ಶಾಂತಿ-ಸುವ್ಯವಸ್ಥೆ ಕಾಪಾಡಲು 36 ವೃತ್ತದಲ್ಲಿ 110 ಕ್ಯಾಮೆರಾ ಅಳವಡಿಕೆ

ಜಿಲ್ಲೆಯ ಇತರೆ ನಗರ ಹಾಗೂ ಗ್ರಾಪಂಗಳಿಗೂ ವಿಸ್ತರಿಸುವ ಯೋಜನೆ ಇದೆ

Team Udayavani, Nov 2, 2022, 6:05 PM IST

ಶಾಂತಿ-ಸುವ್ಯವಸ್ಥೆ ಕಾಪಾಡಲು 36 ವೃತ್ತದಲ್ಲಿ 110 ಕ್ಯಾಮೆರಾ ಅಳವಡಿಕೆ

ಬಸವಕಲ್ಯಾಣ: ರಾಜ್ಯದಲ್ಲಿ ಬಸವಕಲ್ಯಾಣ ನಗರದ 36 ವೃತ್ತಗಳಲ್ಲಿ 110 ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಪ್ರಪ್ರಥಮ ನಗರ ಎನಿಸಿಕೊಂಡಿದೆ. ಬಸವಕಲ್ಯಾಣದಲ್ಲಿ ಅಹಿತಕರ ಘಟನೆಗಳು ಆಗದಿರಲಿ ಮತ್ತು ಬಸವಣ್ಣನವರು ಮತ್ತು ಮಹಾತ್ಮ ಗಾಂಧೀಜಿ ಕಂಡ ಕನಸುಗಳು ನನಸಾಗಲಿ ಎಂದು ಶಾಸಕ ಶರಣು ಸಲಗರ ಹೇಳಿದರು.

ನಗರದ ಸಿಪಿಐ ವೃತ್ತ ಕಚೇರಿಯಲ್ಲಿ ಮಂಗಳವಾರ ಸಿಸಿ ಟಿವಿ ನಿಯಂತ್ರಣ ಕೊಠಡಿ ಉದ್ಘಾಟಿಸಿ ಮಾತನಾಡಿದರು. ಈ ಸಿಸಿ ಕ್ಯಾಮೆರಾಗಳು ಅಪರಾಧಿಕ ಕೃತ್ಯದಲ್ಲಿ ಭಾಗಿಯಾಗುವವರನ್ನು ಹೆಡೆಮುರಿ ಕಟ್ಟಲು ಸಹಕಾರಿ.

ಇಲ್ಲಿಯ ಬಿಕೆಡಿಬಿ ಅನುದಾನದಿಂದ ಹಾಗೂ ಪೊಲೀಸ್‌ ಇಲಾಖೆ ಮುಂಜಾಗ್ರತೆಯಿಂದಾಗಿ ಇದು ಸಾಧ್ಯವಾಗಿದೆ. ಮುಂದಿನ ಮೂರು ವರ್ಷಗಳವರೆಗೆ ಗುತ್ತಿಗೆದಾರರು ಇದನ್ನು ತೊಂದರೆಯಾಗದ ರೀತಿಯಲ್ಲಿ ಕೆಲಸ ಮಾಡಬೇಕು. ಕಲ್ಯಾಣ ಜಗತ್ತಿನ ಸುಂದರ ಪ್ರವಾಸಿ ತಾಣವಾಗಲು ಸಿಸಿ ಕ್ಯಾಮೆರಾಗಳು ಉತ್ತಮವಾಗಿವೆ ಎಂದರು.

ಹುಮನಾಬಾದ ಎಎಸ್‌ಪಿ ಶಿವಾಂಶು ರಾಜಪುತ ಮಾತನಾಡಿ, ಸಮಾಜದಲ್ಲಿ ಅಹಿತಕರ ಘಟನೆಗಳು ತಡೆಗಟ್ಟುವ ನಿಟಿನಲ್ಲಿ ಈ ಕ್ಯಾಮೆರಾಗಳು ಸಹಕಾರಿ. ಅಪರಾಧ ಕೃತ್ಯದಲ್ಲಿ ಭಾಗಿಯಾದವರ ಹೆಡೆಮುರಿ ಕಟ್ಟಲು ನಮ್ಮ ಕ್ಯಾಮೆರಾಗಳು ಉಪಯೋಗಕ್ಕೆ ಬರುತ್ತವೆ. ಜಿಲ್ಲೆಯ ಇತರೆ ನಗರ ಹಾಗೂ ಗ್ರಾಪಂಗಳಿಗೂ ವಿಸ್ತರಿಸುವ ಯೋಜನೆ ಇದೆ ಎಂದರು.

ಸಹಾಯಕ ಆಯುಕ್ತ ರಮೇಶ ಕೋಲಾರ, ಬಿಕೆಡಿಬಿ ತಹಶೀಲ್ದಾರ್‌ ಮೊಹಮ್ಮದ್‌ ಮೋಸಿನ್‌ ಮಾತನಾಡಿ, ನಗರದ 36 ಸ್ಥಳಗಳಲ್ಲಿ 110 ಕಡೆಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದ್ದು ಇದರಿದ ಅಪರಾಧ ಕೃತ್ಯಗಳು ತಡೆಗಟ್ಟಲು ಸಾಧ್ಯ ಎಂದರು.

ಈ ವೇಳೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ, ನಗರಸಭೆ ಅಧ್ಯಕ್ಷೆ ಶಹಜಹಾನ ತನ್ವೀರ ಅಹ್ಮದ್‌, ತಹಶೀಲ್ದಾರ್‌ ಶಾಂತಗೌಡ ಬಿರಾದಾರ, ನಗರಸಭೆ ಪೌರಾಯುಕ್ತ ಶಿವಕುಮಾರ, ಇಒ ಕಿರಣ ಪಾಟೀಲ, ನಗರ ಸಿಪಿಐ ಸುಶೀಲಕುಮಾರ ಸೇರಿದಂತೆ ವಿವಿಧ ಠಾಣೆಗಳ ಪಿಎಸ್‌ಐಗಳಾದ ವಸೀಮ್‌ ಪಟೇಲ್‌, ಬಸಲಿಂಗಪ್ಪ, ಪುಷ್ಪಾ, ಲಿಂಗಪ್ಪಾ ಮಣ್ಣೂರ, ರೇಣುಕಾ ಹಾಗೂ ಸಿಬ್ಬಂದಿ ಇದ್ದರು.

ಅಪರಾಧಿಕ ಕೃತ್ಯ ತಡೆಗೆ ಕಟ್ಟೆಚ್ಚರ
ಇಲ್ಲಿಯ ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿ 50 ಲಕ್ಷ ರೂ. ವೆಚ್ಚದಲ್ಲಿ ನಗರದ ಪ್ರಮುಖ 36 ಸ್ಥಳಗಳಲ್ಲಿ 110 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 16 ಸ್ಥಳಗಳಲ್ಲಿ ಎಲ್‌ಇಡಿ ಮೂಲಕ ನಿಗಾ ಮಾಡಲಾಗುತ್ತಿದೆ. ಹೀಗಾಗಿ ಒಟ್ಟಾರೆ ನಗರ ಪ್ರದೇಶ ಈಗ ಪೊಲೀಸ್‌ ಕಂಟ್ರೋಲ್‌ನಲ್ಲಿದೆ. ಯಾವುದೇ ಅಹಿತಕರ ಘಟನೆಗಳು ನಡೆದರೂ ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.