ನಿಷೇಧವಿದ್ದರೂ ಅನುಮಾನಕ್ಕೆ ಎಡೆ ಮಾಡಿದ ಸ್ಯಾಟಲೈಟ್‌ ಫೋನ್‌ ಬಳಕೆ!


Team Udayavani, Nov 29, 2022, 9:57 AM IST

ನಿಷೇಧವಿದ್ದರೂ ಅನುಮಾನಕ್ಕೆ ಎಡೆ ಮಾಡಿದ ಸ್ಯಾಟಲೈಟ್‌ ಫೋನ್‌ ಬಳಕೆ!

ಉಡುಪಿ : ಉಗ್ರ ಮಹಮ್ಮದ್‌ ಶಾರೀಕ್‌ ಪೊಲೀಸರ ಬಲೆಗೆ ಬೀಳುತ್ತಿದ್ದಂತೆ ಆತನ ಚಲನವಲನಗಳ ಮೇಲೆ ವಿಶೇಷ ನಿಗಾ ಇರಿಸಲಾಗಿದೆ. ಮೊಬೈಲ್‌ ಲೊಕೇಷನ್‌ ಆಧಾರದಲ್ಲಿ ಕರಾವಳಿಯಾದ್ಯಂತ ಆತ ಸಂಚರಿಸಿದ್ದ ಸ್ಥಳಗಳಲ್ಲಿ ಹೆಚ್ಚಿನ ತಪಾಸಣೆ ಮುಂದುವರಿದಿದೆ. ದೇಶದಲ್ಲಿ ಸ್ಯಾಟಲೈಟ್‌ ಫೋನ್‌ಗೆ ನಿಷೇಧ ಹೇರಿದ್ದರೂ ಕರಾವಳಿಯಲ್ಲಿ ಸದ್ದು ಕೇಳಿಬರುತ್ತಿರು ವುದು ಹಲವು ಅನುಮಾನ ಗಳಿಗೆ ಎಡೆ ಮಾಡಿದೆ.

ಕರೆ ಹೋಗಿದೆ ಎನ್ನಲಾಗುತ್ತಿರುವ ದ.ಕ. ಜಿಲ್ಲೆಯ ಬಂಟ್ವಾಳ ಬಳಿಯ ಕಕ್ಕಿಂಜೆ ಅರಣ್ಯ ಪ್ರದೇಶ, ಬೆಳ್ತಂಗಡಿ ಬೆಂದ್ರಾಳದ ಬಾರೆ, ಮಂದಾರ್ತಿ ದೇವಸ್ಥಾನದಿಂದ 2 ಕಿ.ಮೀ. ದೂರದಲ್ಲಿ ರುವ ಸದ್ಗುರು ಗೇರುಬೀಜ ಕಾರ್ಖಾನೆಯ ಬಳಿ ಆಂತರಿಕ ಭದ್ರತಾ ವಿಭಾಗ ಪರಿಶೀಲನೆ ನಡೆಸಿದೆ. ಆದರೆ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎನ್ನಲಾಗಿದೆ.

ನೌಕಾಯಾನದಲ್ಲಿ ಬಳಕೆ!
ಇರಿಡಿಯಂ, ಇನ್‌ಮರ್‌ಸ್ಯಾಟ್‌, ತುರಾಯ, ಗ್ಲೋಬರ್‌ ಸ್ಟಾರ್‌ ಹೆಸರಿನ ಸ್ಯಾಟಲೈಟ್‌ ಫೋನ್‌ಗಳು ವಿದೇಶದಲ್ಲಿ ಹೆಚ್ಚಾಗಿ ಬಳಕೆಯಲ್ಲಿವೆ. ಇದರ ಬಳಕೆ ಬಹು ದುಬಾರಿ. ನೌಕಾಯಾನದಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಆದರೆ ಭಾರತದ ಗಡಿಗೆ ಬಂದ ಬಳಿಕ ಬಳಸುವಂತಿಲ್ಲ. ಬಳಸಿದರೆ ಅದರ ಮಾಹಿತಿಗಳು ಆಂತರಿಕ ಭದ್ರತಾ ವಿಭಾಗಕ್ಕೆ ರವಾನೆಯಾಗುತ್ತವೆ.

ಕರಾವಳಿ ಕಾವಲು ಪಡೆಯಲ್ಲಿ ಬಳಕೆ ಇಲ್ಲ
ಕರಾವಳಿ ಕಾವಲು ಪಡೆಯ ಆಂತರಿಕ ಸಂವಹನಕ್ಕೆ ಅವರದ್ದೇ ಆದ ಸಾಫ್ಟ್ ವೇರ್‌ ಇದೆ. ಯಾವುದೇ ಕಾರಣಕ್ಕೂ ಸ್ಯಾಟಲೈಟ್‌ ಫೋನ್‌ಗಳನ್ನು ಬಳಕೆ ಮಾಡುವಂತಿಲ್ಲ. ನೌಕೆಗಳ ಆಗಮನ, ನಿರ್ಗಮನದ ವೇಳೆಯೂ ಈ ಬಗ್ಗೆ ಗಮನ ನೀಡಲಾಗುತ್ತದೆ. ಗಡಿಭಾಗದಲ್ಲಿ ಉಪಯೋಗಿಸಿದರೂ ಕ್ಷಣಾರ್ಧದಲ್ಲಿ ಆಂತರಿಕ ಭದ್ರತಾ ವಿಭಾಗದ ಮೂಲಕ ನಮಗೆ ಮಾಹಿತಿ ಲಭಿಸುತ್ತದೆ ಎನ್ನುತ್ತಾರೆ ಕರಾವಳಿ ಕಾವಲು ಪಡೆಯ ವರಿಷ್ಠಾಧಿಕಾರಿಗಳು.

ಕಾನೂನು ಬಾಹಿರ
ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ಕಾರಣಕ್ಕೆ ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯನ್ನು ಕೇಂದ್ರ ಸರಕಾರ ನಿಷೇಧಿಸಿದೆ. ಅದರಲ್ಲಿಯೂ ತುರಾಯ ಹಾಗೂ ಇರಿಡಿಯಂ ಸ್ಯಾಟಲೈಟ್‌ ಫೋನ್‌ಗಳ ಬಳಕೆ ಕಾನೂನು ಬಾಹಿರ ಎಂದು ಘೋಷಿಸಲಾಗಿದೆ. ಭಾರತಕ್ಕೆ ತರುವುದಕ್ಕೂ ನಿಷೇಧವಿದೆ. ತಂದವರನ್ನು ಬಂಧಿಸಲಾಗುತ್ತದೆ. ಇಷ್ಟೆಲ್ಲ ಇದ್ದರೂ ಕರಾವಳಿಯಲ್ಲಿ ಅವುಗಳ ಬಳಕೆ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಅಮೇರಿಕಾದ ಓಝಾರ್ಕ್ಸ್ ಸರೋವರದಲ್ಲಿ ಮುಳುಗಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.