ ಹತ್ತು ಸಾಮಾಜಿಕ ಸಂಘಟನೆಯನ್ನು ಆಯ್ಕೆ ಮಾಡಲಾಗಿದೆ.

ಅತ್ಯಂತ ಸಮತೋಲಿತ
ಈ ವರ್ಷದ ರಾಜ್ಯೋತ್ಸವ ಪಟ್ಟಿ ಅತ್ಯಂತ ಸಮತೋಲಿತವಾಗಿದ್ದು, ಎಲೆಮರೆಯ ಸಾಧಕರನ್ನು ಗುರುತಿಸಲಾಗಿದೆ. ಎಲ್ಲ ಆಯಾಮಗಳಲ್ಲೂ ಅಳೆದು-ತೂಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿದ್ದೇವೆ. ಅಸಾಮಾನ್ಯ ಸಾಧನೆ ಮಾಡಿದ ಶ್ರೀಸಾಮಾನ್ಯರು, ಅರ್ಹ ಸಾಧಕರನ್ನು ಗುರುತಿಸಿದ್ದೇವೆ. ಒಂದರ್ಥದಲ್ಲಿ ಕೇಂದ್ರ ಸರ್ಕಾರದ ಪದ್ಮ ಪ್ರಶಸ್ತಿ ಮಾದರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ನಾವು ಆಯ್ಕೆ ಮಾಡಿದ ವ್ಯಕ್ತಿಗಳಲ್ಲಿ ಕೆಲವು ಸಾಧಕರು ಎಷ್ಟು ಮುಗ್ಧರಾಗಿದ್ದರೆಂದರೆ ನಿಮ್ಮ ಫೋಟೋ ಕೊಡಿ ಎಂದಾಗ, ಇಲ್ಲ ಎಂದು ಹೇಳಿದ್ದರು. ಅಷ್ಟರ ಮಟ್ಟಿಗೆ ಅವರು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಬಯಸದೇ ಕಾರ್ಯ ಸಾಧಕರಾಗಿದ್ದರು. ಇಂಥವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳುವುದಕ್ಕೆ ಅಭಿಮಾನವಾಗುತ್ತದೆ. ದೈವ ನರ್ತಕರು ಹಾಗೂ ವೀರಗಾಸೆ ಕಲಾವಿದರು, ಪೌರ ಸೇನಾನಿಗಳನ್ನು ಗೌರವಿಸಿದ್ದೇವೆ. ಈ ಆಯ್ಕೆಯಿಂದ ಪ್ರಶಸ್ತಿಯ ಮೌಲ್ಯ ನಿಜಕ್ಕೂ ಹೆಚ್ಚಿದೆ.

ವಿ.ಸುನಿಲ್‌ ಕುಮಾರ್‌ – ಕನ್ನಡ-ಸಂಸ್ಕೃತಿ ಹಾಗೂ ಇಂಧನ ಸಚಿವರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.