ಕೋಮಲ್ ಈಸ್ ಬ್ಯಾಕ್: ‘ಕಾಲಾಯ ನಮಃ’ ಎಂದ ನಟ


Team Udayavani, Nov 21, 2022, 11:16 AM IST

komal kumar in kalaya tasmai namah film

ಎಲ್ಲರಿಗೂ ಗೊತ್ತಿರುವಂತೆ, ನಟ ಕೋಮಲ್‌ ತಮ್ಮ ಕಾಮಿಡಿ ನಟನೆಯ ಮೂಲಕವೇ ಚಿತ್ರರಂಗದಲ್ಲಿ ಪ್ರೇಕ್ಷಕರಿಗೆ ಪ್ರಿಯವಾದವರು. ಬಳಿಕ ಕಾಮಿಡಿ ಸಿನಿಮಾಗಳ ಮೂಲಕವೇ ನಾಯಕ ನಟನ ಸ್ಥಾನವನ್ನೂ ಗಿಟ್ಟಿಸಿಕೊಂಡವರು. ನಂತರ ಕೋಮಲ್‌ ನಿಧಾನವಾಗಿ ಕಾಮಿಡಿ ಸಿನಿಮಾಗಳಿಂದ ವಿಮುಖರಾಗಿ ಬೇರೆ ಥರದ ಪಾತ್ರಗಳತ್ತ ತಮ್ಮನ್ನು ತೆರೆದುಕೊಳ್ಳಲು ಮುಂದಾದರು. ಈಗ ಮತ್ತೆ ತಮ್ಮ ಹಿಂದಿನ ಶೈಲಿಗೆ ಮರಳಲು ಮಂದಾಗಿರುವ ಕೋಮಲ್‌, ಮತ್ತೂಂದು ಕಾಮಿಡಿ ಕಂ ಸಸ್ಪೆನ್ಸ್‌ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿದ್ದಾರೆ. ಈ ಬಾರಿ ನಟನೆ ಜೊತೆಗೆ ನಿರ್ಮಾಣ ಕೂಡಾ ಇವರರದ್ದೇ. ಕೋಮಲ್‌ ಕನಸಿನ “ಕಾಲಾಯ ನಮಃ’ ಎಂಬ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ.

ತಮ್ಮ ಕಂಬ್ಯಾಕ್‌ ಬಗ್ಗೆ ಮಾತನಾಡುವ ಕೋಮಲ್‌, “ಮನುಷ್ಯನ ಜೀವನದಲ್ಲಿ ಗ್ರಹಗಳ ಪ್ರಭಾವ ಅಪಾರ. ನನ್ನ ಜೀವನದಲ್ಲೂ ಹಾಗೆ. ನಮ್ಮ ಅಣ್ಣ ಜಗ್ಗೇಶ್‌ ಅವರು, ಕೆಲವು ವರ್ಷಗಳ ಹಿಂದೆ ನನ್ನ ಜಾತಕ ನೋಡಿ, ನಿನಗೆ ಈಗ ಕೇತು ದೆಸೆ ನಡೆಯುತ್ತಿದೆ. ಹಾಗಾಗಿ ಸ್ವಲ್ಪ ಹುಷಾರಾಗಿರು ಅಂದಿದ್ದರು. ಹಾಗಾಗಿ ಐದು ವರ್ಷದಿಂದ ನಾನು ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ. ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ಮಾಡುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. “ಕಾಲಾಯ ನಮಃ’ ಶುರುವಾಗಿದೆ. ಕಾಲಭೈರವ ದೇವರ ಭಕ್ತನಾದ ನನ್ನ ಸಿನಿಮಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀಯ. ಕಾಲ ನಿಲ್ಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿಮಾ ಸಾಗುತ್ತದೆ. ನನ್ನ ಪತ್ನಿ ಅನಸೂಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮತಿವಣನ್‌ ನಿರ್ದೇಶಿಸುತ್ತಿದ್ದಾರೆ. ನನ್ನ ಅಣ್ಣ ಜಗ್ಗೇಶ್‌ ಅವರ ಸಹಕಾರವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್‌, ತಿಲಕ್‌ ಹಾಗೂ ನನ್ನ ಅಣ್ಣ ಜಗ್ಗೇಶ್‌ ಅವರ ಪುತ್ರ ಯತಿರಾಜ್‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾನು ನಟಿಸಿರುವ “2020′ ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರುತ್ತಿದೆ’ ಎಂದು ವಿವರಣೆ ನೀಡಿದರು.

ಇತ್ತೀಚೆಗೆ ನಡೆದ ಮುಹೂರ್ತ ಸಮಾರಂಭದಲ್ಲಿ ಹಾಜರಿದ್ದ ಜಗ್ಗೇಶ್‌, “ಜ್ಯೋತಿಷ್ಯ ಯಾರು ನಂಬುತ್ತಾರೊ, ಬಿಡುತ್ತಾರೊ ನನಗ ಗೊತ್ತಿಲ್ಲ. ಆದರೆ ನನಗೆ ನಂಬಿಕೆಯಿದೆ. ಕೋಮಲ್‌ ಗೆ ಕೇತುದೆಸೆ ಇದೆ. 2022ರವರೆಗೂ ಏನು ಮಾಡಬೇಡ ಅಂದಿದ್ದೆ. ಆತ ನನ್ನ ಮಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದಯೆಯಿಂದ ಈ ಚಿತ್ರ ಆರಂಭಿಸಿದ್ದಾನೆ. ನನ್ನ ಮಗ ಯತಿರಾಜ್‌ ಕೂಡ ಇದರಲ್ಲಿ ಅಭಿನಯಿಸುತ್ತಿದ್ದಾನೆ. ಈ ತಂಡದಿಂದ ಒಳ್ಳೆಯ ಸಿನಿಮಾ ಬರುವ ವಿಶ್ವಾಸವಿದೆ. ಒಳ್ಳೆಯದಾಗಲಿ ಎಂದರು ಜಗ್ಗೇಶ್‌. ಕಾಲಾಯ ನಮಃ ಒಳ್ಳೆಯ ಕಥೆಯುಳ್ಳ ಚಿತ್ರ. ಕೋಮಲ್‌ ಅವರ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದು ನಿರ್ದೇಶಕ ಮತಿವಣನ್‌ ತಿಳಿಸಿದರು.

ನಿರ್ಮಾಪಕಿ ಅನಸೂಯ ಕೋಮಲ್‌ ಕುಮಾರ್‌ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.