ಸಿಇಟಿ ಅರ್ಜಿ ತುಂಬುವಲ್ಲಿನ ಲೋಪ: ಪದವಿಪೂರ್ವ ಕಾಲೇಜುಗಳಲ್ಲಿ ಸಹಾಯ ಕೇಂದ್ರ

ಉನ್ನತ ಶಿಕ್ಷಣ ಮತ್ತು ಶಾಲಾ ಶಿಕ್ಷಣ ಸಚಿವರ ಜಂಟಿ ಸಭೆ

Team Udayavani, Nov 25, 2022, 6:36 PM IST

1-dadasd

ಬೆಂಗಳೂರು: ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಸಂಬಂಧವಾಗಿ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಜತೆ ಸಚಿವರು ಶುಕ್ರವಾರ ಮಹತ್ವದ ಸಭೆ ನಡೆಸಿದರು.ನಂತರ ಮಾತನಾಡಿದ ಅಶ್ವತ್ಥನಾರಾಯಣ ಅವರು,ಎಸ್ಸೆಸ್ಸೆಲ್ಸಿ‌ ಹಂತದಲ್ಲಿನ ವಿದ್ಯಾರ್ಥಿ ಸಾಧನೆ ಟ್ರಾಕಿಂಗ್ ವ್ಯವಸ್ಥೆ (ಎಸ್ಎಟಿಎಸ್)ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಜತೆ ಸಂಯೋಜನೆಗೊಳಿಸುವ ಸಂಬಂಧ ಚರ್ಚಿಸಲಾಯಿತು. ಕೆಇಎ ಕೂಡ ಯಾವ ರೀತಿಯ ಮಾಹಿತಿ ಅಗತ್ಯ ಇದೆ ಎನ್ನುವುದನ್ನು ತಿಳಿಸಲಿದ್ದಾರೆ. ಎರಡೂ ಇಲಾಖೆಗಳ ಸಮನ್ವಯದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.

“ಈಗ ಸಾಕಷ್ಟು ವಿದ್ಯಾರ್ಥಿಗಳು ಸಿಇಟಿ ಅರ್ಜಿಯಲ್ಲಿ ಆರ್.ಡಿ. ಸಂಖ್ಯೆ, ತಂದೆಯ ಹೆಸರು, ಜಾತಿಯ ಹೆಸರು ಇತ್ಯಾದಿಗಳನ್ನು ತಪ್ಪಾಗಿ ದಾಖಲಿಸುತ್ತಿದ್ದಾರೆ. ಇದನ್ನೆಲ್ಲ ಸರಿಪಡಿಸಲು ಏಳೆಂಟು ಬಾರಿ ಅವಕಾಶ ಕೊಡುತ್ತಿದ್ದು, ಇದರಿಂದ ಸಮಯ ವ್ಯರ್ಥವಾಗುತ್ತಿರುವುದರ ಜತೆಗೆ ಉಳಿದ ಪ್ರಕ್ರಿಯೆಗಳು ವಿಳಂಬ ಆಗುತ್ತಿವೆ. ಹೀಗಾಗಿ ಪಿಯುಸಿಯಲ್ಲಿ ಇರುವಾಗಲೇ ಸಿಇಟಿ ಅರ್ಜಿ ತುಂಬಲು ಕಲಿಸುವ ವಿದ್ಯಾರ್ಥಿಸ್ನೇಹಿ ವ್ಯವಸ್ಥೆ ರೂಪಿಸಲಾಗುವುದು” ಎಂದರು.

ಇದಕ್ಕಾಗಿ ಪ್ರತಿ ಕಾಲೇಜಿನಲ್ಲೂ ತಲಾ 100 ವಿದ್ಯಾರ್ಥಿಗಳಿಗೆ ಒಬ್ಬ ಪುರುಷ ಮತ್ತು ಓರ್ವ ಮಹಿಳಾ ಉಪನ್ಯಾಸಕರನ್ನ ಸಂಯೋಜಕರನ್ನಾಗಿ ನೇಮಿಸಲಾಗುವುದು. ಇದರ ಜತೆಗೆ ಒಂದು ಜಿಲ್ಲೆಗೆ ತಲಾ ನಾಲ್ವರು ಮಾಸ್ಟರ್ ಟ್ರೈನರ್ ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಸಂಯೋಜಕರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತರಬೇತಿ ಕೊಡಲಾಗುವುದು. ಹಾಗೆಯೇ ಮಾಸ್ಟರ್ ಟ್ರೈನರ್ ಗಳಿಗೆ ಪ್ರಾಧಿಕಾರದಿಂದ ಪ್ರತ್ಯೇಕವಾಗಿ ತರಬೇತಿ ನೀಡಲಾಗುವುದು ಎಂದು ವಿವರಿಸಿದರು.

ಈ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳಿಗೆ ನಾಲ್ಕು ಹಂತದಲ್ಲಿ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲಾಗುವುದು. ಮೊದಲು ಅಗತ್ಯ ಮಾಹಿತಿ ನೀಡುವಿಕೆ, ಎರಡನೇ ಹಂತದಲ್ಲಿ ಮೀಸಲಾತಿ, ಇದಕ್ಕೆ ಅನ್ವಯವಾಗುವ ಆರ್.ಡಿ. ಸಂಖ್ಯೆ, ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಅರಿವು ಮೂಡಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಮೀಸಲಾತಿ ಪ್ರಮಾಣ ಪತ್ರಗಳು, ವಿದ್ಯಾರ್ಥಿ ಮತ್ತು ತಂದೆಯ ಹೆಸರುಗಳು ಸರಿಯಾಗಿ ಇರುವ ಬಗ್ಗೆ ಮಾಹಿತಿ ಕೊಡಲಾಗುವುದು ಎಂದು ವಿವರಿಸಿದರು.

ಜನವರಿಯಲ್ಲಿ ಅರ್ಜಿ ತುಂಬಲು ಅವಕಾಶ, ಫೆಬ್ರವರಿಯಲ್ಲಿ ಸೀಟು ಹಂಚಿಕೆ, ದಾಖಲಾತಿ ಪರಿಶೀಲನೆ ಮತ್ತು ಇತರ ಪ್ರಕ್ರಿಯೆ ಬಗ್ಗೆ ಮನದಟ್ಟು ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಈಗ ಇರುವ ಎಸ್ಎಟಿ ವ್ಯವಸ್ಥೆಯಲ್ಲಿ ಲಭ್ಯವಾಗುವ ವಿದ್ಯಾರ್ಥಿ ಸಂಬಂಧಿತ ಮಾಹಿತಿ ಅಥವಾ ವಿವರಗಳನ್ನು ಸಿಇಟಿ ಅರ್ಜಿಯಲ್ಲಿ ವಿಲೀನಗೊಳಿಸಲು ಚಿಂತಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ, ಆಡಳಿತಾಧಿಕಾರಿ ಶಿವಕುಮಾರ್ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.