
ದನುಷ್ಕಾ ಗುಣತಿಲಕರನ್ನು ಎಲ್ಲಾ ಮಾದರಿ ಕ್ರಿಕೆಟ್ ನಿಂದ ಅಮಾನತು ಮಾಡಿದ ಲಂಕಾ ಬೋರ್ಡ್
Team Udayavani, Nov 7, 2022, 12:52 PM IST

ಸಿಡ್ನಿ: ಲೈಂಗಿನ ದೌರ್ಜನ್ಯ ಪ್ರಕರಣದಡಿಯಲ್ಲಿ ಸಿಲುಕಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಲಂಕಾ ಕ್ರಿಕೆಟ್ ನಿಂದ ಅಮಾನತು ಮಾಡಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಇಂದು ತೀರ್ಮಾನಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ರಾಷ್ಟ್ರೀಯ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್ನಿಂದ ಅಮಾನತುಗೊಳಿಸಲು ಮಂಡಳಿ ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ವರದಿ ತಿಳಿಸಿದೆ.
ಲಂಕಾದ ಕ್ರಿಕೆಟ್ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ರವಿವಾರ ಬೆಳಗ್ಗೆ ಸಿಡ್ನಿ ಪೊಲೀಸರು ಟೀಂ ಹೋಟೆಲ್ ನಿಂದ ಬಂಧಿಸಿದ್ದರು. ಮಹಿಳೆಯೊಬ್ಬರಿಗೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಗುಣತಿಲಕ ಬಂಧನವಾಗಿದೆ. ವಿಶ್ವಕಪ್ ನಿಂದ ಹೊರಬಿದ್ದಿರುವ ಲಂಕಾ ತಂಡವು ಗುಣತಿಲಕ ಅವರನ್ನು ಬಿಟ್ಟು ಶ್ರೀಲಂಕಾಗೆ ಪ್ರಯಾಣಿಸಿದೆ.
ಇದನ್ನೂ ಓದಿ:ಕಳಸ ತಾಲೂಕಿನ ರಸ್ತೆ ಅವ್ಯವಸ್ಥೆ; ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರಗಳು ವೈರಲ್
ಗುಣತಿಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ದನುಷ್ಕ ಗುಣತಿಲಕ ಮತ್ತು ಅತ್ಯಾಚಾರ ಆರೋಪ ಮಾಡಿರುವ ಮಹಿಳೆಯ ನಡುವೆ ಡೇಟಿಂಗ್ ಆ್ಯಪ್ ವೊಂದರಲ್ಲಿ ಬಹಳ ದಿನಗಳಿಂದ ಮಾತುಕತೆ ನಡೆದಿದೆ. ನ.2ರಂದು ರೋಸ್ ಬೇನಲ್ಲಿರುವ ನಿವಾಸವೊಂದರಲ್ಲಿ ಇಬ್ಬರೂ ಒಟ್ಟಾಗಿದ್ದಾರೆ. ಆ ವೇಳೆ ಗುಣತಿಲಕ ತನ್ನನ್ನು ಅತ್ಯಾಚಾರಕ್ಕೊಳಪಡಿಸಿದ್ದಾರೆನ್ನುವುದು ಮಹಿಳೆಯ ಆರೋಪ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.