ಭಾರತ ಟಿ20 ತಂಡಕ್ಕೆ ಮರಳಲಿದ್ದಾರೆ ಎಂ.ಎಸ್‌. ಧೋನಿ!


Team Udayavani, Nov 16, 2022, 6:30 PM IST

ಭಾರತ ಟಿ20 ತಂಡಕ್ಕೆ ಮರಳಲಿದ್ದಾರೆ ಎಂ.ಎಸ್‌. ಧೋನಿ!

ಮುಂಬಯಿ: ಈ ಬಾರಿ ಟಿ20 ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್‌ನಲ್ಲೇ ಮುಗ್ಗರಿಸಿದೆ. ಆಗ ರಾಹುಲ್‌ ದ್ರಾವಿಡ್‌ ಅವರನ್ನು ಟಿ20 ಕೋಚ್‌ ಸ್ಥಾನದಿಂದ ತೆಗೆಯಬೇಕು, ಇಲ್ಲವೇ ಅವರಿಗೆ ಒಬ್ಬ ಸಹಾಯಕರನ್ನಾದರೂ ನೀಡಬೇಕೆಂದು ಕೆಲವರು ಆಗ್ರಹಿಸಿದ್ದರು. ಮೂರೂ ಮಾದರಿಗಳಲ್ಲಿ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುವುದು ರಾಹುಲ್‌ ದ್ರಾವಿಡ್‌ಗೆ ಹೊರೆಯಾಗಲಿದೆ ಎಂಬುದು ಬಿಸಿಸಿಐ ನಿಲುವು ಕೂಡ ಆಗಿದೆ.

ಆದ್ದರಿಂದ ಅವರಿಗೆ ಟಿ20 ಜವಾಬ್ದಾರಿಯಿಂದ ಬಿಡುಗಡೆ ನೀಡಲು ಬಯಸಿದೆ ಎನ್ನಲಾಗುತ್ತಿದೆ. ಹಾಗಾದರೆ ಅವರ ಸ್ಥಾನವನ್ನು ತುಂಬುವವರು ಯಾರು ಎನ್ನುತ್ತೀರಾ? ವಿಶ್ವಶ್ರೇಷ್ಠ ನಾಯಕ ಎಂ.ಎಸ್‌. ಧೋನಿ! ಅವರಿಗೆ ಟಿ20 ತಂಡದ ಹೊಣೆ ವಹಿಸಲು ಬಿಸಿಸಿಐ ಅಧಿಕೃತವಾಗಿ ಮನವಿ ಕಳಿಸುವ ಸಾಧ್ಯತೆಯಿದೆ.

ದ್ರಾವಿಡ್‌ ಏಕದಿನ, ಟೆಸ್ಟ್‌ ತಂಡದ ಮುಖ್ಯ ತರಬೇತುದಾರರಾಗಿಯೇ ಮುಂದುವರಿಯಲಿದ್ದಾರೆ. ಟಿ20ಗೆ ನುರಿತ, ಪಳಗಿದ ವ್ಯಕ್ತಿಯೊಬ್ಬರು ಬೇಕಾಗುತ್ತಾರೆ. ಅದಕ್ಕೆ ಧೋನಿಗಿಂತ ಸಮರ್ಥರು ಇನ್ನೊಬ್ಬರಿಲ್ಲ ಎನ್ನುವುದು ಎಲ್ಲರ ಅಭಿಪ್ರಾಯ. ಅವರು ಚೆನ್ನೈ ಪರ ಮುಂದಿನ ವರ್ಷದ ಐಪಿಎಲ್‌ನಲ್ಲಿ ಪಾಲ್ಗೊಂಡ ಅನಂತರ ನಿವೃತ್ತಿಯಾಗಲಿದ್ದಾರೆ. ಅವರನ್ನು ಬಿಸಿಸಿಐಗೆ ಎಳೆದುಕೊಳ್ಳುವುದು ಉದ್ದೇಶವಾಗಿದೆ. ಅವರಿಗೆ ಟಿ20 ತಂಡದ ನಿರ್ದೇಶಕ ಸ್ಥಾನ ನೀಡುವ ಲೆಕ್ಕಾಚಾರವಿದೆ. ಧೋನಿ ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ತಂಡದ ಮೆಂಟರ್‌ ಆಗಿದ್ದರು. ಆದರೆ ಆಗ ಕೇವಲ ಒಂದು ವಾರ ಮುಂಚೆ ತಂಡವನ್ನು ಕೂಡಿಕೊಂಡಿದ್ದರು. ಆ ಹಂತದಲ್ಲಿ ನಿರೀಕ್ಷಿತ ಫ‌ಲಿತಾಂಶ ಬಂದಿರಲಿಲ್ಲ. ಇನ್ನು ಮುಂದೆ ಅವರನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಂಡು ಟಿ20 ತಂಡವನ್ನು ಪುನರೂಪಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.