42 ಗ್ರಾಪಂಗಳಿಂದ 13.99 ಕೋಟಿ ವಿದ್ಯುತ್‌ ಬಾಕಿ

ಅತಿ ಹೆಚ್ಚು ಬಾಕಿ ಉಳಿಸಿದ ನಂದಿಕೇಶ್ವರ ಗ್ರಾಪಂ ; 27 ಗ್ರಾಪಂನಿಂದ ತಲಾ 10 ಲಕ್ಷಕ್ಕೂ ಹೆಚ್ಚು ಬಾಕಿ

Team Udayavani, Nov 7, 2022, 3:14 PM IST

10

ಬಾಗಲಕೋಟೆ : ಅವಿಭಜಿತ ಬಾದಾಮಿ ತಾಲೂಕಿನ 42 ಗ್ರಾಪಂಗಳಿಂದ ಹೆಸ್ಕಾಂಗೆ ಒಟ್ಟು 13.99 ಕೋಟಿ ವಿದ್ಯುತ್‌ ಬಾಕಿ ಇದೆ. ಅದರಲ್ಲೂ ಬೀದಿದೀಪಗಳಿಗಿಂತ ಕುಡಿಯುವ ನೀರು ಪೂರೈಕೆ ಯೋಜನೆಗಳಿಂದಲೇ ಅತಿ ಹೆಚ್ಚು ಬಾಕಿ ಇದೆ. ಹೀಗಾಗಿ ಈ ತಾಲೂಕಿನ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ನ.16ರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವ ಎಚ್ಚರಿಕೆಯನ್ನು ಹೆಸ್ಕಾಂ ನೀಡಿದೆ.

ಬಾದಾಮಿ, ಗುಳೇದಗುಡ್ಡ ತಾಲೂಕಿನ 27 ಗ್ರಾಪಂಗಳು ತಲಾ 10 ಲಕ್ಷ ರೂ.ಗೂ. ಅಧಿಕ ಬಾಕಿ ಉಳಿಸಿಕೊಂಡಿವೆ. ಈ 27 ಗ್ರಾಪಂಗಳ ವಿದ್ಯುತ್‌ ಸಂಪರ್ಕ ಮಾತ್ರ ಸಂಪೂರ್ಣ ಕಡಿತಗೊಳ್ಳುವ ಸಾಧ್ಯತೆಯೇ ಹೆಚ್ಚು. ಅದರಲ್ಲೂ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಪಂ ಬರೋಬ್ಬರಿ 150.68 ಲಕ್ಷ ರೂ. ಬಾಕಿ ಉಳಿಸಿಕೊಂಡು ಅತಿ ಹೆಚ್ಚು ಬಾಕಿ ಉಳಿಸಿಕೊಂಡ ಗ್ರಾಪಂಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇನ್ನು ಆಡಗಲ್‌ ಗ್ರಾಪಂ 16.22 ಲಕ್ಷ ಬಾಕಿ ಉಳಿಸಿಕೊಂಡಿದ್ದು, ತಲಾ 10 ಲಕ್ಷಕ್ಕೂ ಅಧಿಕ ಬಾಕಿ ಉಳಿಸಿಕೊಂಡ ಗ್ರಾಪಂಗಳಲ್ಲಿ ಕೊನೆಯ ಸ್ಥಾನದಲ್ಲಿದೆ.

ನಂದಿಕೇಶ್ವರ ಗ್ರಾಪಂ ವ್ಯಾಪ್ತಿಯ ಕುಡಿಯುವ ನೀರು ಪೂರೈಕೆ ವಿಭಾಗದಲ್ಲಿ ಒಟ್ಟು 30 ಮೀಟರ್‌ಗಳಿದ್ದು, ಅದರಿಂದ ಸೆಪ್ಟಂಬರ್‌ ಅಂತ್ಯಕ್ಕೆ 115.41 ಲಕ್ಷ ಬಾಕಿ ಇದೆ. ಅಲ್ಲದೇ ಅತಿ ಹೆಚ್ಚು ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ(30 ದಿನಗಳ ಬಳಿಕವೂ ಬಾಕಿ ಉಳಿಸಿಕೊಂಡರೆ ಹೆಸ್ಕಾಂನಿಂದ ಬಡ್ಡಿ ವಿಧಿಸಲಾಗುತ್ತದೆ)ಅಷ್ಟೂ ಮೊತ್ತಕ್ಕೆ ಬರೋಬ್ಬರಿ 10.59 ಲಕ್ಷ ಬಡ್ಡಿ ಆಗಿದೆ. ಇನ್ನು ಬೀದಿದೀಪ ವಿಭಾಗದಲ್ಲಿ 18 ಮೀಟರ್‌ ಗಳಿದ್ದು, ಅದರಿಂದ 17.61ಲಕ್ಷ ಬಾಕಿ ಬರಬೇಕಿದೆ. ಇದಕ್ಕೆ ಒಟ್ಟು 2.99 ಲಕ್ಷ ಬಡ್ಡಿ ಪಾವತಿಸಬೇಕಿದೆ.

ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕಿನ ಒಟ್ಟು 42 ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು ಕುಡಿಯುವ ನೀರು ಪೂರೈಕೆ, ಕಿರು ನೀರಾವರಿ ಯೋಜನೆಗೆ ಒಟ್ಟು 843 ಮೀಟರ್‌ಗಳಿದ್ದು, ಇದರಿಂದ 1058.44 ಲಕ್ಷ ಬಾಕಿ, 129.30 ಲಕ್ಷ ಬಡ್ಡಿ ಸೇರಿ ಒಟ್ಟು 13.99 ಕೋಟಿ ಹೆಸ್ಕಾಂಗೆ ಬಾಕಿ ಉಳಿಸಿಕೊಳ್ಳಲಾಗಿದೆ. ಅಲ್ಲದೇ ಬೀದಿದೀಪಗಳ ವಿಭಾಗದಲ್ಲಿ 319 ಮೀಟರ್‌ಗಳಿದ್ದು, ಇದರಿಂದ 106.96 ಲಕ್ಷ , 41.63 ಲಕ್ಷ ಬಡ್ಡಿ ಸೇರಿದಂತೆ ಒಟ್ಟು 154.24 ಲಕ್ಷ ಬಾಕಿ ನೀಡಬೇಕಿದೆ.

ಬೇಕಾಬಿಟ್ಟಿ ಕೊಳವೆ ಬಾವಿಯೇ ಬಾಕಿಗೆ ಕಾರಣ : ಗ್ರಾಪಂ ಅಧಿಕಾರಿಗಳು ಹೇಳುವ ಪ್ರಕಾರ ಬೀದಿದೀಪಕ್ಕಾಗಿ ವ್ಯಯಿಸುವ ವಿದ್ಯುತ್‌ ಗಿಂತ ಕುಡಿಯುವ ನೀರಿಗಾಗಿ ತೋಡಿದ ಕೊಳವೆ ಬಾವಿಗಳು, ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಗಳಿಂದಲೇ ಹೆಚ್ಚು ವಿದ್ಯುತ್‌ ಹೊರೆಯಾಗುತ್ತಿದೆ. ಅದರಲ್ಲೂ ಶಾಸಕರು, ಸಚಿವರು ಹಾಗೂ ವಿವಿಧ ಹಂತದ ಜನಪ್ರತಿನಿಧಿಗಳು, ಗ್ರಾಮಗಳಲ್ಲಿ ಬೇಕಾಬಿಟ್ಟಿ ಕೊಳವೆ ಬಾವಿ ಕೊರೆಯಿಸುತ್ತಾರೆ. ಅವು ನಿರಂತರವಾಗಿ ಚಾಲೂ ಇರುತ್ತವೆ. ಹೀಗಾಗಿ ವಿದ್ಯುತ್‌ ಹೊರೆ ಹೆಚ್ಚು ಎಂದು ಪಿಡಿಒವೊಬ್ಬರು “ಉದಯವಾಣಿ’ಗೆ ತಿಳಿಸಿದರು.

-ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.