ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ


Team Udayavani, Dec 1, 2022, 11:15 PM IST

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಮಂಗಳೂರು : ಸುಮಾರು 5 ದಶಕಗಳ ಕಾಲ ರಂಗಸ್ಥಳವನ್ನಾವರಿಸಿ ಯಕ್ಷಗಾನ ಕಲಾಪ್ರಕಾರವನ್ನು ಇನ್ನಷ್ಟು ಎತ್ತರಕ್ಕೇರಿಸಿದ ಮಹಾನ್‌ ಕಲಾವಿದ, ಕನ್ನಡ ಸಾಂಸ್ಕೃತಿಕ ಲೋಕದ ಮಹಾನ್‌ ಸಾಧಕ ಕುಂಬಳೆ ಸುಂದರ ರಾಯರು ಪಂಚಭೂತಗಳಲ್ಲಿ ಲೀನವಾದರು.

ಬುಧವಾರ ನಿಧನ ಹೊಂದಿದ ಸುಂದರ ರಾವ್‌ ಅವರ ಅಂತ್ಯಕ್ರಿಯೆಯು ಗುರುವಾರ ಬೆಳಗ್ಗೆ ಮಂಗಳೂರಿನ ನಂದಿಗುಡ್ಡೆ ರುದ್ರಭೂಮಿಯಲ್ಲಿ ಬಂಧುಗಳು, ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.

ಬೆಳಗ್ಗೆ 9.30ಕ್ಕೆ ಪಂಪ್‌ವೆಲ್‌ನಲ್ಲಿರುವ ನಿವಾಸದಿಂದ ಅಲಂಕೃತ ವಾಹನದಲ್ಲಿ ಪಾರ್ಥಿವ ಶರೀರವನ್ನು ನಂದಿಗುಡ್ಡೆ ರುದ್ರಭೂಮಿಗೆ ತರಲಾಯಿತು. ಅಲ್ಲಿ ಅಂತಿಮ ನಮನ ಸಲ್ಲಿಸಿದ ಬಳಿಕ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿ ಪುತ್ರರು ಚಿತೆಗೆ ಆಗ್ನಿಸ್ಪರ್ಶಗೈದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ರಾಜ್ಯಸಭಾ ಸದಸ್ಯ ನಾರಾಯಣ್‌, ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್‌, ಸಾಹಿತಿ-ರಂಗಕರ್ಮಿ ಡಾ| ನಾ.ದಾ. ಶೆಟ್ಟಿ, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ವಿಶ್ವಹಿಂದೂ ಪರಿಷತ್‌ ಮುಖಂಡರಾದ ಶರಣ್‌ ಪಂಪ್‌ವೆಲ್‌, ಶಿವಾನಂದ ಮೆಂಡನ್‌, ಸಂಸ್ಕಾರ ಭಾರತಿಯ ಚಂದ್ರಶೇಖರ ಶೆಟ್ಟಿ, ಮಾಜಿ ಮೇಯರ್‌ ದಿವಾಕರ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮನಪಾ ಸದಸ್ಯ ಸುಧೀರ್‌ ಶೆಟ್ಟಿ ಕಣ್ಣೂರು,ಸಂದೀಪ್‌ ಗರೋಡಿ, ಬಿಜೆಪಿ ಮುಖಂಡ ಜಗದೀಶ ಅಧಿಕಾರಿ,ದೇವಾಂಗ ಸಮಾಜದ ಅಧ್ಯಕ್ಷ ದುಗೇìಶ್‌ ಚೆಟ್ಟಿಯಾರ್‌ ಮೊದಲಾದವರು ಉಪಸ್ಥಿತರಿದ್ದರು.

ಗಣ್ಯರಿಂದ ನುಡಿನಮನ
ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ವೇದವ್ಯಾಸ ಕಾಮತ್‌, ವಿ.ಪ. ಮಾಜಿ ಸದಸ್ಯ ಮೋನಪ್ಪ ಭಂಡಾರಿ ನುಡಿನಮನ ಸಲ್ಲಿಸಿದರು.

ಸುಂದರ ರಾಯರು ವೇಷಧಾರಿ, ಅರ್ಥದಾರಿ, ವಾಗ್ಮಿ, ಸಂಘಟಕ, ರಾಜಕಾರಣಿ ಹೀಗೆ ತನ್ನ ವ್ಯಕ್ತಿತ್ವವನ್ನು ಹಲವು ಆಯಾಮಗಳಲ್ಲಿ ಅಭಿವ್ಯಕ್ತಿಗೊಳಿಸಿ ಸಾರ್ಥಕ್ಯ ಮೆರೆದವರು. ಹಿಂದೂ ವಿಚಾರಧಾರೆಗಳಿಗೆ ಬದ್ಧರಾಗಿದ್ದ ಅವರು ಪಕ್ಷದ ಮೇಲೆ ಅಚಲ ನಿಷ್ಠೆಯನ್ನು ಹೊಂದಿದ್ದರು. ಪಕ್ಷಕ್ಕೆ, ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದರು ಎಂದು ನಳಿನ್‌ ಸ್ಮರಿಸಿದರು.

ಯಕ್ಷಗಾನ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿರುವ ಶ್ರೇಷ್ಠ ಕಲಾವಿದ ಸುಂದರ ರಾವ್‌ ಅವರು ಶಾಸಕರಾಗಿಯೂ ಕ್ಷೇತ್ರದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡು ಸೇವೆ ನೀಡಿದ್ದರು ಎಂದು ಕಾಮತ್‌ ಹೇಳಿದರು.

ಯಕ್ಷಗಾನ ರಂಗದ ಮೇರುಕಲಾವಿದರಾದ ಸುಂದರ ರಾಯರು ಶಾಸಕರಾಗಿ, ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಅನನ್ಯ ಕೊಡುಗೆ ನೀಡಿದ್ದಾರೆ. ಅಪಾರ ಅಭಿಮಾನಿ ಬಳಗ, ದೊಡ್ಡ ಸ್ನೇಹಿತವರ್ಗವನ್ನು ಹೊಂದಿದ್ದರು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂದು ಭಂಡಾರಿ ಪ್ರಾರ್ಥಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.