ನೈಜ ಪ್ರೇಮಕಥೆಯ ಸುತ್ತ ‘ಕೆರೆಬೇಟೆ’ ಚಿತ್ರ
Team Udayavani, Nov 17, 2022, 11:50 AM IST
ಮಲೆನಾಡು ಭಾಗದ ಬಹು ಜನಪ್ರಿಯ ಸಂಸ್ಕೃತಿಗಳಲ್ಲಿ “ಕೆರೆಬೇಟೆ’ ಕೂಡ ಒಂದು. ಈಗ ಇದೇ ಹೆಸರಿನಲ್ಲಿ ಇದೇ ಸಂಸ್ಕೃತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು “ಕೆರೆಬೇಟೆ’ ಎಂಬ ಹೆಸರಿನಲ್ಲೇ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗುತ್ತಿದೆ.
ಈ ಹಿಂದೆ “ರಾಜಹಂಸ’ ಎಂಬ ಅಪ್ಪಟ ಪ್ರೇಮಕಥೆಯೊಂದರ ಮೂಲಕ ತೆರೆಯ ಮೇಲೆ ಹೀರೋ ಆಗಿ ಗುರುತಿಸಿಕೊಂಡಿದ್ದ ನಟ ಗೌರಿಶಂಕರ್, ಈಗ ಮಲೆನಾಡು ಭಾಗದಲ್ಲಿ ಜನಪ್ರಿಯವಾಗಿರುವ “ಕೆರೆಬೇಟೆ’ ಎನ್ನುವ ಸಂಸ್ಕೃತಿಯೊಂದನ್ನು ತೆರೆಮೇಲೆ ತರಲು ಹೊರಟಿದ್ದು, ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
“ಜನಮನ ಸಿನಿಮಾಸ್’ ಬ್ಯಾನರ್ನಲ್ಲಿ ಜೈ ಶಂಕರ್ ಪಟೇಲ್ ನಿರ್ಮಿಸುತ್ತಿರುವ “ಕೆರೆಬೇಟೆ’ ಸಿನಿಮಾದಲ್ಲಿ ಹಳ್ಳಿ ಸೊಗಡಿನಲ್ಲಿ ನಡೆಯುವ ನೈಜ ಪ್ರೇಮಕಥೆಯೊಂದನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಇದೊಂದು ಲವ್ ಸ್ಟೋರಿಯಾದರೂ, ಕೆರೆಬೇಟೆ ಚಿತ್ರಕಥೆಯ ಒಂದು ಮುಖ್ಯ ಭಾಗವಾಗಿ ಮೂಡಿಬರಲಿದೆ ಎನ್ನುವುದು ಚಿತ್ರತಂಡದ ಮಾತು. ಕಳೆದ 10 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪವನ್ ಒಡೆಯರ್ ಸೇರಿದಂತೆ ಹಲವು ನಿರ್ದೇಶಕರ ಜೊತೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಗುರುಶಿವ ಹಿತೈಷಿ “ಕೆರೆಬೇಟೆ’ ಚಿತ್ರಕ್ಕೆ ಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ “ಕೆರೆಬೇಟೆ’ ಸಿನಿಮಾದ ಮುಹೂರ್ತ ನಡೆಸಲಾಗಿದ್ದು, ಮೊದಲ ಹಂತದ ಚಿತ್ರೀಕರಣ ಸಿಗಂದೂರು, ಕೋರ್ಗಾ ಘಾಟ್ ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವು ಪ್ರಮುಖ ಭಾಗಗಳಲ್ಲಿ ನಡೆಯಲಿದೆ.
ಇನ್ನು “ಕೆರೆಬೇಟೆ’ ಸಿನಿಮಾದ ಮೂಲಕ ನಾಯಕಿಯಾಗಿ ಬಿಂದು ಶಿವರಾಮ್ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಗುರುಶಿವ ಹಿತೈಷಿ ಹಾಗೂ ಗೌರಿಶಂಕರ್ ಚಿತ್ರಕಥೆ ಸಿನಿಮಾದಲ್ಲಿದ್ದು, ಕೀರ್ತನ್ ಪೂಜಾರಿ ಛಾಯಾಗ್ರಹಣ, ಜ್ಞಾನೇಶ್ ಅವರ ಸಂಕಲನವಿದೆ.
ಚಿತ್ರದ ಹಾಡುಗಳಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜನೆಯಿದೆ. ಡಿಫರೆಂಟ್ ಡ್ಯಾನಿ ಸಾಹಸ ಹಾಗೂ ಕಂಬಿರಾಜು ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಸದ್ಯ “ಕೆರೆಬೇಟೆ’ ಸಿನಿಮಾದ ಚಿತ್ರೀಕರಣ ಆರಂಭಿಸಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯಭಾಗದಲ್ಲಿ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.