![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 16, 2022, 11:00 PM IST
ಬಳ್ಳಾರಿ: ಖಾತೆ ಬದಲಾವಣೆಗೆ ಫಾರಂ ನಂ.2,3 ಮಾಡಿಕೊಡಲು 80ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಪಾಲಿಕೆಯ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್ ಲೋಕಾಯುಕ್ತ ಅಧಿಕಾರಿಗಳು ಬೀಸಿದ ಬಲೆಗೆ ಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಸಿಬ್ಬಂದಿಗಳಾದ ಫಸ್ಟ್ ಗ್ರೇಡ್ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್, ಕೇಸ್ ವರ್ಕರ್ ಚಿನ್ನಯ್ಯ ಎನ್ನುವವರು, ಜ್ಯುವೆಲ್ಲರಿ ವ್ಯಾಪಾರಿ ಕಿರಣ್ ಯಾದವ್ ಎನ್ನುವವರಿಗೆ ನಿವೇಶನ ಖಾತೆ ಬದಲಾವಣೆಗೆ ಫಾರಂ ನಂ..2,3 ಮಾಡಿ ಕೊಡದೆ ಕಳೆದ ಸೆ.2 ರಿಂದ ಕಚೇರಿಗೆ ಅಲೆದಾಡಿಸಿದ್ದಾರೆ. ಜತೆಗೆ ಯೂಸೋಫ್ ಎನ್ನುವ ಬ್ರೋಕರ್ ಮೂಲಕ 80 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದಾರೆ.
ಇದರಿಂದ ಬೇಸತ್ತ ಕಿರಣ್ ಯಾದವ್ ನ.16 ರಂದು ಬುಧವಾರ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಬಲೆ ಬೀಸಿದ್ದಾರೆ. ಬ್ರೋಕರ್ ಯುಸೋಫ್ ಮೂಲಕ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್ 80 ಸಾವಿರ ರೂ. ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣ ಸಮೇತ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಲೋಕಾಯುಕ್ತ ಅಧೀಕ್ಷಕ ಪಿ.ಎ.ಪುರುಷೋತ್ತಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.