ಬುಡಕಟ್ಟು ಧಿರಿಸು ಹಾಕಿಕೊಂಡ ನನ್ನನ್ನು ಕಾಂಗ್ರೆಸ್ ಲೇವಡಿ ಮಾಡಿತು: ಪ್ರಧಾನಿ ಕಿಡಿ

ಬುಡಕಟ್ಟು ಜನರು ದೇಶದ ಮೊದಲ ಮಾಲೀಕರು ಎಂದ ರಾಹುಲ್ ಗಾಂಧಿ

Team Udayavani, Nov 21, 2022, 5:12 PM IST

1-sdsadasd

ಭರೂಚ್ : ಶ್ರೀರಾಮ ಮತ್ತು ಕೃಷ್ಣನ ಕಾಲದಿಂದಲೂ ಬುಡಕಟ್ಟು ಜನಾಂಗದವರು ದೇಶದಲ್ಲಿ ವಾಸಿಸುತ್ತಿದ್ದರೂ ಕಾಂಗ್ರೆಸ್ ನಾಯಕರು ಬಹಳ ಸಮಯದಿಂದ ಬುಡಕಟ್ಟು ಜನಾಂಗದವರನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನ ಬುಡಕಟ್ಟು ಪ್ರಾಬಲ್ಯದ ಭರೂಚ್ ಜಿಲ್ಲೆಯ ಜಂಬೂಸರ್ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವ ಪ್ರಧಾನಿ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕರು ತಮ್ಮನ್ನು ಅಪಹಾಸ್ಯ ಮಾಡಿದ್ದಾರೆ ಎಂದರು.

“ಬಹಳ ಕಾಲದಿಂದ ಕಾಂಗ್ರೆಸ್ ನಾಯಕರಿಗೆ ಭಾರತದಲ್ಲಿ ಆದಿವಾಸಿಗಳ ಅಸ್ತಿತ್ವದ ಬಗ್ಗೆ ತಿಳಿದಿರಲಿಲ್ಲ. ಶ್ರೀರಾಮ ಮತ್ತು ಕೃಷ್ಣನ ಕಾಲದಿಂದಲೂ ಅವರು ಇಲ್ಲಿ ವಾಸಿಸುತ್ತಿರಲಿಲ್ಲವೇ?.. ಅವರು 1857ರ ದಂಗೆಯ ಭಾಗವಾಗಿರಲಿಲ್ಲವೇ? ಆದಿವಾಸಿಗಳು ಈ ದೇಶಕ್ಕಾಗಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಆದರೆ, ಆದಿವಾಸಿಗಳು ಇದ್ದಾರೆ ಎಂಬುದು ಕಾಂಗ್ರೆಸ್ ನಾಯಕರಿಗೆ ತಿಳಿದಿರಲೇ ಇಲ್ಲ. “ಇಲ್ಲದಿದ್ದರೆ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗುವವರೆಗೂ ಆದಿವಾಸಿಗಳಿಗೆ ಪ್ರತ್ಯೇಕ ಸಚಿವಾಲಯ ಏಕೆ ಇರಲಿಲ್ಲ? ಕೇಂದ್ರದಲ್ಲಿ ಅಟಲ್ಜಿಯವರ ಸರ್ಕಾರವೇ ಪ್ರತ್ಯೇಕ ಸಚಿವಾಲಯವನ್ನು ರಚಿಸಿತು ಮತ್ತು ಅವರ ಕಲ್ಯಾಣಕ್ಕಾಗಿ ಬಜೆಟ್ ಅನ್ನು ನಿಗದಿಪಡಿಸಿತು. ಇಂದಿಗೂ ಕಾಂಗ್ರೆಸ್ ನಾಯಕರು ಬುಡಕಟ್ಟು ಜನಾಂಗದವರ ಉಡುಗೆ ತೊಟ್ಟಿದ್ದಕ್ಕೆ ನನ್ನನ್ನು ಗೇಲಿ ಮಾಡುತ್ತಿದ್ದಾರೆ”ಎಂದರು.

ನವೆಂಬರ್ 19 ರಿಂದ ತಮ್ಮ ತವರು ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಪ್ರಧಾನಿ, ಆದಿವಾಸಿಗಳು ಕಾಂಗ್ರೆಸ್ ತಮ್ಮ ಸ್ಥಿತಿಯನ್ನು ಸುಧಾರಿಸುತ್ತದೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ. ಏಕೆಂದರೆ ಕಾಂಗ್ರೆಸ್ ನಾಯಕರು ಬುಡಕಟ್ಟು ಸಂಘಟನೆಗಳನ್ನು ಅಪಹಾಸ್ಯ ಮಾಡುತ್ತಾರೆ ಮತ್ತು ನಿಯಮಿತ ಮಧ್ಯಂತರದಲ್ಲಿ ಆದಿವಾಸಿಗಳನ್ನು ಅವಮಾನಿಸುತ್ತಾರೆ ಎಂದು ಕಿಡಿ ಕಾರಿದರು.

ಗುಜರಾತಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ ಮತ್ತು ಉದ್ಯೋಗದಂತಹ ಇತರ ಸಮಸ್ಯೆಗಳನ್ನು ಪರಿಹರಿಸಿತು ಎಂದರು.

ಸೂರತ್ ನಲ್ಲಿ ರಾಹುಲ್ ಗಾಂಧಿ ಪ್ರಚಾರ
ಸೋಮವಾರ ಗುಜರಾತ್‌ನಲ್ಲಿ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೂರತ್ ಜಿಲ್ಲೆಯ ಮಹುವಾದಲ್ಲಿ ಬುಡಕಟ್ಟು ಜನಾಂಗದವರ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಬುಡಕಟ್ಟು ಜನರು ದೇಶದ “ಮೊದಲ ಮಾಲೀಕರು” ಆದರೆ ಬಿಜೆಪಿ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ. ಒಂದು ದಿನದ ಹಿಂದೆ, ಬುಡಕಟ್ಟು ಜನಾಂಗದವರನ್ನು ಸಬಲೀಕರಣಗೊಳಿಸಲು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ರೂಪಿಸಿದ ಕಾನೂನುಗಳನ್ನು ನರೇಂದ್ರ ಮೋದಿ ಸರ್ಕಾರ ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದರು ಮತ್ತು ತಮ್ಮ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದ ನಂತರ ಅವರನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.