ಕೃಷಿ ಮೇಳಕ್ಕೆ 7.16 ಲಕ್ಷ ಜನರ ಭೇಟಿ


Team Udayavani, Nov 6, 2022, 1:54 PM IST

ಕೃಷಿ ಮೇಳಕ್ಕೆ 7.16 ಲಕ್ಷ ಜನರ ಭೇಟಿ

ಬೆಂಗಳೂರು: ಕೃಷಿ ಮೇಳಕ್ಕೆ ಶನಿವಾರ 7.16 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿದ್ದು, ಮೇಳದ ಇತಿಹಾಸದಲ್ಲಿ ಇಷ್ಟು ಪ್ರಮಾಣದ ಜನರು ಭೇಟಿ ನೀಡಿದ್ದು ಇದೇ ಮೊದಲ ಬಾರಿಯಾಗಿದೆ.

ಕೊರೊನಾ ಕಾರಣದಿಂದಾಗಿ ಕಳೆದ ಕೆಲ ವರ್ಷಗಳಿಂದ ಕಳೆಗುಂದಿದ್ದ ಕೃಷಿ ಮೇಳ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಿದೆ. ನಾಲ್ಕು ದಿನಗಳ ಕೃಷಿ ಮೇಳದ ಮೂರನೇ ದಿನವಾದ ಶನಿವಾರ 7.16 ಲಕ್ಷ ರೈತರು ಮತ್ತು ಸಾರ್ವಜನಿಕರು ಭೇಟಿ ನೀಡಿ ದಾಖಲೆ ನಿರ್ಮಾಣವಾಗಿದೆ. ಅದರ ಜತೆಗೆ 2.85 ಕೋಟಿ ರೂ. ವಹಿವಾಟು ನಡೆದಿದೆ. 684 ರೈತರು ಸಲಹಾ ಕೇಂದ್ರದಲ್ಲಿ ಕೃಷಿ ಚಟುವಟಿಕೆ ಸೇರಿ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆ ದರು. ಈ ಬಾರಿಯ ಕೃಷಿ ಮೇಳದಲ್ಲಿ ನವೋದ್ಯಮ (ಸ್ಟಾರ್ಟ್‌ಅಪ್‌)ಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಕೃಷಿ ಚಟುವಟಿಕೆಗೆ ಅನುಕೂಲವಾಗುವಂತಹ ಹಲವು ಉದ್ಯಮಗಳು ತಮ್ಮ ತಂತ್ರಜ್ಞಾನ ಮತ್ತು ಉತ್ಪನ್ನಗಳ ಪ್ರದರ್ಶನ ಮಾಡಿದವು. ಜಾಗ ಉಳಿಸುವ ಬಸಿಗಾಲುವೆ: ಕೃಷಿ ಮೇಳದಲ್ಲಿ ಈ ಬಾರಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತಹ ಹಾಗೂ ಕೃಷಿ ಭೂಮಿ ಯಲ್ಲಿನ ಸಮಸ್ಯೆಯನ್ನು ನಿವಾರಿಸುವಂತಹ ಕ್ರಮಗಳು ಪ್ರದರ್ಶನಗೊಳ್ಳುತ್ತಿದೆ.

ಅದರಲ್ಲೊಂದೆನ್ನುವಂತೆ ನೀರು ಹೆಚ್ಚಾಗಿ ಜೌಗು, ಲವಣ ಪೀಡಿತ ಮತ್ತು ಹುಳಿಮಣ್ಣಿನ ಕೃಷಿ ಭೂಮಿಯಲ್ಲಿ ಯಾವುದೇ ಜಾಗವನ್ನು ನಷ್ಟ ಮಾಡದೆ ಬಸಿಗಾಲುವೆ ನಿರ್ಮಿಸಿ ನೀರನ್ನು ಹೊರಹಾಕುವ ವಿಧಾನವನ್ನು ಪ್ರದರ್ಶಿಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯದ ಮಣ್ಣು ಪರೀಕ್ಷೆ ಮತ್ತು ಬೆಳೆ ಸ್ಪಂದನೆ ಪ್ರಾಯೋಜನೆ ಹಾಗೂ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನ ಶಾಸ್ತ್ರ ವಿಭಾಗದಿಂದ ಅಭಿವೃದ್ಧಿಪಡಿಸಲಾಗಿರುವ ಸಮಸ್ಯಾತ್ಮಕ ಮಣ್ಣಿನ ನಿರ್ವಹಣೆ ಮತ್ತು ಮಣ್ಣಿನ ಫ‌ಲವತ್ತತೆ ಹೆಚಿಸಲು ಪ್ಲಾಸ್ಟಿಕ್‌ ಪೈಪ್‌ನ ಬಸಿಗಾಲುವೆ ನಿರ್ಮಾಣದ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ.

ಇದರಲ್ಲಿ ಕೃಷಿ ಭೂಮಿ ಯಲ್ಲಿ ಪ್ರತ್ಯೇಕವಾಗಿ ಕಾಲುವೆ ನಿರ್ಮಿಸಿ ನೀರನ್ನು ಕೆರೆ ಅಥವಾ ಬೇರೆಡೆಗೆ ಹರಿಯುವಂತೆ ಮಾಡುವ ಬದಲು ಪ್ಲಾಸ್ಟಿಕ್‌ ಪೈಪ್‌ಗಳಿಗೆ ಸಣ್ಣ ತೂತನ್ನು ಮಾಡಿ ಕೃಷಿ ಭೂಮಿಯಲ್ಲಿ 4ರಿಂದ 6 ಅಡಿ ಕೆಳಭಾಗದಲ್ಲಿ ಅದನ್ನು ಅಳವಡಿಸಬೇಕಿದೆ. 30 ಮೀ. ಅಂತರದಲ್ಲಿ ಈ ರೀತಿ ಪೈಪ್‌ ಅಳವಡಿಸುವುದರಿಂದ ಭೂಮಿಯಲ್ಲಿನ ನೀರಿನ ಪ್ರಮಾಣವನ್ನು ಪೈಪ್‌ನಲ್ಲಿ ಸೆಳೆದು ಹೊರಹಾಕಲು ಅನುಕೂಲವಾಗಲಿದೆ. ಇದರಿಂದ ಬಸಿ ಕಾಲುವೆ ನಿರ್ಮಾಣದ ಜತೆಗೆ, ಅದಕ್ಕಾಗಿ ಪ್ರತ್ಯೇಕ ಭೂಮಿಯನ್ನು ಬಳಸಿಕೊಳ್ಳುವುದು ತಪ್ಪಲಿದೆ.

ಕಚ್ಚದ ಜೇನು ಹುಳ, ಕಡಿಮೆ ವೆಚ್ಚದಲ್ಲಿ ಸಾಕಾಣಿಕೆ: ಸಾಮಾನ್ಯವಾಗಿ ಜೇನು ನೊಣಗಳು ಕಚ್ಚುತ್ತವೆ. ಆದರೆ, ಕೃಷಿ ಮೇಳದಲ್ಲಿ ಪುದ್ಯೋದು ಹನಿ ಬೀ ಫಾರ್ಮ್ ಸಂಸ್ಥೆ ಕಚ್ಚದ ಜೇನು ನೊಣವನ್ನು ಪರಿಚಯಿಸುತ್ತಿದೆ.  ರಾಳ ಜೇನು, ನುಸಿ ಜೇನು ಎಂದು ಕರೆಯಲ್ಪಡುವ ಕಿರು ಜೇನು ಸಾಕಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಈ ಜೇನು ನೊಣವು ಬೇರೆಲ್ಲ ಜೇನಿನಂತೆಯೇ ಪರಾಗಸ್ಪಷ್ಟ ಮಾಡಿ ಜೇನು ಉತ್ಪಾದನೆ ಮಾಡುತ್ತವೆ. ಆದರೆ ತುಡುವೆ ಜೇನಿನಂತೆ ದುಬಾರಿ ಪೆಟ್ಟಿಗೆ, ಜೇನು ತೆಗೆಯುವ ಯಂತ್ರದ ಅವಶ್ಯಕತೆ ಇದಕ್ಕಿಲ್ಲ. ಅಲ್ಲದೆ ಜೇನು ತುಪ್ಪ ಉತ್ಪಾದನೆಯಾಗಿದೆಯೇ ಇಲ್ಲವೇ ಎಂಬುದನ್ನು ಪದೇ ಪದೆ ನೋಡುವ ಅವಶ್ಯಕತೆಯಿಲ್ಲ. ಬದಲಿಗೆ ಜೇನು ಪೆಟ್ಟಿಗೆಯನ್ನು ಎತ್ತಿದರೆ ಅದು ಭಾರವೆನಿಸಿದರೆ ಜೇನುತುಪ್ಪ ಉತ್ಪಾದನೆಯಾಗಿದೆ ಎಂಬುದು ತಿಳಿಯುತ್ತದೆ.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.