ಮಿಂಚಕಲ್ಲು ಬೆಟ್ಟದಲ್ಲಿ ವೆಂಕಟರಮಣ ಸ್ವಾಮಿ ದೇವಾಲಯದ ಅಡಿಗಲ್ಲು ಪೂಜೆ

ಸಸಿ ನೆಡುವ ಕಾರ್ಯಕ್ರಮ,ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

Team Udayavani, Nov 10, 2022, 8:54 PM IST

1-sadsdsad

ಕೊರಟಗೆರೆ: ಮಿಂಚಕಲ್ಲು ಬೆಟ್ಟ ಶ್ರೀ ವೆಂಕಟರಮಣ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯ ಅಭಿವೃದ್ದಿ ಸಮಿತಿ, ಪಾರಂಪರಿಕ ವೈದ್ಯ ಪರಿಷತ್ ತುಮಕೂರು ಹಾಗೂ ಆಯುಷ್ ಇಲಾಖೆ ತುಮಕೂರು ಇವರು ಜೊತೆಗೂಡಿ ತುಮಕೂರು ತಾಲೂಕು, ಬೆಳಧರ ಗ್ರಾಮ ಪಂಚಾಯಿತಿ ವಾಪ್ತಿಯಲ್ಲಿ ಇರುವ ಮಿಂಚಕಲ್ಲು ಬೆಟ್ಟದಲ್ಲಿ ವೆಂಕಟರಮಣ ಸ್ವಾಮಿಯ ದೇವಾಲಯದ ಅಡಿಗಲ್ಲು ಪೂಜೆ, ಆಯುರ್ವೇದ ಗಿಡಮೂಲಿಕೆಗಳ ಸಸಿ ನೆಡುವ ಕಾರ್ಯಕ್ರಮ ಮತ್ತು ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಪೂಜ್ಯ ಬಾಲಕೃಷ್ಣ ಗರೂಜಿರವರು ಪಾರಂಪರಿಕ ವೈದ್ಯಕೀಯ ಪರಂಪರೆಯು ಇತ್ತೀಚಿನ ದಿನಗಳಲ್ಲಿ ಮರೆಯಾಗುತ್ತಿದ್ದು ಇತ್ತೀಚಿನ ಯುವಜನತೆ ಪಾರಂಪರಿಕ ವೈದ್ಯಕೀಯ ಪದ್ದತಿಯನ್ನು ಹೆಚ್ಚು ಅಳವಡಿಸಿಕೊಂಡು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು.

ವೈಕುಂಟಗಿರಿ ನಾಮ ಫಲಕವನ್ನು ಉದ್ಘಾಟಿಸಿ ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್ ಮಾತನಾಡಿ ಮಿಂಚಕಲ್ಲು ಬೆಟ್ಟದಲ್ಲಿ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯವನ್ನು ನಿರ್ಮಾಣ ಮಾಡಬೇಕೆಂದಿರುವುದು ಸಂತಸದ ವಿಷಯ ಧಾರ್ಮಿಕ ಆಚರಣೆಯಲ್ಲಿ, ಪಾರಂಪರಿಕ ವೈದ್ಯ ಪದ್ದತಿಯನ್ನು ಅಳವಡಿಸಿಕೊಂಡು ಎಲ್ಲರೂ ಉತ್ತಮ ಆರೋಗ್ಯಯುತ ಜೀವನ ನೆಡೆಸುವಂತೆ ತಿಳಿಸುತ್ತಾ ನಿಮ್ಮ ಎಲ್ಲಾ ಈ ಉತ್ತಮ ಕಾರ್ಯಗಳಿಗೆ ನನ್ನ ವಯಕ್ತಿಕ ಸಹಕಾರವಿದೆ ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿಗಳಾದ ಸಂಜೀವಮೂರ್ತಿರವರು ಮಾತನಾಡಿ ಯೋಗ, ವ್ಯಾಯಾಮ, ಹಸಿರು ತರಕಾರಿ, ಸಿರಿಧಾನ್ಯ, ಹೆಚ್ಚು ಪೋಷಕಾಂಶ ಇರುವ ಆಹಾರವನ್ನು ಸೇವನೇ ಮಾಡುವುದರಿಂದ ಉತ್ತಮ ಆರೋಗ್ಯ ಮತ್ತು ದೀರ್ಘ ಆಯುಷ್ಯ ಪಡೆಯಬಹುದು ಎಂದು ಸಲಹೆ ನೀಡಿದರು ಮತ್ತು ಉಚಿತ ಆಯುರ್ವೇದ ಆರೋಗ್ಯ ತಪಾಸಣ ಶಿಬಿರದ ಅನುಕೂಲವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ತಾಲ್ಲೂಕು ಪಾರಂಪರಿಕ ವೈದ್ಯ ಪರಿಷತ್, ಅಧ್ಯಕ್ಷರಾದ ಕುಂ.ಶಿ.ಸದಾಶಿವಯಯ್ಯ ಮಾತನಾಡಿ ಕೆಲವು ಆಯುರ್ವೇದ ಗುಣವುಳ್ಳ ಸಸ್ಯಗಳನ್ನು ಪರಿಚಯಿಸಿ ಅವುಗಳಿಂದ ಮನೆಮದ್ದು ತಯಾರಿಕೆ ಮತ್ತು ಬಳಕೆಮಾಡುವ ಬಗ್ಗೆ ತಿಳಿವಳಿಕೆ ನೀಡಿದರು

ತುಮಕೂರು ತಾಲ್ಲೂಕು ಪಾರಂಪರಿಕ ವೈದ್ಯ ಪರಿಷತ್, ಅಧ್ಯಕ್ಷ ಕುಂ.ಶಿ.ಸದಾಶಿವಯ್ಯ ಮಾತನಾಡಿ ಕೆಲವು ಆಯುರ್ವೇದ ಗುಣವುಳ್ಳ ಸಸ್ಯಗಳನ್ನು ಪರಿಚಯಿಸಿ ಅವುಗಳಿಂದ ಮನೆಮದ್ದು ತಯಾರಿಕೆ ಮತ್ತು ಬಳಕೆಮಾಡುವ ಬಗ್ಗೆ ತಿಳಿವಳಿಕೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷರಾದ ಮೂಡಲಗಿರಿಯಪ್ಪನವರು ಪುರಾತನ ಇತಿಹಾಸ ಹೊಂದಿರುವ ಮಿಂಚಕಲ್ಲು ಬೆಟ್ಟದಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ಪಾದುಕೆಯಿದ್ದು ಶತಮಾನಗಳಿಂದ ಪಾದುಕೆಗಳಿಗೆ ಪೂಜೆ, ಆರತಿ, ಹೋಮ ಅನ್ನಸಂತರ್ಪಣೆ ಇತ್ಯಾದಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಈ ಜಾಗದಲ್ಲಿ ದೇವಾಲಯ ನಿರ್ಮಾಣ ಮಾಡಬೇಕೆಂಬುದು ಭಕ್ತಾದಿಗಳ ಬಹು ವರ್ಷಗಳ ಕನಸಾಗಿದ್ದು ಭಕ್ತಾದಿಗಳು ದೇವಾಲಯ ನಿರ್ಮಾಣಕ್ಕೆ ತನು, ಮನ, ಧನ ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ಮನವಿ ಮಾಡಿದರು.

ದೇವಾಲಯ ಸಮಿತಿಯ ಕಾರ್ಯದರ್ಶಿಯವರಾದ ವಾಸುದೇವಕುಮಾರ್‌ರವರು ತುಮಕೂರು ನಗರದಿಂದ 20 ಕಿ.ಮೀ ದೂರವಿರುವ ಮಿಂಚಕಲ್ಲು ಬೆಟ್ಟವು ಸುಮಾರು 400 ವರ್ಷಗಳ ಇತಿಹಾಸ ಪರಂಪರೆಯನ್ನು ಹೊಂದಿದ್ದು ಈ ಬೆಟ್ಟವು 3612.8 ಅಡಿಗಳ ಎತ್ತರದ ಬೆಟ್ಟವಾಗಿದ್ದು, ಐದು ಸುತ್ತಿನ ಕೋಟೆ, ಕೋಟೆ ಬಾಗಿಲುಗಳು, 8 ರಿಂದ 10 ನೀರಿನ ದೊಣೆಗಳು, ಮಂಟಪಗಳು ಶ್ರೀ ಆಂಜನೇಯ ಸ್ವಾಮಿ ದೇವಾಲಯ, ಶ್ರೀ ವೆಂಕಟರಮಣ ಸ್ವಾಮಿಯ ಪಾದಗಳು ಇದ್ದು ಇವುಗಳು ಅಳಿವಿನ ಅಂಚಿನಲ್ಲಿದ್ದು ಸರ್ಕಾರ ಇವುಗಳನ್ನು ಉಳಿಸಿ ಅಭಿವೃದ್ದಿಪಡಿಸಿ ದಾರ್ಮಿಕ ಮತ್ತು ಪ್ರವಾಸಿ ಕ್ಷೇತ್ರವಾಗಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾದ ನಗರಾಭಿವೃದಿ ಪ್ರಾಧಿಕಾರದ ಆಯುಕ್ತರಾದ ಗೋಪಾಲ್ ಜಾದವ್, ಕಂದಾಯ ಅಧಿಕಾರಿಯಾದ ದೇವರಾಜು, ಬೆಳಧರ ಗ್ರಾಮ ಪಂಚಾಯಿತಿ ಸದಸ್ಯರಾದ ಪುಟ್ಟರಾಜು, ಯಶೋದಮ್ಮ, ಮಹೇಶ್, ಶೋಭ, ಪಾರಂಪರಿಕ ವೈದ್ಯ ಪರಿಷತ್ ಸಂಚಾಲಕರಾದ ಸರೇಶ್ ಕುಮಾರ್, ಮಿಂಚಕಲ್ಲು ಬೆಟ್ಟ ಶ್ರೀ ವೆಂಕಟರಮಣ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯ ಅಭಿವೃದ್ದಿ ಸಮಿತಿ ಗೌರವ ಅಧ್ಯಕ್ಷರಾದ ತಿಮ್ಮೇಗೌಡ್ರು, ನಿರ್ದೇಶಕರಾದ ರಾಮಚಂದ್ರಪ್ಪ, ಜಯರಾಮಯ್ಯ, ಪಿ ಸಿದ್ದಗಂಗಪ್ಪ, ಮಾರುತಿ, ಡಿ.ನರಸರಾಜು, ಸಿ.ಡಿ.ನರಸರಾಜು, ಹನುಮಂತರಾಜು, ಬಸವರಾಜು, ಸಿ ಆರ್ ರಂಗನಾಥ್ ಸ್ವಾಮಿ, ಸರೇಶ್, ತಿಮ್ಮರಾಜು, ಒಬಳಾಪುರ ಗ್ರಾಪಂ ಸದಸ್ಯ ಆನಂದ್ ಇದ್ದರು.

ಚಿತ್ರ:ಮಿಂಚುಕಲ್ಲು ಬೆಟ್ಟ ಶ್ರೀ ವೆಂಕಟೇಶ್ವರ ಸ್ವಾಮಿ ಮತ್ತು ಆಂಜನೇಯ ಸ್ವಾಮಿ ಸೇವಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮ ವನ್ನು ಪೂಜ್ಯರಾದ ಬಾಲಕೃಷ್ಣ ಗುರೂಜಿ ಉದ್ಘಾಟನೆ ಮಾಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.