![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 13, 2022, 8:54 AM IST
ಮುಂಬೈ: ಮುಂದಿನ ಸೀಸನ್ ನ ಐಪಿಎಲ್ ಕೂಟದ ತಯಾರಿ ಆರಂಭವಾಗಿದೆ. ಡಿಸೆಂಬರ್ ನಲ್ಲಿ ಮಿನಿ ಹರಾಜು ನಡೆಯಲಿದೆ. ಅದಕ್ಕೂ ಮೊದಲು ಎಲ್ಲಾ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲು ಬಯಸುವ ಆಟಗಾರರ ಪಟ್ಟಿಯನ್ನು ನೀಡಬೇಕಾಗಿದೆ. ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ನಾಲ್ಕು ಬಾರಿಯ ವಿನ್ನರ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ತಮ್ಮ ಅಂತಿಮ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.
ಅಚ್ಚರಿ ಎಂಬಂತೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ತಮ್ಮ ನೆಚ್ಚಿನ ಕೈರನ್ ಪೊಲಾರ್ಡ್ ಅವರನ್ನು ಮೊದಲ ಬಾರಿಗೆ ಕೈಬಿಟ್ಟಿದೆ. ಆರಂಭದಿಂದಲೂ ಮುಂಬೈ ಪಾಳಯದಲ್ಲೇ ಇದ್ದ ಪೊಲಾರ್ಡ್ ಗೆ ಇದೇ ಮೊದಲ ಬಾರಿಗೆ ಬಾಗಿಲು ಮುಚ್ಚಲಾಗಿದೆ. ಅಲ್ಲದೆ ಫ್ಯಾಬಿಯನ್ ಅಲೆನ್, ಟೈಮಲ್ ಮಿಲ್ಸ್, ಮಯಾಂಕ್ ಮಾರ್ಕಾಂಡೆ ಮತ್ತು ಹೃತಿಕ್ ಶೋಕಿನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮುಂಬೈ ಒಟ್ಟು 10 ಆಟಗಾರರನ್ನು ಉಳಿಸಿಕೊಂಡಿದ್ದು, 5 ಆಟಗಾರರನ್ನು ಬಿಡುಗಡೆ ಮಾಡಿದೆ. ರೋಹಿತ್ ಶರ್ಮಾ, ಡೆವಾಲ್ಡ್ ಬ್ರೇವಿಸ್, ಇಶನ್ ಕಿಶನ್, ಸೂರ್ಯಕುಮಾರ್ ಯಾದವ್, ಡೇನಿಯಲ್ ಸಾಮ್ಸ್, ಟಿಮ್ ಡೇವಿಡ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ತಿಲಕ್ ವರ್ಮಾ ಅವರನ್ನು ಉಳಿಸಿಕೊಳ್ಳಲಾಗಿದೆ.
ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ಆಟಗಾರರನ್ನು ಉಳಿಸಿಕೊಂಡಿದ್ದು, 4 ಆಟಗಾರರನ್ನು ಬಿಡುಗಡೆ ಮಾಡಿದೆ. ಭಾರಿ ಚರ್ಚೆಗೆ ಕಾರಣವಾಗಿದ್ದ ರವೀಂದ್ರ ಜಡೇಜಾ ಅವರನ್ನು ಉಳಿಸಿಕೊಳ್ಳಲಾಗಿದೆ.
ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ, ಶಿವಂ ದುಬೆ, ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಮುಖೇಶ್ ಚೌಧರಿ, ಡ್ವೇನ್ ಪ್ರಿಟೋರಿಯಸ್ ಮತ್ತು ದೀಪಕ್ ಚಾಹಾರ್ ಅವರನ್ನು ಐಪಿಎಲ್ 16 ನೇ ಸೀಸನ್ಗೆ ಉಳಿಸಿಕೊಂಡಿದೆ. ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ಬಿಡುಗಡೆ ಮಾಡಲಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.