ಬೈಂದೂರು ಕ್ಷೇತ್ರದ 53 ಸಾವಿರ ಮನೆಗಳಿಗೆ “ಗಂಗೆ’

784.60 ಕೋ.ರೂ. ನೀರಿನ ಯೋಜನೆಗೆ ನಾಳೆ ಸಿಎಂ ಶಂಕುಸ್ಥಾಪನೆ

Team Udayavani, Nov 6, 2022, 2:25 PM IST

8

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿಯೇ ಬೇಸಗೆಯಲ್ಲಿ ಅತೀ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿ ರುವ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಶ್ವತ ಪರಿಹಾರ ಸಿಗುವ ಕಾಲ ಸನ್ನಿಹಿತವಾಗಿದೆ. ಪ್ರತಿ ಮನೆ- ಮನೆಗಳಿಗೆ ನೀರು ಪೂರೈಸುವ 784.60 ಕೋ.ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಯ ಕಾಮಗಾರಿಗೆ ನ.7 ರಂದು ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ನಬಾರ್ಡ್‌ ಹಾಗೂ ಜಲಜೀವನ್‌ ಮಿಷನ್‌ನಡಿ ಜಂಟಿಯಾಗಿ ಬೈಂದೂರು ಕ್ಷೇತ್ರದ 53,425 ಮನೆಗಳಿಗೆ ಪ್ರತಿ ನಿತ್ಯ ನಳ್ಳಿ ಮೂಲಕ ಗಂಗೆ (ನೀರು) ಪೂರೈಸುವ ಯೋಜನೆ ಇದಾಗಿದೆ. ಕ್ಷೇತ್ರದಲ್ಲಿ ಉಪ್ಪು ನೀರಿನಿಂದಾಗಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಮುತುವರ್ಜಿಯಲ್ಲಿ ಈ ಯೋಜನೆ ಅವರ ಸಾಕಾರಗೊಳ್ಳುತ್ತಿದೆ.

ಏನಿದು ಯೋಜನೆ? ವಾರಾಹಿ ನದಿಯಿಂದ ನೀರು ಸಂಗ್ರಹಿಸಿ, ಅದನ್ನು ಹೊಸಂಗಡಿಯ ಕೋಟೆಕೆರೆ ಸಮೀಪದ 4 ಎಕರೆ ಸರಕಾರಿ ಜಾಗದಲ್ಲಿ ನಿರ್ಮಾಣವಾಗಲಿರುವ ಶುದ್ಧೀಕರಣ ಘಟಕದಲ್ಲಿ ಶುದ್ಧೀಕರಿಸ ಲಾಗುತ್ತದೆ. ಅದನ್ನು ಪ್ರತಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಓವರ್‌ ಹೆಡ್‌ ಟ್ಯಾಂಕ್‌ ಗಳಿಗೆ, ಟ್ಯಾಂಕ್‌ ಇಲ್ಲದ ಕಡೆಗಳಲ್ಲಿ ಹೊಸ ಟ್ಯಾಂಕ್‌ ನಿರ್ಮಿಸಿ, ಬೈಂದೂರಿನ ಎಲ್ಲ ಮನೆಗಳಿಗೆ ನಳ್ಳಿ ಮೂಲಕ ನೀರು (ಜೀವಜಲ) ಪೂರೈಸುವ ಯೋಜನೆ ಇದಾಗಿದೆ. 2024ರ ಜೂ.30 ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ.

25 ದಶಲಕ್ಷ ಲೀ. ನೀರು ಪ್ರತಿ ನಿತ್ಯ ವಾರಾಹಿ ನದಿಯಿಂದ 25 ಎಂಎಲ್‌ಡಿ (ದಶಲಕ್ಷ ಲೀ.) ನೀರು ಸಂಗ್ರಹಿಸಿ, ಶುದ್ಧೀಕರಿಸಿ ಪೂರೈಸಲಾಗುತ್ತದೆ. 585 ಕೋ.ರೂ. ನಬಾರ್ಡ್‌ ಯೋಜನೆಯಡಿ ಶುದ್ಧೀಕರಣ ಘಟಕ, ಪ್ರತಿ ಗ್ರಾ.ಪಂ.ಗಳಿಗೆ ಪೈಪ್‌ಲೈನ್‌, ಅಗತ್ಯ ವಿರುವ ಕಡೆಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌, ಇನ್ನಿತರ ಕಾಮಗಾರಿಯಾದರೆ, ಜಲಜೀವನ್‌ ಮಿಷನ್‌ನಡಿ 199.6 ಕೋ. ರೂ. ವೆಚ್ಚದಲ್ಲಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪೈಪ್‌ಲೈನ್‌, ನಳ್ಳಿ, ಇನ್ನಿತರ ಕಾಮಗಾರಿಗೆ ವಿನಿಯೋಗವಾಗಲಿದೆ ಎಂದು ಬೈಂದೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಜ್‌ಕುಮಾರ್‌ ಮಾಹಿತಿ ನೀಡಿದ್ದಾರೆ.

3 ಲಕ್ಷ ಜನರಿಗೆ ನೀರು ಪೂರೈಕೆ

ಬೈಂದೂರು ವಿಧಾನಸಭಾ ಕ್ಷೇತ್ರದ 59 ಗ್ರಾಮಗಳ (39 ಗ್ರಾ.ಪಂ.) ಹಾಗೂ ಬೈಂದೂರು ಪಟ್ಟಣ ಪಂಚಾಯತ್‌ (3 ಗ್ರಾಮ)ಯ 53,425 ಮನೆಗಳಿಗೆ ಈ ಯೋಜನೆ ಮೂಲಕ ನೀರು ಪೂರೈಸಲಾಗುತ್ತದೆ. ಇದರಲ್ಲಿ ಗ್ರಾಮೀಣ ಭಾಗದ 788 ಜನವಸತಿ ಪ್ರದೇಶ ಹಾಗೂ ಪಟ್ಟಣ ಪಂಚಾಯತ್‌ ವ್ಯಾಪ್ತಿಯ 60 ಸೇರಿದಂತೆ ಒಟ್ಟು 848 ಜನವಸತಿ ಪ್ರದೇಶಗಳಿಗೆ ನೀರು ಸರಬರಾಜು ಆಗಲಿದೆ. ಇದರಲ್ಲಿ ಪ್ರತಿ ಗ್ರಾಮಗಳ ವ್ಯಾಪ್ತಿಯಲ್ಲಿ ಈಗಿರುವ 220 ಟ್ಯಾಂಕ್‌ಗಳು ಹಾಗೂ ಹೊಸದಾಗಿ ನಿರ್ಮಾಣವಾಗಲಿರುವ 128 ಟ್ಯಾಂಕ್‌ ಸೇರಿ ಒಟ್ಟು 348 ಟ್ಯಾಂಕ್‌ಗಳಿಗೆ ನೀರು ಪೂರೈಕೆಯಾಗಲಿದೆ.

ನೀರಿನ ಸಮಸ್ಯೆಗೆ ಮುಕ್ತಿ: ಬೈಂದೂರಿನ ಜನ ಬೇಸಗೆಯಲ್ಲಿ ಪ್ರತಿ ವರ್ಷ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಆದ್ದರಿಂದ ಈ ಸಮಸ್ಯೆಗೆ ಶಾಶ್ವತ ಪರಿಹಾರ ನಿಟ್ಟಿನಲ್ಲಿ ಈ ದೊಡ್ಡ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದ ಪ್ರತಿ ಮನೆಗಳಿಗೂ ವರದಾನವಾಗಲಿದೆ. –ಬಿ.ವೈ. ರಾಘವೇಂದ್ರ, ಸಂಸದರು

ಕೊಟ್ಟ ಮಾತಿನಂತೆ ಈಡೇರಿಕೆ: ಚುನಾವಣೆ ಸಂದರ್ಭದಲ್ಲಿ ಜನರಿಗೆ ಪ್ರತಿ ಮನೆ-ಮನೆಗೆ ನೀರು ಕೊಡುವ ಭರವಸೆಯನ್ನು ನೀಡಿದ್ದೆ. ಅದನ್ನು ಈಗ ಈಡೇರಿಸುವ ನಿಟ್ಟಿನಲ್ಲಿ ಈ ಮಹತ್ವದ ಯೋಜನೆಗೆ ಮುಖ್ಯಮಂತ್ರಿಗಳೇ ಶಂಕುಸ್ಥಾಪನೆ ನೆರವೇರಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. –ಬಿ.ಎಂ. ಸುಕುಮಾರ್‌ ಶೆಟ್ಟಿ ಬೈಂದೂರು ಶಾಸಕರು

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.