ಹರಿದ ಚಪ್ಪಲಿ ಧರಿಸಿ ಬಂದಿದ್ದ ಹುಡುಗ ಇದೀಗ ಸ್ಟಾರ್ ಪ್ಲೇಯರ್: ಬುಲ್ಸ್ ಗೆ ಬಲ ತುಂಬಿದ ಭರತ್


Team Udayavani, Nov 5, 2022, 12:42 PM IST

thumb-2

ಪ್ರೊ ಕಬಡ್ಡಿ 9ನೇ ಆವೃತ್ತಿ ಕಬಡ್ಡಿ ಪ್ರಿಯರಲ್ಲಿ ಕಿಚ್ಚೆಬ್ಬಿಸುತ್ತಿದೆ. ಪಂದ್ಯಗಳು ದಿನೇ ದಿನೇ ಕಾವೇರಿಸಿಕೊಳ್ಳುತ್ತಿವೆ. ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಪೈಪೋಟಿ ಬಿರುಸಾಗಿಯೇ ಇದೆ. ಅದರಲ್ಲೂ ನಮ್ಮ ಬೆಂಗಳೂರು ಬುಲ್ಸ್ ಫುಲ್ ಚಾರ್ಜ್ ನಲ್ಲಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.

ಬೆಂಗಳೂರು ಬುಲ್ಸ್ ಎಂದರೆ ಕಬಡ್ಡಿ ಅಭಿಮಾನಿಗಳಿಗೆ ಮೊದಲು ನೆನಪಾಗುವುದು ಹೈ ಫ್ಲೈಯರ್ ಎಂದೇ ಖ್ಯಾತರಾಗಿರುವ ಪವನ್ ಸೆಹ್ರಾವತ್. ಹೌದು ಪವನ್ ಅಂತಹ ಛಾಪನ್ನು ಪಿಕೆಎಲ್ ನಲ್ಲಿ ಮೂಡಿಸಿದ್ದಾರೆ.

ಪವನ್ ಪಿಕೆಎಲ್ ನ ಮೂರನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತಂಡದ ಮೂಲಕ ಪ್ರೊ ಕಬಡ್ಡಿ ಪ್ರವೇಶಿಸಿದರು. ಮೂರು ಮತ್ತು ನಾಲ್ಕನೇ ಆವೃತ್ತಿಯಲ್ಲಿ ಬುಲ್ಸ್’ನೊಂದಿಗಿದ್ದ ಅವರು ಅಂಕಣಕ್ಕಿಂತ ಬೆಂಚ್ ಮೇಲೆ ಕಳೆದ ಸಮಯವೇ ಜಾಸ್ತಿ. ಆಗೊಮ್ಮೆ ಈಗೊಮ್ಮೆ ಬದಲಿ ಆಟಗಾರನಾಗಿ ರೈಡಿಗಿಳಿದರು, ನೆನಪಿನಲ್ಲಿ ಉಳಿಯುವಂಥ ಪ್ರದರ್ಶನ ಅವರಿಂದ ಬಂದಿರಲಿಲ್ಲ. ಐದನೇ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ತಂಡ ಸೇರಿದರು. ಆಗಲೂ ಅಂತಹ ದೊಡ್ಡ ವ್ಯತ್ಯಾಸವೇನೂ ಅವರ ಆಟದಲ್ಲಿ ಆಗಿರಲ್ಲಿಲ್ಲ.

ಹೀಗಿರುವಾಗಲೇ ಪ್ರೊ ಕಬಡ್ಡಿಯ ಆರನೇ ಆವೃತ್ತಿ ಬಂತು. ಈ ಆವೃತ್ತಿಯನ್ನು ಬೆಂಗಳೂರು ಬುಲ್ಸ್ ಅಭಿಮಾನಿಗಳು ಮರೆಯಲಿಕ್ಕೆ ಸಾಧ್ಯಾವೇ ಇಲ್ಲ. ಬುಲ್ಸ್ ಈ ಆವೃತ್ತಿಯಲ್ಲಿ ಜೋರಾಗಿಗೇ ಕಾಲು ಕೆರೆದು ಹೋರಾಟಕ್ಕೆ ಇಳಿದಿತ್ತು. ಅಷ್ಟೇ ಅಲ್ಲದೇ ಆರನೇ ಸೀಸನ್ ಚಾಂಪಿಯನ್ ಆಗುವ ಮೂಲಕ ಗೆದ್ದು ಬೀಗಿತ್ತು. ಬುಲ್ಸ್’ನ ಈ ಗೆಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ಇದೇ ಪವನ್. ಈ ಆವೃತ್ತಿಯಲ್ಲಿ ತಮ್ಮ ಆಟದ ಮೂಲಕ ಹೈ ಫ್ಲೈಯರ್ ಎಂಬ ಬಿರುದು ಪಡೆದ ಪವನ್ ಮೊಸ್ಟ್ ವ್ಯಾಲ್ಯುಯೇಬಲ್ ಪ್ಲೇಯರ್ ಪ್ರಶಸ್ತಿಗೂ ಭಾಜನರಾಗಿದ್ದರು.

ಇದನ್ನೂ ಓದಿ:ಚಿತ್ರ ವಿಮರ್ಶೆ: ‘ಬನಾರಸ್‌’ ಪಯಣದಲ್ಲಿ ಹೊಸ ಅನುಭವ

ಏಳು ಮತ್ತು ಎಂಟನೇ ಆವೃತ್ತಿಗಳಲ್ಲಿಯೂ ಬುಲ್ಸ್ ಪರ ಆಡಿದ್ದ ಪವನ್ ಆ ಆವೃತ್ತಿಗಳ ಅತೀ ಹೆಚ್ಚು ಅಂಕ ಪಡೆದ ರೈಡರ್ ಆಗಿ ಹೊರ ಹೊಮ್ಮಿದ್ದರು. ಹೀಗೆ ಬುಲ್ಸ್ ನ ಬೆನ್ನುಲುಬಾಗಿದ್ದ ಪವನ್ ಒಂಬತ್ತನೇ ಆವೃತ್ತಿಯ ಹಾರಾಜು ಪ್ರಕ್ರಿಯೆಯಲ್ಲಿ ದಾಖಲೆಯ ಮೊತ್ತಕ್ಕೆ ತಮಿಳ್ ತಲೈವಾಸ್ ತಂಡದ ಪಾಲಾದರು. ಪವನ್ ಬುಲ್ಸ್ ನಿಂದ ಬೇರ್ಪಟ್ಟಿದ್ದು ಬೆಂಗಳೂರು ಬುಲ್ಸ್ ಅಭಿಮಾನಿಗಳಿಗೆ ಬಹಳ ಬೇಸರ ತಂದಿತ್ತು. ಪವನ್ ಇಲ್ಲದ ಬುಲ್ಸ್ ನ ಊಹಿಸಿಕೊಳ್ಳಲು ಕಷ್ಟ ಆಗಿತ್ತು. ಮತ್ತೆ ಬೆಂಗಳೂರ್ ತಂಡ ಸೋಲಿನ ಸುಳಿಗೆ ಸಿಲುಕಿದರೆ ಎನ್ನುವ ಆತಂಕ ಕಾಡಿದ್ದಂತೂ ಸುಳ್ಳಲ್ಲ.

ಇಂತಹ ಸಮಯದಲ್ಲಿಯೇ ಬೆಂಗಳೂರು ಬುಲ್ಸ್’ಗೆ ಭರವಸೆಯ ಬೆಳಕಾಗಿ ಬಂದಿದ್ದು ಹರಿಯಾಣದ ಇಪ್ಪತ್ತೆರಡರ ಹರೆಯದ ಭರತ್ ಹೂಡಾ. ಕಳೆದ ಆವೃತ್ತಿಯಲ್ಲಿ ಪವನ್’ಗೆ ಸಪೋರ್ಟ್ ರೈಡರ್ ಆಗಿದ್ದ ಭರತ್ ಸಿಕ್ಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಾದರೂ ಪವನ್ ಮುಂದೆ ಅವರಿಗೆ ಮಿಂಚಲು ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಈ ಬಾರಿ ಪವನ್ ಅನುಪಸ್ಥಿತಿಯಲ್ಲಿ ತಂಡದ ರೈಡಿಂಗ್ ಜವಾಬ್ದಾರಿಯನ್ನು ವಿಕಾಸ್ ಖಂಡೋಲ ಜೊತೆ ಜಂಟಿಯಾಗಿ ಹೊತ್ತಿರುವ ಭರತ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸೂಪರ್ ರೈಡ್’ನ ಮೂಲಕ ಅಭಿಮಾನಿಗಳಿಗೆ ಭರಪೂರ ಮನೋರಂಜನೆ ನೀಡುತ್ತಿದ್ದಾರೆ.

ಲೋಕಲ್ ಕಬಡ್ಡಿ ಪಂದ್ಯಾವಳಿಗಳಲ್ಲಿ ಆಡುತ್ತಿದ್ದ ಕಡು ಬಡತನದ ಕುಟುಂಬದಿಂದ ಬಂದ ಭರತ್ ಬೆಂಗಳೂರು ತಂಡ ಸೇರಿದ್ದೇ ಒಂದು ರೋಚಕ ಕತೆ. ಬುಲ್ಸ್ ನ ಸ್ಟಾರ್ ಡಿಫೆಂಡರ್ ಸೌರಭ್ ನಂದಾಲ್ ಅವರ ಹುಟ್ಟೂರಿನಲ್ಲಿ ನಡೆದ ಒಂದು ಸ್ಥಳೀಯ ಕಬಡ್ಡಿ ಪಂದ್ಯಾಟಕ್ಕೆ ಶಿಷ್ಯನ ಆಹ್ವಾನದ ಮೇಲೆ ಕೋಚ್ ರಣಧೀರ್ ಸಿಂಗ್ ಮುಖ್ಯ ಅತಿಥಿಯಾಗಿ ಹೋಗಿರುತ್ತಾರೆ. ಆ ಪಂದ್ಯಾವಳಿಯಲ್ಲಿ ಭರತ್ ಕೂಡ ಭಾಗವಹಿಸಿರುತ್ತಾರಲ್ಲದೇ ಉತ್ತಮ ಪ್ರದರ್ಶನ ಕೂಡ ನೀಡುತ್ತಾರೆ. ಅವರ ಆಟದಿಂದ ಖುಷಿಯಾದ ರಣಧೀರ್ ಸಿಂಗ್ ಭರತ್ ಗೆ ಬುಲ್ಸ್ ಬರುವಂತೆ ಆಹ್ವಾನಿಸುತ್ತಾರೆ. ಆಗ ಹರಿದ ಚಪ್ಪಲಿ ಧರಿಸಿದ್ದ ಭರತ್ ಗೆ ಧನ ಸಹಾಯವನ್ನೂ ಮಾಡುತ್ತಾರೆ. ಹೀಗೆ ಪ್ರೊ ಕಬಡ್ಡಿಯ ಎಂಟನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಸೇರಿಕೊಂಡ ಭರತ್, ಗುರು ರಣಧೀರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ಅತ್ಯುತ್ತಮ ಆಟಗಾರನಾಗಿ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮುತ್ತಿದ್ದಾರೆ.

ಎರಡೂ ಕಡೆಗಳಿಂದ ದಾಳಿ ನಡೆಸಬಲ್ಲ ಎತ್ತರದ ನಿಲುವಿನ ಭರತ್ ಎದುರಾಳಿಯ ಕೋಟೆಗೆ ನುಗ್ಗಿ ಸೂಪರ್ ರೈಡ್ ಮೂಲಕ ರಕ್ಷಣಾ ಕೋಟೆಯನ್ನು ಛಿದ್ರಗೊಳಿಸಿ ಸಿಂಹಸ್ಪಪ್ನರಾಗುತ್ತಿದ್ದಾರೆ. ರೈಡಿಂಗ್ ಜೊತೆ ಡಿಫೆನ್ಸ್ ನಲ್ಲಿಯೂ ಉತ್ತಮ ಸಹಾಯ ನೀಡುತ್ತಿರುವ ಅವರು ಆ್ಯಂಕಲ್ ಹೋಲ್ಡ್ ಮೂಲಕ ಎದುರಾಳಿ ರೈಡರ್ ನ ಕಟ್ಟಿಹಾಕುವ ಸಾಮರ್ಥ್ಯವನ್ನು ಕೂಡ ಹೊಂದಿದ್ದಾರೆ.

ಪ್ರಸ್ತುತ ಒಂಬತ್ತನೇ ಆವೃತ್ತಿಯ ಎರಡನೇ ಉತ್ತಮ ರೈಡರ್ ಆಗಿರುವ ಭರತ್, ಬುಲ್ಸ್ ಗೆ ಹೊಸ ಭರವಸೆಯನ್ನು ತುಂಬುತ್ತಿದ್ದಾರೆ. ಯಾವಾಗಲೂ ಡಿಫೆನ್ಸ್ ನಲ್ಲಿ ಎಡವುತ್ತಿದ್ದ ಬುಲ್ಸ್ ಈ ಭಾರಿ ಎಲ್ಲ ವಿಭಾಗಗಳಲ್ಲಿಯೂ ಅದ್ಭುತ ಪ್ರದರ್ಶನ ನೀಡುತ್ತಿದೆ. ಸೌರಭ್ ನಂದಾಲ್ ಡಿಫೆನ್ಸ್ ನಲ್ಲಿ ತಂಡಕ್ಕೆ ಬಲ ತುಂಬುತ್ತಿದ್ದರೆ, ಭರತ್ ರೈಡಿಂಗ್ ನಲ್ಲಿ ಮಿಂಚುತ್ತಿದ್ದಾರೆ.

ಪವನ್ ಇಲ್ಲದ ಕೊರಗು ಕಾಡದ ರೀತಿಯಲ್ಲಿ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಬುಲ್ಸ್ ಈ ಬಾರಿ ಎರಡನೇ ಸಲ ಕಪ್ ಎತ್ತುವ ಕನಸನ್ನು ನನಸು ಮಾಡುವತ್ತ ದಾಪುಗಾಲಿಡುತ್ತಿದೆ.

ಬೆಂಗಳೂರು ಬುಲ್ಸ್ ಮತ್ತೊಂದು ಕಪ್ ಗೆದ್ದು ತನ್ನ ಕೊಂಬಿನ ಉದ್ದವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕು ಎನ್ನುವುದು ಬುಲ್ಸ್ ಆಭಿಮಾನಿಗಳ ಬಯಕೆ.

 ಸುಶ್ಮಿತಾ ನೇರಳಕಟ್ಟೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.