ಮಾಹಿತಿ ತಂತ್ರಜ್ಞಾನದೊಂದಿಗೆ ಮನೋರಂಜನೆ: ಡಾ| ಹೆಗ್ಗಡೆ

ಲಕ್ಷದೀಪೋತ್ಸವದಲ್ಲಿ ವಸ್ತುಪ್ರದರ್ಶನಕ್ಕೆ ಚಾಲನೆ

Team Udayavani, Nov 20, 2022, 6:30 AM IST

ಮಾಹಿತಿ ತಂತ್ರಜ್ಞಾನದೊಂದಿಗೆ ಮನೋರಂಜನೆ ಅಡಕ: ಡಾ| ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಲಕ್ಷದೀಪೋತ್ಸವ ಸಂದರ್ಭ ವಸ್ತು ಪ್ರದರ್ಶನ ಏರ್ಪಡಿಸುತ್ತಾ ಬರಲಾಗಿದೆ. ಕೊರೊನಾದಿಂದ ವಿಚಲಿತರಾದ ನಮಗೆ ಮತ್ತೆ ಈ ವರ್ಷ ವಸ್ತು ಪ್ರದರ್ಶನ ನಡೆಸಲು ಅವಕಾಶ ದೊರೆತಿದೆ. ಜನರಿಗೆ ಮಾಹಿತಿ ತಂತ್ರಜ್ಞಾನದ ಜತೆಗೆ ಮನೋರಂಜನೆ ನೀಡುವ ಉದ್ದೇಶವೇ ವಸ್ತು ಪ್ರದರ್ಶನ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ನುಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಮಹೋತ್ಸವದ ಆರಂಭದ ದಿನವಾದ ನ.19 ರಂದು ಧರ್ಮಸ್ಥಳ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ ವೇಳೆ ಶುಭಹಾರೈಸಿದರು.

ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಆದಂತಃ ಪರಿವರ್ತನೆಗಳು, ಅನೇಕ ಯಶಸ್ವಿ ಪ್ರಯೋಗಳನ್ನು ಇಲ್ಲಿ ಪರಿಚಯಿಸಲಾಗಿದೆ. ಸರಕಾರಿ ಸಂಸ್ಥೆಗಳು, ಬ್ಯಾಂಕ್‌, ಸಂಘ-ಸಂಸ್ಥೆಗಳು ಬಂದಿವೆ. ಜನರಿಗೆ ಸಾಕಷ್ಟು ಮಾಹಿತಿ ಹಾಗೂ ಸಂಜೆ ಹೊತ್ತಿನಲ್ಲಿ ಮನೋರಂಜನೆ ದೊರೆಯುತ್ತದೆ. ಮಕ್ಕಳು, ಕುಟುಂಬ ಸಮೇತರಾಗಿ ಬನ್ನಿ, ಲಕ್ಷದೀಪೋತ್ಸವದ ಸಂಭ್ರಮವನ್ನು ಕಾಣಿ ಎಂದು ಹೆಗ್ಗಡೆ ಸ್ವಾಗತಿಸಿದರು.

ವಸ್ತು ಪ್ರದರ್ಶನ ಮಳಿಗೆ ಉದ್ಘಾಟಿಸಿ ಶುಭಹಾರೈಸಿದ ಶಾಸಕ ಹರೀಶ್‌ ಪೂಂಜ, ಕೊರೊನಾ ಕಾಲಘಟ್ಟ ಸರಿದು 43ನೇ ವರ್ಷದ ವಸ್ತು ಪ್ರದರ್ಶನ ಮಳಿಗೆ ಉದ್ಘಾಟನೆ ಭಾಗ್ಯ ನನಗೆ ದೊರೆತಿರುವುದು ಹರ್ಷ ತಂದಿದೆ. ಲಕ್ಷಾಂತರ ಮಂದಿ ಸೇರುವ ಭಕ್ತಿರೆಡೆಗೆ ಹೊಸ ಜ್ಞಾನದ ಬೆಳಕು ನೀಡುವ ವಸ್ತು ಪ್ರದರ್ಶನದಲ್ಲಿ ಎಲ್ಲರೂ ಪಾಲುಪಡೆಯಬೇಕು.
ಲಕ್ಷದೀಪೋತ್ಸವದಿಂದ ಜೀವನಕ್ಕೆ ಹೊಸ ಬೆಳಕು ತರಲಿ, ಪೂಜ್ಯರ ಹೆಗ್ಗಡೆ ಅವರ ಆಶೀರ್ವಾದ ರಾಜ್ಯದ ಜನತೆ ದೊರೆಯಲಿ ಎಂದು ಹೇಳಿದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಸತೀಶ್ಚಂದ್ರ ಎಸ್‌. ದೀಪ ಬೆಳಗುವ ಮೂಲಕ ಮಳಿಗೆ ಉದ್ಘಾಟಿಸಿದರು.

ಡಾ| ಹೆಗ್ಗಡೆಯವರವ ಮೊಮ್ಮಗಳು ಮಾನ್ಯಾ, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌.ಮಂಜುನಾಥ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌, ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್‌. ಜನಾರ್ದನ್‌, ವಸ್ತು ಪ್ರದರ್ಶನ ಮಳಿಗೆಯ ಮೇಲುಸ್ತುವಾರಿ ಯತೀಶ್‌ ಬಳಂಜ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ, ಎಸ್‌ಡಿಎಂ ಆಸ್ಪತ್ರೆಯ ಆಡಳಿತಾಧಿಕಾರಿ ಜನಾರ್ದನ್‌, ಜನಜಾಗೃತಿ ವೇದಿಕೆ ರಾಜ್ಯ ಕಾರ್ಯದರ್ಶಿ ವಿವೇಕ್‌ ವಿನ್ಸೆಂಟ್‌ ಪಾçಸ್‌, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಸಿಇಒ ಹರೀಶ್‌, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್‌ ಕೋಟ್ಯಾನ್‌, ಕಾರ್ಯದರ್ಶಿ ಪ್ರಶಾಂತ್‌ ಪಾರೆಂಕಿ, ರತ್ನರಾಜ ಹೆಗ್ಡೆ, ರಾಮಕೃಷ್ಣ ಗೌಡ, ಡಾ| ದೇವಿಪ್ರಸಾದ್‌ ಬೊಳ್ಮ ಇತರರು ಉಪಸ್ಥಿತರಿದ್ದರು.

ತುಳು ನಾಡಿನ ಶೈಲಿಯಲ್ಲಿ ಉದ್ಘಾಟನೆ
ಈ ಬಾರಿಯ ವಸ್ತು ಪ್ರದರ್ಶನ ಮಳಿಗೆಯನ್ನು ವಿಶೇಷವಾಗಿ (ತುಳುವಿನ ಪದ -ತಡಮೆ) ಬಿದುರಿನಂದ ಮಾಡಿದ ಸರಂಗೋಲನ್ನು ಸರಿಸುವ ಮೂಲಕ ಹಾಗೂ (ಕೊಲು¤ರಿ) ಬಟ್ಟೆ ಹಾಗೂ ಸಲಕೆಯಿಂದ ತಯಾರಿಸಿದ ದೀಪವನ್ನು ಹಚ್ಚುವ ಮೂಲಕ ವಸ್ತು ಪ್ರದರ್ಶನ ಉದ್ಘಾಟಿಸಿಲಾಯಿತು. ಸರಕಾರಿ, ಆಹಾರ, ವಾಹನ, ಕೃಷಿ ಉಪಕರಣ, ಕರಕುಶಲ, ಸೋಲಾರ್‌, ದೇಸಿದನದ ಉತ್ಪನ್ನ, ಐಸ್‌ ಕ್ರೀಂ, ಪಾನೀಯ, ಹೋಟೆಲ್‌ ಬ್ಯಾಂಕ್‌ ಸಹಿತ ಕೃಷಿ ಪರಿಕರ ಹೊಂದಿರುವ ವಿವಿಧ 196 ವಸ್ತು ಪ್ರದರ್ಶನ ಮಳಿಗೆ ಸೇರಿವೆ. ಡಾ| ಹೆಗ್ಗಡೆ ಮಳಿಗೆ ವೀಕ್ಷಿಸಿ, ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.