ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಸಂತೆಕಸಲಗೆರೆ ಸರ್ಕಾರಿ ಪ್ರೌಢಶಾಲೆ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ರ ಕೈಚಳಕ

Team Udayavani, Nov 15, 2022, 2:45 PM IST

ಒಂದೇ ಪುಟದಲ್ಲಿ ಸಂಪೂರ್ಣ ರಾಮಾಯಣ ಚಿತ್ರಣ

ಮಂಡ್ಯ: ಒಂದೇ ಚಿತ್ರದಲ್ಲಿ ಇಡೀ ಸಂಪೂರ್ಣ ರಾಮಾಯಣದ ದೃಶ್ಯ ಚಿತ್ರಿಸುವ ಮೂಲಕ ಚಿತ್ರಕಲಾ ಶಿಕ್ಷಕ ನರಸಿಂಹಚಾರ್‌ ಗಮನ ಸೆಳೆದಿದ್ದಾರೆ.

ಸಂತೆಕಸಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿರುವ ನರಸಿಂಹಚಾರ್‌ ಕೆರಗೋಡು ಹೋಬಳಿ ಮರಿಲಿಂಗನದೊಡ್ಡಿ ಗ್ರಾಮದವರಾಗಿದ್ದಾರೆ.

ಗಮನ ಸೆಳೆಯುತ್ತಿದೆ: ಪ್ರತಿದಿನ 5 ಗಂಟೆಯಂತೆ ಸುಮಾರು 12 ದಿನ ಈ ಚಿತ್ರ ಬಿಡಿಸಿದ್ದಾರೆ. ಬ್ಲ್ಯಾಕ್‌ ಜೆಲ್‌ ಪೆನ್‌, ಅಕ್ರಾಲಿಕ್‌ ಬ್ಲಾಕ್‌ ಕಲರ್‌ ಉಪಯೋಗಿ ಸಿದ್ದಾರೆ. 16X24 ಅಳತೆಯ ಒಂದು ಡ್ರಾಯಿಂಗ್‌ ಶೀಟ್‌ನಲ್ಲಿ ಸಂಪೂರ್ಣ ರಾಮಾಯಣದ ದೃಶ್ಯಾವಳಿ ಗಳನ್ನು ಒಂದೇ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದಾರೆ. ಸಂಪೂರ್ಣ ರಾಮಾಯಣದಲ್ಲಿ ಬರುವ ರಾಮ, ಲಕ್ಷ್ಮಣ, ಸೀತೆ, ಆಂಜನೇಯ, 10 ತಲೆಯ ರಾವಣ, ದಶರಥ ಸೇರಿ ಎಲ್ಲಾ ಪಾತ್ರಗಳನ್ನೊಳಗೊಂಡ ಚಿತ್ರ ಬಿಡಿಸಿದ್ದಾರೆ. ಈ ಚಿತ್ರ ಎಲ್ಲರ ಗಮನ ಸೆಳೆಯುತ್ತಿದೆ.

ಹೆಸರುವಾಸಿ: ನರಸಿಂಹಚಾರ್‌ ಈ ಹಿಂದೆ ವರನಟ ಡಾ.ರಾಜ್‌ಕುಮಾರ್‌ ಅವರು ನಟಿಸಿರುವ ಎಲ್ಲಾ ಸಿನಿಮಾಗಳ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದಿದ್ದರು. ಅಲ್ಲದೆ, ರಾಜ್‌ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ಕುಮಾರ್‌ ಅವರ ಅರ್ಧ ಭಾಗ ಬಿಡಿಸುವ ಮೂಲಕ ವಿಭಿನ್ನ ಹಾಗೂ ಸರಳ ಚಿತ್ರಕಲೆಗೆ ಹೆಸರು ವಾಸಿಯಾಗಿದ್ದರು. ಸಂಪೂರ್ಣ ರಾಮಾಯಣದ ಚಿತ್ರವನ್ನು ಈಗಾಗಲೇ ಸಾಕಷ್ಟು ಮಂದಿ ಚಿತ್ರಿಸಿದ್ದಾರೆ. ಆದರೆ, ಒಂದೇ ಚಿತ್ರದಲ್ಲಿ ಸರಳವಾಗಿ ಚಿತ್ರ ಬಿಡಿಸಿರುವುದು ಇದೇ ಮೊದಲು. ಚಿತ್ರಕಲೆ ಡಿಪ್ಲೋಮಾ ಪಡೆದಿರುವ ನರಸಿಂಹಚಾರ್‌ ಮಕ್ಕಳಿಗೂ ಚಿತ್ರಕಲೆ ಪಾಠ ಮಾಡುತ್ತಿದ್ದಾರೆ.

ಚಿತ್ರಕಲೆ ಶಿಕ್ಷಕರು: ಚಿಕ್ಕಂದಿನಿಂದಲೇ ರಾಜ್‌ ಕುಮಾರ್‌ ಸಿನಿಮಾ ವೀಕ್ಷಣೆ ಮಾಡುತ್ತಾ, ಅವರ ಪ್ರೇರಣೆಯಿಂದಲೇ ಚಿತ್ರಕಲೆಯತ್ತ ಆಸಕ್ತಿ ಬೆಳೆಸಿ ಕೊಂಡಿದ್ದಾರೆ. ಮೊದಲು ರಾಜ್‌ಕುಮಾರ್‌ ಅವರ ವಿವಿಧ ರೀತಿಯ ಚಿತ್ರ ಬಿಡಿಸುತ್ತಿದ್ದರು. ನಂತರ ಜಿಲ್ಲೆ ಯ ರೈತರ ಎತ್ತಿನಗಾಡಿಗಳಿಗೆ ಚಿತ್ರ ಬರೆಯುತ್ತಿದ್ದ ಅವರು, ನಂತರ ಡಿಪ್ಲೋಮಾ ಮಾಡಿಕೊಂಡು ಶಿಕ್ಷಕರಾಗಿದ್ದಾರೆ. ತಂದೆಯೂ ಚಿತ್ರಕಲಾವಿದರಾಗಿದ್ದರು. ಅದರಂತೆ ನರಸಿಂಹಚಾರ್‌ ಕೂಡ ತಮ್ಮ ಮಗಳು ಮೋನಿಕಾಗೂ ಚಿತ್ರಕಲೆ ಹೇಳಿಕೊಟ್ಟು ಆಕೆಯೂ ಬೆಂಗಳೂರಿನ ಶಾಲೆಯೊಂದರಲ್ಲಿ ಚಿತ್ರಕಲೆ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಚಿತ್ರಕಲೆಯಲ್ಲಿ ನನಗೆ ಸಂಪೂರ್ಣ ತೃಪ್ತಿ ಇದೆ. ಇನ್ನಷ್ಟು ವಿಭಿನ್ನ ವಿವಿಧ ರೀತಿಯ ಚಿತ್ರಗಳನ್ನು ಸರಳವಾಗಿ ಬಿಡಿಸುವ ಹಂಬಲವಿದ್ದು, ಮತ್ತಷ್ಟು ಚಿತ್ರ ಬಿಡಿಸಲು ಪ್ರಯತ್ನಿಸುತ್ತೇನೆ. -ನರಸಿಂಹಚಾರ್‌, ಚಿತ್ರಕಲಾವಿದ 

ನಟ ರಾಜ್‌ ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ ಕುಮಾರ್‌ ಅವರಭಾವಚಿತ್ರವನ್ನು ಒಂದೇ ಚಿತ್ರದಲ್ಲಿಚಿತ್ರಿಸಿರುವುದು.

ಟಾಪ್ ನ್ಯೂಸ್

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Mur

Mandya: ತಮ್ಮನ ಕೊಲೆಗೆ ಸುಪಾರಿ ನೀಡಿ, ಕುಂಭಮೇಳಕ್ಕೆ ಹೋದ ಅಣ್ಣ!

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

ರೇವಣ್ಣಗೆ ವೋಟ್‌ಗೆ ಮಾತ್ರ ಮಂಡ್ಯ,ಅಭಿವೃದ್ಧಿಗೆ ಹಾಸನ: ಚಲುವರಾಯಸ್ವಾಮಿ

1-dess

Mandya: ಬೆಳ್ಳಂಬೆಳಗ್ಗೆ ಕತ್ತು ಸೀಳಿ ವ್ಯಕ್ತಿಯ ಬರ್ಬರ ಹ*ತ್ಯೆ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

ಇಂದಿನಿಂದ ದಕ್ಷಿಣ ಭಾರತದ ಮಹಾಕುಂಭಮೇಳ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.