ಮಳೆಗೆ ಶೇಂಗಾ ಬೆಳೆ ನಾಶ-ರೈತನಿಗೆ ಸಂಕಷ್ಟ

ಈ ಬಾರಿಯಾದರೂ ಒಳ್ಳೆಯ ಫಸಲು ತೆಗೆಯುವ ಆಸೆಯಿಂದ ಸಾಲ ಮಾಡಿದ್ದ ಅನ್ನದಾತ

Team Udayavani, Nov 10, 2022, 6:05 PM IST

27

ಬಂಕಾಪುರ: ಈ ಭಾಗದಲ್ಲಿ ಅಕ್ಟೋಬರ್‌ ವರೆಗೆ ಸತತವಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಕೊಟ್ಟಿಗೇರಿ ನಿವಾಸಿ ಬಸವರಾಜ ಬಂಗಿ ಅವರಿಗೆ ಸೇರಿದ 8 ಎಕರೆ ಹೊಲದಲ್ಲಿ ಬೆಳೆದ ಶೇಂಗಾ ಬೆಳೆ ಸಂಪೂರ್ಣ ನಾಶವಾಗಿದೆ. ಇದಕ್ಕಾಗಿ ಮಾಡಿದ ಸಾಲ ರೈತನ ಬೆನ್ನೇರಿರುವುದರಿಂದ, ಹಿಂಗಾರು ಹಂಗಾಮಿಗೆ ಹೊಲ ಹದಗೊಳಿಸಲು ಹಣವಿಲ್ಲದೇ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಸತತ ಐದಾರು ವರ್ಷಗಳಿಂದ ಸರಿಯಾಗಿ ಬೆಳೆ ಬಾರದೆ, ಕೈಗೆ ಬಂದ ಬೆಳೆಗೆ ಸರಿಯಾದ ಬೆಲೆ ಸಿಗದೇ ರೈತ ಬಸವರಾಜ ಬಂಗಿ ಅವರು, ಈ ಬಾರಿಯಾದರೂ ಒಳ್ಳೆ ಫಸಲು ತೆಗೆಯುವ ಉದ್ದೇಶದಿಂದ ಸಿಕ್ಕ, ಸಿಕ್ಕಲ್ಲಿ ಸಾಲ ಮಾಡಿ, ಆಂಧ್ರಕ್ಕೆ ತೆರಳಿ ಖದರಿ ಲೇಪಾಕ್ಷಿ ತಳಿ ಶೆಂಗಾ ಬಿತ್ತನೆ ಬೀಜವನ್ನು 75 ಸಾವಿರ ಖರ್ಚು ಮಾಡಿ ತಂದು ಬಿತ್ತಿದ್ದರು.

ಗೊಬ್ಬರ, ಔಷಧ, ಆಳಿಗಾಗಿ 50 ಸಾವಿರ ಖರ್ಚು ಮಾಡಿದ್ದರು. 8 ಎಕರೆ ಜಮೀನಿನಲ್ಲಿ ಬೆಳೆದ ಶೇಂಗಾ ಗಿಡ ಕೀಳಿಸಲು 75 ಸಾವಿರ ಖರ್ಚು ಮಾಡಿದ್ದರು. ಕಿತ್ತು ಒಗೆದ ಶೇಂಗಾ ಅಕ್ಟೋಬರ್‌ ಕೊನೆಯ ವಾರದವರೆಗೂ ಸತತ ಸುರಿದ ಮಳೆಯಿಂದಾಗಿ ಮೊಳಕೆಯೊಡೆದು ಸಂಪೂರ್ಣ ನಾಶವಾಗಿದೆ. ಮುಂದಿನ ಬೆಳೆ ಬೆಳೆಯಲು ಹೊಲವನ್ನು ಹಸನು ಮಾಡಲಾಗದೇ ರೈತ ಬಸವರಾಜ ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾನೆ.

ಈಗ ಆತನ ಹೊಲ ಕೆರೆಯಂತಾಗಿದ್ದು, ಕಿತ್ತು ಒಗೆದ ಶೇಂಗಾ ಹೊಲದಲ್ಲಿಯೇ ಕೊಳೆಯುತ್ತಿದೆ. ಈಗಾಗಲೇ ಸಾಲ ಮಾಡಿ ಗಾಯದ ಮೇಲೆ ಬರೆ ಎಳೆದುಕೊಂಡ ರೈತ, ಮುಂದೆ ದುಸ್ಸಾಹಸ ಮಾಡಿ ಪುನಃ ಸಾಲ ಮಾಡಲಾಗದೇ ಕೈಚೆಲ್ಲಿ ಕುಳಿತಿದ್ದಾನೆ. ಇದು ಒಬ್ಬ ಬಸವರಾಜನ ಕತೆಯಲ್ಲ. ರಾಜ್ಯದ ರೈತರ ಸಂಕಷ್ಟದ ಕತೆಯಾಗಿದೆ. ಈಗಾಗಲೇ ಜಿಲ್ಲಾದ್ಯಂತ ನೂರಕ್ಕಿಂತಲೂ ಅಧಿಕ ರೈತರು ಸಾಲ ಬಾಧೆಯಿಂದ ಸಾವನ್ನಪ್ಪಿದ್ದು, ರೈತರ ಸಾವಿನ ಸಂಖ್ಯೆ ಹೆಚ್ಚಾಗುವ ಮೊದಲು, ಭೂತಾಯಿಯನ್ನು ನಂಬಿ ಬದುಕುವ ಸಂಕಷ್ಟದಲ್ಲಿರುವ ರೈತರ ಬಾಳಿಗೆ ಆಸರೆಯಾಗಿ ಸ್ವ ಕ್ಷೇತ್ರದ ಸಿ.ಎಂ.ಬಸವರಾಜ ಬೊಮ್ಮಾಯಿ ಅವರು ನಿಲ್ಲುವರೇ ಎಂದು ರೈತರು ಕಾದು ನೋಡುವಂತಾಗಿದೆ.

ಭೂ ತಾಯಿಯನ್ನೇ ನಂಬಿ ಇಲ್ಲಿಯವರೆಗೂ ವ್ಯವಸಾಯ ಮಾಡಿಕೊಂಡು ಬಂದಿದ್ದೇನೆ. ನಾನು ಈಗ ತುಂಬಾ ಸಂಕಷ್ಟದಲ್ಲಿದ್ದು, ಕೂಡಲೇ ಕಂದಾಯ ಅಧಿಕಾರಿಗಳು ಗಮನ ಹರಿಸಿ, ಸರ್ಕಾರದಿಂದ ಆರ್ಥಿಕ ಸಹಾಯ ಕಲ್ಪಿಸಿ ನನ್ನ ಮುಂದಿನ ಜೀವನಕ್ಕೆ ಆಸರೆಯಾಗಬೇಕು.  –ಬಸವರಾಜ ಬಂಗಿ, ರೈತ

ಬಸವರಾಜ ಬಂಗಿ ಅವರು ಬಾಳ ಕಷ್ಟದಲ್ಲಿದ್ದಾರ್ರಿ.. ಅವರ ಹೋಲದಾಗ ಕಿತ್ತೂಗೆದ ಶೇಂಗಾನ ಹಂಗ ಒಯ್ಯಂದ್ರೂ ಯಾರೂ ಒಯ್ಯವಲ್ರರೀ. ಹೊಲ ಹಸನ ಮಾಡಾಕೂ ಅವರ ಕೈಯ್ನಾಗ ದುಡ್ಡಿಲ್ರಿ. ಅಧಿಕಾರಿಗಳು ಬಂದು ನೋಡಿ ಅವರಿಗೆ ಸಹಾಯ ಮಾಡಬೇಕು.  –ನಾಗರಾಜ ಹಾದಿ, ರೈತ 

ಸದಾಶಿವ ಹಿರೇಮಠ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.