ಟಿಕೆಟ್ ಗಾಗಿ ಲಂಚ ಪ್ರಕರಣ; ಆಪ್ ಶಾಸಕನ ಸೋದರ ಸಂಬಂಧಿ ಸೇರಿ ಮೂವರ ಬಂಧನ
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಪ್ ಅಭ್ಯರ್ಥಿಗಳು ದೊಡ್ಡ ಮೊತ್ತದ ಲಂಚ ನೀಡಿದ್ದರು
Team Udayavani, Nov 16, 2022, 1:45 PM IST
ನವದೆಹಲಿ: ಡಿಸೆಂಬರ್ 4ರಂದು ನಡೆಯಲಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರ ಸೋದರ ಸಂಬಂಧಿ ಸೇರಿದಂತೆ ಮೂವರನ್ನು ಟಿಕೆಟ್ ಗಾಗಿ ನಗದು ಪ್ರಕರಣದಲ್ಲಿ ಬಂಧಿಸಲಾಗಿದೆ.
ಇದನ್ನೂ ಓದಿ:ಶಂಕರನಾರಾಯಣ: ಶಾಲಾ ಕ್ರೀಡಾಕೂಟದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ; ಹಿಂ.ಜಾಗರಣದಿಂದ ಪ್ರತಿಭಟನೆ
ಟಿಕೆಟ್ ಗಾಗಿ ನಗದು ಪ್ರಕರಣದ ಆರೋಪದಲ್ಲಿ ಆಪ್ ಶಾಸಕ ಅಖಿಲೇಶ್ ತ್ರಿಪಾಠಿಯ ಸಹಾಯಕ ವಿಶಾಲ್ ಪಾಂಡೆ, ಸೋದರ ಸಂಬಂಧಿ ಓಂ ಸಿಂಗ್ ಹಾಗೂ ಪ್ರಿನ್ಸ್ ರಘುವಂಶಿ ಸೇರಿದಂತೆ ಮೂವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯ ಹಿನ್ನೆಲೆಯಲ್ಲಿ ಆಪ್ ಕಾರ್ಯಕರ್ತೆ ಶೋಭಾ ಖಾರಿ ಅವರು ವಾರ್ಡ್ ನಂಬರ್ 69ರಿಂದ ಸ್ಪರ್ಧಿಸಲು ಟಿಕೆಟ್ ಗಾಗಿ ಒತ್ತಾಯಿಸಿದ್ದರು. ಆದರೆ ಟಿಕೆಟ್ ನೀಡಲು ಶಾಸಕ ಅಖಿಲೇಶ್ ತ್ರಿಪಾಠಿ ಅವರು 90 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಟಿಕೆಟ್ ಗಾಗಿ ಅಭ್ಯರ್ಥಿಗಳು ಅಖಿಲೇಶ್ ತ್ರಿಪಾಠಿಗೆ 35 ಲಕ್ಷ ಮತ್ತು ವಾಝಿಪುರ್ ಶಾಸಕ ರಾಜೇಶ್ ಗುಪ್ತಾಗೆ 20 ಲಕ್ಷ ಲಂಚ ನೀಡಿದ್ದರು. ಉಳಿದ 35 ಲಕ್ಷ ರೂಪಾಯಿಯನ್ನು ಅಭ್ಯರ್ಥಿಯ ಅಂತಿಮ ಪಟ್ಟಿ ಬಿಡುಗಡೆಯಾದ ನಂತರ ನೀಡಲು ಸೂಚಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಲಂಚ ಕೊಟ್ಟರೂ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿತ್ತು!
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಪ್ ಅಭ್ಯರ್ಥಿಗಳು ದೊಡ್ಡ ಮೊತ್ತದ ಲಂಚ ನೀಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿತ್ತು. ನಂತರ ಶಾಸಕ ಅಖಿಲೇಶ್ ತ್ರಿಪಾಠಿ ಸೋದರ ಸಂಬಂಧಿ ಓಂ ಸಿಂಗ್ ಬಳಿ ತೆರಳಿ ಹಣ ವಾಪಸ್ ನೀಡುವಂತೆ ಕೇಳಿದ್ದರು. ಹಣ ವಾಪಸ್ ಕೊಡಲು ನಿರಾಕರಿಸಿದ್ದರಿಂದ ಎಸಿಬಿಗೆ ಹಣ ಪಡೆಯುತ್ತಿರುವ ದೃಶ್ಯದ ಸಾಕ್ಷ್ಯ ಸಮೇತ ದೂರು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.