ಚುನಾವಣೆ ಬಂದಾಗ ಸಿದ್ದುಗೆ ಅಹಿಂದ ನೆನಪು: ಶ್ರೀರಾಮುಲು
Team Udayavani, Oct 31, 2022, 11:00 PM IST
ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯಗೆ ಚುನಾವಣೆ ಬಂದಾಗ ಮಾತ್ರ ಅಹಿಂದ ಸಮುದಾಯ ನೆನಪಾಗುತ್ತವೆ. ಅವರಿಗೆ ಅಹಿಂದ ನಾಯಕರೆಂದು ಕರೆಸಿಕೊಳ್ಳುವ ಅರ್ಹತೆಯೇ ಇಲ್ಲ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಹಾ ಸುಳ್ಳುಗಾರ. ಸುಳ್ಳೇ ಅವರ ಮನೆ ದೇವರು. ಅವರು ಕೊಟ್ಟ ಯಾವ ಮಾತನ್ನು ಯಾವತ್ತೂ ಉಳಿಸಿಕೊಂಡಿಲ್ಲ. ರಾಜ್ಯದ ಹಿಂದುಳಿದ ಜಾತಿಗಳು ಸಿದ್ದರಾಮಯ್ಯ ಅವರಿಂದ ಬೇಸತ್ತು ಹೋಗಿದ್ದಾರೆ.
ಸಿದ್ದರಾಮಯ್ಯ ಸರ್ಕಾರದಲ್ಲೇ ಪ್ರಧಾನ ಕಾರ್ಯದರ್ಶಿ ಅರವಿಂದ ಜಾಧವ ಮೀಸಲಾತಿ ನೀಡುವ ಕುರಿತು ವರದಿ ನೀಡಿದ್ದರು. ಆಗ ಏಕೆ ಮೀಸಲಾತಿ ಸಮಿತಿ ರಚಿಸಲಿಲ್ಲ, ಎಸ್ಸಿ, ಎಸ್ಟಿಗೆ ಸಿದ್ದರಾಮಯ್ಯ ಅವರಿಂದ ನ್ಯಾಯ ಕಲ್ಪಿಸಲು ಆಗಿಲ್ಲ. ಆದರೆ, ಬಸವರಾಜ ಬೊಮ್ಮಾಯಿ ಸಿಎಂ ಆದ ಮೇಲೆ ಮೀಸಲಾತಿ ಹೆಚ್ಚಿಸಲಾಗಿದೆ.
ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಹಿಂದುಳಿದ ವರ್ಗಗಳ ನಾಯಕ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಿಸಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.