ಪ್ರಕಾಶ ಕೋಳಿವಾಡ ದೂರದೃಷ್ಟಿ ಇತರರಿಗೆ ಮಾದರಿ

6 ಸಾವಿರಕ್ಕೂ ಅಧಿಕ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಫಲರಾಗಿದ್ದಾರೆ

Team Udayavani, Nov 2, 2022, 4:25 PM IST

ಪ್ರಕಾಶ ಕೋಳಿವಾಡ ದೂರದೃಷ್ಟಿ ಇತರರಿಗೆ ಮಾದರಿ

ರಾಣಿಬೆನ್ನೂರ: ಶೈಕ್ಷಣಿಕ ಪ್ರಗತಿ, ಆರೋಗ್ಯ ರಕ್ಷಣೆಯ ಜೊತೆಗೆ ತಾಲೂಕನ್ನು ನಿರುದ್ಯೋಗ ಮುಕ್ತ ಮಾಡುವ ಕನಸು ಕಂಡಿರುವ ಪಿಕೆಕೆ ಇನಿಷಿಯೇಟಿವ್‌ ಸಂಸ್ಥೆ ಅಧ್ಯಕ್ಷ ಹಾಗೂ ಕಾಂಗ್ರೆಸ್‌ ಯುವ ನಾಯಕ ಪ್ರಕಾಶ ಕೋಳಿವಾಡ ಅವರ ದೂರದೃಷ್ಟಿ ಇತರರಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದ ಬಿ.ಕೆ. ಗುಪ್ತಾ ಹೈಸ್ಕೂಲ್‌ ಆವರಣದಲ್ಲಿ ಮಂಗಳವಾರ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಅವರ 79ನೇ ಜನ್ಮದಿನದ ಅಂಗವಾಗಿ ಪಿಕೆಕೆ ಇನಿಷಿಯೇಟಿವ್‌ ಸಂಸ್ಥೆ ವತಿಯಿಂದ 79 ವಿವಿಧ ಸಂಸ್ಥೆಗಳಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ಸಂಕಷ್ಟ ಸಮಯದಲ್ಲಿ ಪ್ರಾಣಾಪಾಯದಲ್ಲಿದ್ದ ರೋಗಿಗಳಿಗೆ ಆಕ್ಸಿಜನ್‌ ವಿತರಣೆ, ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಗೆ ಸಂಚಾರಿ ಆಸ್ಪತ್ರೆ, ನಿರುದ್ಯೋಗಿಗಳಿಗೆ ಕಳೆದ 10 ವರ್ಷಗಳಿಂದ ಉದ್ಯೋಗ ಮೇಳ, ಈ ಬಾರಿ ವಿಕಲಚೇತನರಿಗೂ ಅವಕಾಶ, ಪಶುಗಳ ಆರೋಗ್ಯ ರಕ್ಷಣೆಗಾಗಿ ವಿಜ್ಞಾನಿಗಳಿಂದ ಪಶು ವೈದ್ಯರಿಗೆ ತರಬೇತಿ, ಗ್ರಾಮೀಣ ಭಾಗದ ಕಲಾವಿದರನ್ನು ಗುರುತಿಸಲು ವೇದಿಕೆ ಸೃಷ್ಟಿಸಿ ತನ್ಮೂಲಕ ಚಲನಚಿತ್ರಗಳಲ್ಲಿ ಹಾಡುವ ಅವಕಾಶ ನೀಡಿದ ಹೆಗ್ಗಳಿಕೆ ಇವರದಾಗಿದೆ ಎಂದರು.

ಯುವ ನಾಯಕ ಪ್ರಕಾಶ ಕೋಳಿವಾಡ ಅವರು ಎಂದೂ ಸಹ ಸ್ವಾರ್ಥದ ರಾಜಕಾರಣ ಮಾಡಿಲ್ಲ. ಸಮಾಜದ ದೂರದೃಷ್ಟಿ ಇಟ್ಟುಕೊಂಡು ಬಡವರ, ನಿರ್ಗತಿಕರ, ಶ್ರೀಸಾಮಾನ್ಯರ, ರೈತರ ಹಾಗೂ ನಾಗರಿಕರ ಸೇವೆಯನ್ನು ವಿವಿಧ ಹಂತಗಳಲ್ಲಿ ಮಾಡುವುದರ ಮೂಲಕ ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಅವರ ನಿಸ್ವಾರ್ಥ ಸೇವೆಯನ್ನು ತಾಲೂಕಿನ ಮಾಹಾಜನತೆ ಶ್ಲಾಘಿಸಿರುವುದು ಸ್ತುತ್ಯರ್ಹ ಎಂದರು. ಕಾಂಗ್ರೆಸ್‌ ನಾಯಕ ಸೋಮಣ್ಣ ಬೇವಿನಮರದ ಮಾತನಾಡಿ, ಪ್ರಧಾನಿ ಮೋದಿ 2014 ರಲ್ಲಿ ವರ್ಷಕ್ಕೆ 2 ಕೋಟಿ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು. ಆದರೆ, ಇಂದಿನವರೆಗೂ ಯಾವ ಯುವಕನಿಗೂ ಉದ್ಯೋಗ ನೀಡಿಲ್ಲ.

ಅವರ ಘೋಷಣೆಯಂತೆ ಇಲ್ಲಿಯವರೆಗೆ 16 ಕೋಟಿ ಉದ್ಯೋಗ ನೀಡಬೇಕಿತ್ತು. ಅದು ಆಯಿತೇ ಎಂದು ಪ್ರಶ್ನಿಸಿದರು. ಆದರೆ, ಪ್ರಕಾಶ ಕೋಳಿವಾಡ ಅವರು ಯಾರಿಗೂ ಮಾತು ಕೊಡದೆ ಸುಮಾರು 6 ಸಾವಿರಕ್ಕೂ ಅಧಿಕ ಯುವಕರಿಗೆ ಉದ್ಯೋಗ ಕೊಡಿಸುವಲ್ಲಿ ಸಫಲರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವಿಧಾನಸಭಾ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಅವರು ಮಾತನಾಡಿ, ಕಳೆದ ದಶಕದಿಂದೀಚೆಗೆ ಯುವಪಡೆ ಕಟ್ಟಿಕೊಂಡು ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಯುವ ನಾಯಕ ಪ್ರಕಾಶ ಕೋಳಿವಾಡ ಅವರು ಈ ಭಾಗದಲ್ಲಿ ಎಂದೂ ಸಹ ಬರಗಾಲ ಆವರಿಸದಂತೆ ಮೋಡ ಬಿತ್ತನೆಯ ಮೂಲಕ ಹಾವೇರಿ ಜಿಲ್ಲೆಯ ನಾಗರಿಕರಿಗೆ ಸಹಕಾರ ನೀಡಬೇಕು. ಮುಂದಿನ ದಿನಮಾನಗಳಲ್ಲೂ ಹೆಚ್ಚೆಚ್ಚು ಸಾಮಾಜಿಕ ಸೇವೆ ಮಾಡಲು ಪ್ರಕಾಶ ಅವರು ಮುಂದಾಗಬೇಕೆಂದರು.

ಮಾಜಿ ಶಾಸಕ ಅಜ್ಜಂಪೀರ ಖಾಜಿ, ಪಿಕೆಕೆ ಇನಿಷಿಯೇಟಿವ್ಸ್‌ ಅಧ್ಯಕ್ಷ ಪ್ರಕಾಶ ಕೋಳಿವಾಡ, ಗಂಗಾಧರ ಬಣಕಾರ ಮಾತನಾಡಿದರು. ಹಾವೇರಿ ನಗರಸಭಾ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಜಿಪಂ ಮಾಜಿ ಅಧ್ಯಕ್ಷರಾದ ಕೊಟ್ರೇಶಪ್ಪ ಬಸಗಣ್ಣಿ, ಏಕನಾಥ ಬಾನುವಳ್ಳಿ, ಎಂ.ಎಂ. ಹಿರೇಮಠ, ಎಚ್‌ಎಫ್‌ ಗಾಜಿಗೌಡ್ರ, ಶ್ರೀನಿವಾಸ ಸಾವುಕಾರ, ಇರ್ಫಾನ್‌ ದಿಂಡೂರ, ಸುಭಾಸ ಸಾವುಕಾರ, ಪುಟ್ಟಪ್ಪ ಮರಿಯಮ್ಮನವರ ಮತ್ತಿತರರು ಇದ್ದರು.ಇದೇ ಸಂದರ್ಭದಲ್ಲಿ ವಿವಿಧ ಕಂಪನಿಗಳ ಸಂದರ್ಶನದಲ್ಲಿ ಆಯ್ಕೆಯಾದ ಅಂಗವಿಕಲರು ಸೇರಿದಂತೆ ಅನೇಕ ಯುವಕರಿಗೆ ಆದೇಶ ಪತ್ರ ನೀಡಲಾಯಿತು.

ಟಾಪ್ ನ್ಯೂಸ್

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Bantwal ಮಾರ್ನಬೈಲು: ಸ್ಕೂಟರ್‌ ಢಿಕ್ಕಿಯಾಗಿ ಪಾದಚಾರಿಗೆ ಗಾಯ

Kundapura ಕುಸಿದು ಬಿದ್ದು ವ್ಯಕ್ತಿ ಸಾವು

Kundapura ಕುಸಿದು ಬಿದ್ದು ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Haveri; 12 ವರ್ಷದ ಬಾಲಕನಿಗೆ ಇಲಿ ಜ್ವರ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

Congress-Symbol

By Election: ಸಚಿವ ಜಾರಕಿಹೊಳಿ ಮುಂದೆಯೇ ಶಿಗ್ಗಾವಿ ಟಿಕೆಟ್‌ ಕಿತ್ತಾಟ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

1-saa

Haveri; ಕರ್ಜಗಿ ಕಾರಹುಣ್ಣಿಮೆಯಲ್ಲಿ ಬಂಡಿ ಹರಿದು ವ್ಯಕ್ತಿ ದುರ್ಮರಣ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Dinesh Gundu Rao 7 ಆರೋಗ್ಯ ಕ್ಷೇಮ ಕೇಂದ್ರ

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Bike Theft ಕೈಕಂಬ: ಬೈಕ್‌ ಕಳವು; ಪ್ರಕರಣ ದಾಖಲು

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Road Mishap ಶಿರಾಡಿ: ಕೆಎಸ್ಸಾರ್ಟಿಸಿ – ಕಾರು ಢಿಕ್ಕಿ; ಗಾಯ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Theft Case; ಬ್ಯಾಟರಿ, ಕಾಂಪೌಂಡ್‌ ಗೇಟ್‌ಗಳ ಕಳವು: ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.