ಹುಬ್ಬಳ್ಳಿ ಈದ್ಗಾ ಮೈದಾನ: ಧಾರ್ಮಿಕ ಕಾರ್ಯಕ್ರಮಗಳಿಗೆ ಷರತ್ತು ವಿಧಿಸಿ ಅನುಮತಿ
ನ.10 ರಂದು ನಡೆಯುವ ಟಿಪ್ಪು ಜಯಂತಿಗೆ ಅವಕಾಶ
Team Udayavani, Nov 9, 2022, 9:33 PM IST
ಹುಬ್ಬಳ್ಳಿ: ಇಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಸೇರಿದಂತೆ ಅರ್ಜಿ ಸಲ್ಲಿಸುವ ಎಲ್ಲಾ ಮಹಾಪುರುಷರ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಹು-ಧಾ ಮಹಾನಗರ ಪಾಲಿಕೆ ನಿರ್ಧರಿಸಿದೆ.
ಪಾಲಿಕೆ ಮಹಾಪೌರರ ಕಚೇರಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಹಾಪೌರ ಈರೇಶ ಅಂಚಟಗೇರಿ ಅವರು, ಟಿಪ್ಪು ಸುಲ್ತಾನ್ ಜಯಂತಿ ಸೇರಿದಂತೆ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಜಯಂತಿ ಆಚರಣೆಗೆ ಅವಕಾಶ ಕಲ್ಪಿಸಲಾಗುವುದು. ಇದು ಸಾರ್ವಜನಿಕ ಆಸ್ತಿಯಾಗಿದ್ದು, ಈಗಾಗಲೇ ಗಣೇಶ ಮೂರ್ತಿ ಪ್ರತಿಷ್ಠಾನಪನೆಗೆ ಅವಕಾಶ ನೀಡಲಾಗಿತ್ತು. ಎಲ್ಲಾ ಸಮಾಜ ಹಾಗೂ ಧರ್ಮಗಳಿಗೆ ಮುಕ್ತ ಅವಕಾಶ ನೀಡಬೇಕು ಎನ್ನುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಯಾರೇ ಅರ್ಜಿ ಸಲ್ಲಿಸಿದರೂ ಪರಿಶೀಲಿಸಿ ಷರತ್ತು ವಿಽಸಿ ಅವಕಾಶ ಕಲ್ಪಿಸಲಾಗುತ್ತದೆ. ನ.10 ರಂದು ನಡೆಯುವ ಟಿಪ್ಪು ಜಯಂತಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ವಿಪಕ್ಷಗಳ ವಿರೋಧ
ವಿಪಕ್ಷ ಹಾಗೂ ಕಾಂಗ್ರೆಸ್ ಸದಸ್ಯ ದೊರಾಜ ಮಣಿಕುಂಟ್ಲಾ ಹಾಗೂ ಎಐಎಂಐಎಂ ಪಕ್ಷದ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಮಹಾಪೌರ ಘೋಷಣೆಗೆ ಸುದ್ದಿಗೋಷ್ಠಿಯಲ್ಲೇ ವಿರೋಧ ವ್ಯಕ್ತಪಡಿಸಿದರು. ಈದ್ಗಾ ಮೈದಾನ ಪವಿತ್ರ ಸ್ಥಳವಾಗಿದ್ದು, ಜಯಂತಿ ಸೇರಿದಂತೆ ಇತರೆ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದು ಸರಿಯಲ್ಲ. ಈ ಮೈದಾನದ ವಿವಾದಿಂದ ಮಹಾನಗರದ ಜನತೆ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾರೆ. ಹಿಂದೆ ಆದಂತಹ ಅನಾಹುತಗಳಿಗೆ ಅವಕಾಶ ನೀಡುವುದು ಬೇಡ. ಹೀಗಾಗಿ ಯಾವುದೇ ಆಚರಣೆಗೂ ಅವಕಾಶ ನೀಡಬಾರದು ಎಂದು ಮಹಾಪೌರರ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.