ಸಿದ್ದು ಸೋತ ಕ್ಷೇತ್ರದಲ್ಲೇ ಗೆದ್ದರೆ ನಿಜವಾದ ನಾಯಕ: ಕೆ.ಎಸ್.ಈಶ್ವರಪ್ಪ
Team Udayavani, Nov 14, 2022, 10:00 PM IST
ಶಿವಮೊಗ್ಗ: ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರೆ ನಿಜವಾದ ನಾಯಕ ಆಗುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರದಿಂದ ಸ್ಪರ್ಧಿಸುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಜನ ಅಭಿಮಾನದಿಂದ ಸಿದ್ದರಾಮಯ್ಯ ಅವರನ್ನು ಕರೆಯಬಹುದು. ಯಾವ ಕ್ಷೇತ್ರದಲ್ಲಿ ಗೆಲುವು, ಸೋಲು ಕಂಡಿದ್ದಾರೆ. ಅದೇ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಿ ಗೆದ್ದು ತೋರಿಸಬೇಕು. ಅದು ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆ ಆಗಿದೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದರೆ ನಿಜವಾದ ನಾಯಕ ಎನಿಸಿಕೊಳ್ಳುತ್ತಾರೆ. ಸೋಲುವ ಭಯದಿಂದ ಕ್ಷೇತ್ರ ಬದಲಾಯಿಸಿ ಕೋಲಾರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ. ಅದು ಬಿಟ್ಟು ಈ ಸಾರಿ ಒಂದು ಕ್ಷೇತ್ರ. ಮುಂದಿನ ಬಾರಿ ಮತ್ತೊಂದು ಕ್ಷೇತ್ರ, ಈ ರೀತಿ ಹೋದರೆ, ಆ ಕ್ಷೇತ್ರದ ಅಭಿವೃದ್ಧಿಯಾಗಲ್ಲ. ಜನರ ಪ್ರೀತಿ-ವಿಶ್ವಾಸ ಗಳಿಸಲಿಲ್ಲ ಎನ್ನುವ ಅಭಿಪ್ರಾಯ ಬರುತ್ತದೆ. ಶಾಸಕ ತನ್ವೀರ್ ಸೇಠ್ ಟಿಪ್ಪು ಪ್ರತಿಮೆ ನಿರ್ಮಾಣ ಮಾಡಿದರೆ ದೇಶದ್ರೋಹಿ ಚಟುವಟಿಕೆಯ ಒಂದು ಭಾಗ ಆಗುತ್ತಾರೆ.
ತನ್ವೀರ್ ಸೇಠ್ ಈ ರೀತಿ ಹೇಳಿಕೆ ಕೊಟ್ಟಿದ್ದು ತಪ್ಪು. ದೇಶದ ಜನರ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ನಾಯಕರು ಅವರಿಗೆ ಬುದ್ಧಿ ಹೇಳಲಿ. ಬೇಕಾದರೆ ಅಬ್ದುಲ್ ಕಲಾಂ ಅವರ ಪ್ರತಿಮೆ ಸ್ಥಾಪನೆ ಮಾಡಲಿ. ಅದು ಬಿಟ್ಟು ದೇಶದ್ರೋಹಿ ಟಿಪ್ಪು ಪ್ರತಿಮೆ ಮಾಡುವುದು ಸರಿಯಲ್ಲ. ಇಸ್ಲಾಂ ಧರ್ಮದಲ್ಲಿ ಮೂರ್ತಿ ಪೂಜೆಗೆ ಅವಕಾಶ ಇಲ್ಲ. ತನ್ವೀರ್ ಸೇಠ್ ಎಲ್ಕೆಜಿ ವಿದ್ಯಾರ್ಥಿಯಂತೆ ಪ್ರಾರಂಭಿಕ ಪಾಠ ಕಲಿಯಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.