ಆಸ್ಟ್ರೇಲಿಯಾದಲ್ಲಿ ಕೊಲೆ ಮಾಡಿ ತಪ್ಪಿಸಿಕೊಂಡಿದ್ದಾತ 4 ವರ್ಷದ ಬಳಿಕ ದೆಹಲಿಯಲ್ಲಿ ಬಂಧನ
Team Udayavani, Nov 25, 2022, 1:02 PM IST
ಹೊಸದಿಲ್ಲಿ: ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ 2018ರಲ್ಲಿ ಮಹಿಳೆಯೊಬ್ಬರನ್ನು ಕೊಲೆ ಮಾಡಿದ್ದ ಆರೋಪದಡಿ ಭಾರತೀಯ ನರ್ಸೊಬ್ಬರನ್ನು ಹೊಸದಿಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
38 ವರ್ಷದ ರಾಜವಿಂದರ್ ಸಿಂಗ್ ಅವರೇ ಬಂಧಿತ ವ್ಯಕ್ತಿ. 2018ರಲ್ಲಿ ಕ್ವೀನ್ಸ್ ಲ್ಯಾಂಡ್ ಬೀಚ್ ನಲ್ಲಿ 24 ವರ್ಷದ ಆಸ್ಟ್ರೇಲಿಯನ್ ಪ್ರಜೆ ತೊಯಾ ಕಾರ್ಡಿಂಗ್ಲೆ ಎಂಬವರನ್ನು ಹತ್ಯೆಗೈದ ಆರೋಪ ಎದುರಿಸುತ್ತಿದ್ದಾರೆ. ನಂತರ ಭಾರತಕ್ಕೆ ಪರಾರಿಯಾಗಿದ್ದರು.
ಫಾರ್ಮಸಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಡಿಂಗ್ಲೆ ಕ್ವೀನ್ಸ್ಲ್ಯಾಂಡ್ ನ ವಾಂಗೆಟ್ಟಿ ಬೀಚ್ ನಲ್ಲಿ ತನ್ನ ನಾಯಿಯನ್ನು ವಾಕಿಂಗ್ ಮಾಡುತ್ತಿದ್ದಾಗ ಕೊಲ್ಲಲ್ಪಟ್ಟಿದ್ದಳು. ಎರಡು ದಿನಗಳ ನಂತರ ರಾಜವಿಂದರ್ ಸಿಂಗ್ ತನ್ನ ಕೆಲಸ, ಹೆಂಡತಿ ಮತ್ತು ಮೂವರು ಮಕ್ಕಳನ್ನು ಬಿಟ್ಟು ಆಸ್ಟ್ರೇಲಿಯಾದಿಂದ ಪರಾರಿಯಾಗಿದ್ದ.
ಆರೋಪಿ ಸಿಂಗ್ ಬಂಧನಕ್ಕೆ ಕಾರಣವಾದ ಮಾಹಿತಿಗಾಗಿ ಕ್ವೀನ್ಸ್ಲ್ಯಾಂಡ್ ಪೊಲೀಸರು ಒಂದು ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ ಬಹುಮಾನವನ್ನು ನೀಡಿದ್ದರು. ಇದು ಇಲಾಖೆಯಿಂದ ಇದುವರೆಗೆ ನೀಡಲ್ಪಟ್ಟ ಅತಿದೊಡ್ಡ ಮೊತ್ತವಾಗಿದೆ.
ಮಾರ್ಚ್ 2021 ರಲ್ಲಿ ಆಸ್ಟ್ರೇಲಿಯಾ ಸರ್ಕಾರವು ಸಿಂಗ್ ನನ್ನು ಹಸ್ತಾಂತರಿಸುವಂತೆ ಭಾರತಕ್ಕೆ ಮನವಿ ಮಾಡಿತ್ತು. ಈ ವರ್ಷದ ನವೆಂಬರ್ನಲ್ಲಿ ವಿನಂತಿಯನ್ನು ಅನುಮೋದಿಸಲಾಗಿದೆ.
ಇದನ್ನೂ ಓದಿ:ಕುರುಗೋಡು: ಮಂಗನ ಕಡಿತಕ್ಕೆ ಗಂಭೀರ ಗಾಯಗೊಂಡ ಸಾರ್ವಜನಿಕರು, ವಿದ್ಯಾರ್ಥಿಗಳು
ಮೂಲತಃ ಪಂಜಾಬ್ನ ಬಟರ್ ಕಲಾನ್ ನ ರಾಜವಿಂದರ್ ಸಿಂಗ್ ಆಸ್ಟ್ರೇಲಿಯಾದ ಇನ್ನಿಸ್ ಫೈಲ್ ಟೌನ್ ನಲ್ಲಿ ವಾಸಿಸುತ್ತಿದ್ದ, ಅಲ್ಲಿ ಅವರು ನರ್ಸಿಂಗ್ ಸಹಾಯಕರಾಗಿ ಕೆಲಸ ಮಾಡುತ್ತಿದ್ದ.
2018ರ ಅಕ್ಟೋಬರ್ 21 ರಂದು ಕಾರ್ಡಿಂಗ್ಲೆ ಕಾಣೆಯಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಅದರ ಮರುದಿನ ಬೆಳಗ್ಗೆ ಆಕೆಯ ದೇಹವು ಕೇರ್ನ್ಸ್ ನ ಉತ್ತರದಲ್ಲಿರುವ ವಾಂಗೆಟ್ಟಿ ಬೀಚ್ ನಲ್ಲಿ ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.