ನವೆಂಬರ್ 18ರಂದು ಬಿಡುಗಡೆಯಾಗಲಿದೆ ‘ಖಾಸಗಿ ಪುಟಗಳು’


Team Udayavani, Nov 4, 2022, 5:03 PM IST

khasagi putagalu

ತನ್ನ ಟೈಟಲ್‌ ಮತ್ತು ಟೀಸರ್‌ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ “ಖಾಸಗಿ ಪುಟಗಳು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. “ಖಾಸಗಿ ಪುಟಗಳು’ ಇದೇ ನವೆಂಬರ್‌ 18ಕ್ಕೆ ತೆರೆಗೆ ಬರಲಿದ್ದು, ಸದ್ಯ ಭರದಿಂದ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಟ್ರೇಲರ್‌ ಅನ್ನು ಬಿಡುಗಡೆ ಮಾಡಿದೆ.

“ಎಲ್ಲರ ಜೀವನದ ಡೈರಿಯಲ್ಲೂ ಯಾರಿಗೂ ಹೇಳಲಾಗದಂತಹ ಒಂದಷ್ಟು ಖಾಸಗಿ ವಿಷಯಗಳು, ಖಾಸಗಿ ಪುಟಗಳು ಇದ್ದೇ ಇರುತ್ತವೆ. ಅಂಥದ್ದೇ ಒಂದಷ್ಟು ವಿಷಯಗಳನ್ನು ಈ ಸಿನಿಮಾದಲ್ಲೂ ಹೇಳುತ್ತಿದ್ದೇವೆ. ಸಿನಿಮಾ ನೋಡುವ ಪ್ರತಿಯೊಬ್ಬರಿಗೂ, ಇದು ನನ್ನ ಜೀವನದಲ್ಲೂ ನಡೆದಿದೆ ಎನ್ನುವಷ್ಟರ ಮಟ್ಟಿಗೆ ನೈಜವಾಗಿ ಸಿನಿಮಾ ಮೂಡಿಬಂದಿದೆ. ಆರಂಭದಲ್ಲಿ ಈ ಸಿನಿಮಾಕ್ಕೆ ಏನು ಹೆಸರಿಡಬೇಕು ಎಂಬ ಯೋಚನೆಯಲ್ಲಿದ್ದಾಗ ಸಂಗೀತ ನಿರ್ದೇಶಕ ಮತ್ತು ಚಿತ್ರ ಸಾಹಿತಿ ಕೆ. ಕಲ್ಯಾಣ್‌ ಈ ಟೈಟಲ್‌ ತಿಳಿಸಿದರು. ಸಿನಿಮಾದ ಟೈಟಲ್‌ ಹೇಳುವಂತೆ ಎಲ್ಲರಿಗೂ ತಲುಪುವಂಥ ಖಾಸಗಿ ವಿಷಯಗಳೇ ಸಿನಿಮಾದ ಕಥೆ’ ಎನ್ನುವುದು “ಖಾಸಗಿ ಪುಟಗಳು’ ಸಿನಿಮಾದ ಕಥಾಹಂದರದ ಬಗ್ಗೆ ನಿರ್ದೇಶಕ ಸಂತೋಷ್‌ ಶ್ರೀಕಂಠಪ್ಪ ಮಾತು.

ಈಗಾಗಲೇ ಹಲವು ಕಿರುಚಿತ್ರದಲ್ಲಿ ನಟಿಸಿ ಅನುಭವವಿರುವ ವಿಶ್ವ “ಖಾಸಗಿ ಪುಟಗಳು’ ಚಿತ್ರದಲ್ಲಿ ನಾಯಕನಾಗಿ, ಶ್ವೇತಾ ಡಿಸೋಜ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಚೇತನ್‌ ದುರ್ಗಾ, ನಂದಕುಮಾರ್‌, ಶ್ರೀಧರ್‌, ನಿರೀಕ್ಷಾ ಶೆಟ್ಟಿ, ದಿನೇಶ್‌ ಮಂಗಳೂರು, ಪ್ರಶಾಂತ್‌ ನಟನ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಈಗಾಗಲೇ ಒಂದಷ್ಟು ಶಾರ್ಟ್‌ ಫಿಲಂಗಳಲ್ಲಿ ಅಭಿನಯಿಸಿದ್ದೆ. ಸಿನಿಮಾದಲ್ಲಿ ಅಭಿನಯಿಸಬೇಕು ಎಂಬ ಕನಸು ಈ ಸಿನಿಮಾದ ಮೂಲಕ ನನಸಾಗುತ್ತಿದೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಒಂದು ಒಳ್ಳೆಯ ಸಿನಿಮಾ ಮಾಡಿದ್ದೇವೆ. ಇತ್ತೀಚಿನ ದಿನಗಳಲ್ಲಿ ಕನ್ನಡದಲ್ಲಿ ಇಂಥದ್ದೊಂದು ಲವ್‌ಸ್ಟೋರಿ ಸಿನಿಮಾ ಬಂದಿಲ್ಲ. ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತದೆ’ ಎಂಬುದು ನಾಯಕ ವಿಶ್ವ ಮಾತು.

“ಈಗಾಗಲೇ ಹಿಂದಿಯಲ್ಲಿ “ವೈ’ ಎಂಬ ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೊದಲ ಕನ್ನಡ ಸಿನಿಮಾ. ಭೂಮಿ ಎಂಬ ಮಧ್ಯಮ ವರ್ಗದ ಹುಡುಗಿಯ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಇನೋಸೆಂಟ್‌ ಹಾಗೂ ಮೆಚೋರ್ಡ್‌ 2 ಶೇಡ್‌ ಇರುವಂಥ ಪಾತ್ರ ಇದಾಗಿದೆ’ ಎಂಬುದು ತಮ್ಮ ಪಾತ್ರದ ಬಗ್ಗೆ ನಾಯಕಿ ಶ್ವೇತ ಡಿಸೋಜ ವಿವರಣೆ. “ಖಾಸಗಿ ಪುಟಗಳು’ ಸಿನಿಮಾದ ಹಾಡುಗಳಿಗೆ ವಾಸುಕಿ ವೈಭವ್‌ ಸಂಗೀತವಿದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.