ಬೈಕ್ ತಪ್ಪಿಸಲು ಹೋಗಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ; ಹಲವು ಪೊಲೀಸರಿಗೆ ಗಾಯ
Team Udayavani, Nov 22, 2022, 2:56 PM IST
ಚಿತ್ರದುರ್ಗ: ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಪಲ್ಟಿಯಾದ ಘಟನೆ ಹಿರಿಯೂರು ನಗರದಲ್ಲಿ ನಡೆದಿದೆ.
ಹಿರಿಯೂರು ತಾಲೂಕು ಕಚೇರಿ ಬಳಿ ದುರ್ಘಟನೆ ನಡೆದಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ. ವಾಹನ ತಾಗಿ ಪಾದಾಚಾರಿಗಳಿಬ್ಬರೂ ಗಾಯಗೊಂಡಿದ್ದಾರೆ.
ವಾಣಿವಿಲಾಸ ಡ್ಯಾಂನಿಂದ ಹಿರಿಯೂರು ಪಟ್ಟಣದ ನೆಹರು ಮೈದಾನಕ್ಕೆ ಬರುವ ವೇಳೆ ಘಟನೆ ನಡೆದಿದೆ. ಮುಂದಿನಿಂದ ಅಡ್ಡ ಬಂದ ಬೈಕ್ ತಪ್ಪಿಸಲು ಬ್ರೇಕ್ ಹಾಕಿದ ಕಾರಣದಿಂದ ಸಿಇಎನ್ ಸಿಪಿಐ ರಮಾಕಾಂತ್ ಇದ್ದ ಪೊಲೀಸ್ ವಾಹನ ಪಲ್ಟಿಯಾಗಿದೆ. ಓರ್ವ ಮಹಿಳಾ ಪೇದೆ, ಮೂವರು ಕಾನ್ಸ್ಟೇಬಲ್, ಸಿಪಿಐ ರಮಾಕಾಂತ್, ಪಿಎಸ್ಐ ಸೇರಿ ಹಲವರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಿಎಂ ಬೊಮ್ಮಾಯಿ
ಪಲ್ಲಿಯಾಗುವ ವೇಳೆ ಎಸ್ಕಾರ್ಟ್ ವಾಹನವು ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಹೊಡೆದಿದೆ. ಇದರಿಂದ ಪಾದಾಚಾರಿಗಳಾದ ಮಸ್ಕಲ್ ಗ್ರಾಮದ ಮಂಜುಳ, ಪುತ್ರ ಮನೋಜ್ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUDA CASE: ರಾಜಕೀಯ ಸುದ್ದಿಗಾಗಿ ಇ.ಡಿ. ಯತ್ನ : ಹರಿಪ್ರಸಾದ್ ಆರೋಪ
ಪ್ರೀತಿಸುವಂತೆ ಸಹಪಾಠಿಯ ಒತ್ತಡ: ಕಾಲೇಜಿನ 3ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.