ಫೈಲ್ ವಿಚಾರವಾಗಿ ವಾಗ್ವಾದ : ವಿಎ ಮೇಲೆ ಆರ್‌ಐ ಹಲ್ಲೆ; ಗ್ರಾಮಲೆಕ್ಕಿಗರ ಪ್ರತಿಭಟನೆ  


Team Udayavani, Nov 19, 2022, 8:39 PM IST

1-asdasdas

ಕುಣಿಗಲ್ : ನ್ಯಾಯಾಲಯದ ದಾಖಲೆ ಫೈಲ್ ಸಂಬಂಧ ಇಬ್ಬರು ಅಧಿಕಾರಿಗಳ  ನಡುವೆ ವಾಗ್ವಾದ ನಡೆದು, ಕುಪಿತಗೊಂಡ  ರಾಜಸ್ವ ನಿರೀಕ್ಷಕ ಗ್ರಾಮ ಲೆಕ್ಕಿಗನ ಮೇಲೆ ಹಲ್ಲೆ ನಡೆಸಿದ್ದು ಇದನ್ನು ಖಂಡಿಸಿ ಗ್ರಾಮಲೆಕ್ಕಿಗರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.

ಎಡಿಯೂರು ರಾಜಸ್ವ ನಿರೀಕ್ಷಕ ಚಂದ್ರಯ್ಯ, ಗ್ರಾಮಲೆಕ್ಕಿಗ ಆರ್.ಯಶವಂತ್ ಮೇಲೆ ಹಲ್ಲೆ ನಡೆಸಿದ್ದಾರೆ, ತಹಶೀಲ್ದಾರ್ ಅವರು  ಸೂಕ್ತ ಕ್ರಮಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ, ತಾಲೂಕು ಘಟಕ ಪದಾಧಿಕಾರಿಗಳು ಇಲ್ಲಿನ ತಾಲೂಕು ಕಚೇರಿಯ ಮೆಟ್ಟಿಲ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಬಂದ ಶಿರಸ್ತೇದಾರರ ಮನವರಿಕೆಯಿಂದ ತಕ್ಷಣ ಪ್ರತಿಭಟನೆಯನ್ನು ವಾಪಸ್ ಪಡೆಯುವ ಮೂಲಕ ಹೈಡ್ರಾಮ ನಡೆಯಿತು.

ತಾಲೂಕು ಕಚೇರಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ದಾಖಲೆ ಮಾಡಿಕೊಡಬೇಕಾಗಿರುವ ಅಧಿಕಾರಿಗಳೇ ಫೈಲ್ ವಿಚಾರವಾಗಿ ಇಬ್ಬರು ಅಧಿಕಾರಿಗಳು ಬೈದಾಡಿಕೊಂಡು, ರಾಜಸ್ವ ನಿರೀಕ್ಷಕ ತಮ್ಮ ಕೈ ಕೆಳಗಿನ ಅಧಿಕಾರಿ ಗ್ರಾಮ ಲೆಕ್ಕಿಗನ ಮೇಲೆ ಹಲ್ಲೆ ನಡೆಸಿರುವುದು, ನಾಗರಿಕರ ಚರ್ಚೆಗೆ ಗ್ರಾಸವಾಗಿದೆ.

ತಹಶೀಲ್ದಾರ್‌ಗೆ ದೂರು
ತಾಲೂಕು ಕಚೇರಿಯಲ್ಲಿ ಕರ್ತವ್ಯನಿರತ ಗ್ರಾಮಲೆಕ್ಕಿಗ ಆರ್, ಯಶವಂತ್ ಅವರ ಮೇಲೆ ಎಡಿಯೂರು ಹೋಬಳಿ ರಾಜಸ್ವ ನಿರೀಕ್ಷಕ ಚಂದ್ರಯ್ಯ ಗ್ರಾಮ ಲೆಕ್ಕಿಗನನ್ನು ಅವಾಚ್ಯವಾದ ಶಬ್ದಗಳಿಂದ ನಿಂಧಿಸಿ ದೈಹಿಕವಾಗಿ ಹಲ್ಲೆ ಮಾಡಿರುತ್ತಾರೆ, ತಮ್ಮ ಅಧೀನ ನೌಕರರ ಮೇಲೆ ಹಲ್ಲೆ ಮಾಡಿರುವ ಘಟನೆಯಿಂದ ಹಲ್ಲೆಗೆ ಒಳಗಾದ ನೌಕರರನ ಮತ್ತು ತಾಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿದ್ದು ಸಾಮಾಜಿಕ ನ್ಯಾಯಕ್ಕಾಗಿ ಈ ಅಮಾನವೀಯ ಘಟನೆ ವಿರುದ್ದ ಈ ಕೂಡಲೇ ಹಲ್ಲೆ ಮಾಡಿರುವ ಚಂದ್ರಯ್ಯ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಂಡು ನೊಂದ ಗ್ರಾಮ ಲೆಕ್ಕಾಧಿಕಾರಿಗೆ ನ್ಯಾಯ ಒದಗಿಸಿ ಕೊಡುವ ಜತೆಗೆ ಮುಂದಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮಕೈಗೊಂಡು ಗ್ರಾಮಲೆಕ್ಕಾಧಿಕಾರಿಗಳು ಮುಕ್ತವಾಗಿ ಕರ್ತವ್ಯ ನಿರ್ವಹಿಸಲು ಅನುಮಾಡಿಕೊಡಬೇಕೆಂದು ತಹಶೀಲ್ದಾರ್‌ಗೆ ಅವರಿಗೆ ನೀಡಿರುವ ದೂರಿನಲ್ಲಿ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ, ತಾಲೂಕು ಘಟಕದ ಅಧ್ಯಕ್ಷ ವಿಜಯಕುಮಾರ್ ಮನವಿ ಮಾಡಿದ್ದಾರೆ.

ಕಾರಣ ಕೇಳಿ ನೋಟಿಸ್
ಘಟನೆ ಸಂಬಂಧಿಸಿದಂತೆ ಉದಯವಾಣಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಹಶೀಲ್ದಾರ್ ಮಹಬಲೇಶ್ವರ ಯಾವ ವಿಚಾರವಾಗಿ ಗಲಾಟೆ ನಡೆದಿದೆ ಎಂಬುದು ವಿಚಾರ ತಿಳಿದಿಲ್ಲ, ಆದರೆ ಇಬ್ಬರು ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡಿರುವೆ, ಇಬ್ಬರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.