![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 29, 2022, 7:43 AM IST
ಬಂಟ್ವಾಳ: ಸಿದ್ದಕಟ್ಟೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಗೆ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ಪೋಷಕರಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಕಳೆದ ಆಗಸ್ಟ್ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್ಐ ವಿಜಯ್ ಅವರು ನೋಟಿಸ್ ಜಾರಿ ಮಾಡಿದ್ದರು. ಪ್ರಸ್ತುತ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶ ನೀಡಿದೆ.
You seem to have an Ad Blocker on.
To continue reading, please turn it off or whitelist Udayavani.